ಆ್ಯಪ್ನಗರ

ಕಬ್ಬಿನ ಬಾಕಿ ಹಣ ತಕ್ಷಣ ಪಾವತಿಗೆ ಸೂಚನೆ

ವಿಕ ಸುದ್ದಿಲೋಕ ಮಂಡ್ಯ ರೈತರ ಶ್ರಮದ ಫಲವಾಗಿ ಕಾರ್ಖಾನೆಗಳಿಗೆ ಸಾಕಷ್ಟು ಕಬ್ಬು ಪೂರೈಕೆ ಆಗುತ್ತಿದ್ದು, ಕಾರ್ಖಾನೆಗಳು ಇದನ್ನು ಮನಗಂಡು ಕಬ್ಬು ಪೂರೈಸಿದ ರೈತರಿಗೆ ತಕ್ಷಣ ಬಾಕಿ ...

Vijaya Karnataka 8 Nov 2018, 5:00 am
ಮಂಡ್ಯ: ರೈತರ ಶ್ರಮದ ಫಲವಾಗಿ ಕಾರ್ಖಾನೆಗಳಿಗೆ ಸಾಕಷ್ಟು ಕಬ್ಬು ಪೂರೈಕೆ ಆಗುತ್ತಿದ್ದು, ಕಾರ್ಖಾನೆಗಳು ಇದನ್ನು ಮನಗಂಡು ಕಬ್ಬು ಪೂರೈಸಿದ ರೈತರಿಗೆ ತಕ್ಷಣ ಬಾಕಿ ಹಣವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ ಸೂಚಿಸಿದರು.
Vijaya Karnataka Web pay balance of sugarcane growers says mandya dc
ಕಬ್ಬಿನ ಬಾಕಿ ಹಣ ತಕ್ಷಣ ಪಾವತಿಗೆ ಸೂಚನೆ


ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಯ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಖಾನೆಗಳು ರೈತರ ನೋವಿಗೆ ಸ್ಪಂದಿಸಬೇಕು. ಕಾರ್ಖಾನೆಗಳು ಕಬ್ಬಿನ ಬಾಕಿ ಹಣ ಉಳಿಸಿಕೊಂಡಿರುವುದರಿಂದ ಒಂದು ತಿಂಗಳ ಒಳಗಾಗಿ ಪಾವತಿಗೆ ಕ್ರಮವಹಿಸಬೇಕು ಇಲ್ಲದಿದ್ದರೆ ಬಾಕಿ ಉಳಿಸಿಕೊಂಡ ಕಾರ್ಖಾನೆಗಳ ದಾಸ್ತನಿನಲ್ಲಿರುವ ಸಕ್ಕರೆಯನ್ನು ಜಪ್ತಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಚಾಮುಂಡೇಶ್ವರಿ ಷುಗರ್‌ ಕಾರ್ಖಾನೆಯು 33.81 ಕೋಟಿ ರೂ., ಎನ್‌.ಎಸ್‌.ಎಲ್‌, ಕೊಪ್ಪ ಸಕ್ಕರೆ ಕಾರ್ಖಾನೆಯು 67.06 ಕೋಟಿ ರೂ., ಐ.ಸಿ.ಎಲ್‌ ಷುಗರ್ಸ್‌, ಮಾಕವಳ್ಳಿ ಕಾರ್ಖಾನೆಯು 17.60 ಕೋಟಿ ರೂ. ಹಾಗೂ ಮೈಷುಗರ್‌ ಕಾರ್ಖಾನೆಯು 7.64 ಕೋಟಿ ಸೇರಿದಂತೆ ಒಟ್ಟು 126.11 ಕೋಟಿ ರೂ. ಕಬ್ಬಿನ ಬಾಕಿ ಹಣವನ್ನು ರೈತರಿಗೆ ಪಾವತಿಸಬೇಕಾಗಿದ್ದು ತಕ್ಷಣವೇ ಸಕ್ಕರೆ ಕಾರ್ಖಾನೆಗಳು ಪಾವತಿಗೆ ಅಗತ್ಯ ಕ್ರಮವಸಬೇಕು ಎಂದು ಹೇಳಿದರು.

ಸಕ್ಕರೆ ಕಾರ್ಖಾನೆಯವರು ರೈತರ ಕಷ್ಟಕ್ಕೆ ಸ್ಪಂದಿಸಬೇಕು. ಅಲ್ಲದೆ ರೈತರ ಹಿತದೃಷ್ಠಿಯಿಂದ ಕಬ್ಬಿನ ಬಾಕಿ ಹಣವನ್ನು ತಿಂಗಳ ಒಳಗಾಗಿ ಪಾವತಿ ಮಾಡಬೇಕು. ಇಲ್ಲದಿದ್ದರೆ ಸಕ್ಕರೆ ಜಪ್ತಿಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕಿ ಕುಮುದಾ ಹಾಗೂ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ