ಆ್ಯಪ್ನಗರ

ಪಾಂಡವಪುರ: ವಕೀಲರ ಪ್ರತಿಭಟನೆ

ವಿಕ ಸುದ್ದಿಲೋಕ ಪಾಂಡವಪುರ ಕೇಂದ್ರ ಸರಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಖಂಡಿಸಿ ಪಟ್ಟಣದಲ್ಲಿ ಬುಧವಾರ ವಕೀಲರು ಕೋರ್ಟ್‌ ಕಲಾಪದಿಂದ ಹೊರಗುಳಿದು ಪ್ರತಿಭಟನೆ ...

Vijaya Karnataka 28 Jun 2018, 5:00 am
ಪಾಂಡವಪುರ: ಕೇಂದ್ರ ಸರಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಖಂಡಿಸಿ ಪಟ್ಟಣದಲ್ಲಿ ಬುಧವಾರ ವಕೀಲರು ಕೋರ್ಟ್‌ ಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು.
Vijaya Karnataka Web pandavapura a lawyers protest
ಪಾಂಡವಪುರ: ವಕೀಲರ ಪ್ರತಿಭಟನೆ


ಪಟ್ಟಣದ ಜೆಎಂಎಫ್‌ಸಿ ಕೋರ್ಟ್‌ ಕಲಾಪದಿಂದ ಹೊರಗುಳಿದ ವಕೀಲಕರು ಅಧ್ಯಕ್ಷ ಕೆ.ಎಚ್‌.ರಾಮೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಕೇಂದ್ರ ಸರಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿ ಕರ್ನಾಟಕ ತಮ್ಮ ಬೆಳೆ ಪದ್ಧತಿಯನ್ನು ಬದಲಾಯಿಸಿಕೊಳ್ಳಬೇಕು ಎಂದು ಕಾವೇರಿ ಜಲಾಯನ ಪ್ರದೇಶಕ್ಕೆ ಸೂಚಿಸಿರುವುದು ಸರಿಯಲ್ಲ. ಆ ಮೂಲಕ ಕೇಂದ್ರ ಸರಕಾರ ಕರ್ನಾಟಕ ರಾಜ್ಯದ ರೈತರಿಗೆ ದ್ರೋಹ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಬೆಳೆಗಳ ಪದ್ಧತಿ ಕುರಿತು ನಿರ್ಧಾರ ಮಾಡುವವರು ಆ ಭಾಗದ ರೈತರು ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯನ್ನು ಹಿಂಪಡೆದು ರಾಜ್ಯದ ರೈತರನ್ನು ರಕ್ಷ ಣೆ ಮಾಡಬೇಕು ಎಂದು ಒತ್ತಾಯಿಸಿದರು. ವಕೀಲರ ಸಂಘದ ತಾಲೂಕು ಅಧ್ಯಕ್ಷ ಕೆ.ಎಚ್‌.ರಾಮೇಗೌಡ, ಕಾರ‍್ಯದರ್ಶಿ ಸಿ.ಎನ್‌.ಧನಂಜಯ್‌, ಖಜಾಂಚಿ ಗುರುಮೂರ್ತಿ, ವಕೀಲರಾದ ತಿಮ್ಮಯ್ಯಗೌಡ, ಶ್ರೀಧರ್‌ಮೂರ್ತಿ, ಎಸ್‌.ರೇವಣ್ಣ, ಕೆ.ಎಸ್‌.ಮನು, ಕೃಷ್ಣಮೂರ್ತಿ, ಕೆ.ಕಾಳೇಗೌಡ, ಕೆ.ಎಸ್‌.ಮೋಹನ್‌ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ