ಕ್ಯಾಂಟರ್ ಹರಿದು ವ್ಯಕ್ತಿ ಸಾವು
ಕ್ಯಾಂಟರ್ ಹರಿದು ಬಸ್ಗಾಗಿ ಕಾಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಹುಲಿಗೆರೆಪುರ ಗೇಟ್ ಬಳಿ ಶನಿವಾರ ಸಂಜೆ ನಡೆದಿದೆ. ತಾಲೂಕಿನ ಹುಲಿಗೆರೆಪುರ ಗ್ರಾಮದ ನಿವಾಸಿ ಚಿಕ್ಕಯ್ಯ (55) ಮೃತರು. ಇವರು ಕಾರ್ಯನಿಮಿತ್ತ ಮದ್ದೂರಿಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
Vijaya Karnataka 29 Jul 2019, 5:00 am
ಮದ್ದೂರು : ಕ್ಯಾಂಟರ್ ಹರಿದು ಬಸ್ಗಾಗಿ ಕಾಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಹುಲಿಗೆರೆಪುರ ಗೇಟ್ ಬಳಿ ಶನಿವಾರ ಸಂಜೆ ನಡೆದಿದೆ.
ತಾಲೂಕಿನ ಹುಲಿಗೆರೆಪುರ ಗ್ರಾಮದ ನಿವಾಸಿ ಚಿಕ್ಕಯ್ಯ (55) ಮೃತರು. ಇವರು ಕಾರ್ಯನಿಮಿತ್ತ ಮದ್ದೂರಿಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಮದ್ದೂರು-ಮಳವಳ್ಳಿ ಮಾರ್ಗದ ಹುಲಿಗೆರೆಪುರ ಗೇಟ್ ಬಳಿ ಮದ್ದೂರಿಗೆ ಆಗಮಿಸಲು ಚಿಕ್ಕಯ್ಯ ಬಸ್ ನಿಲ್ದಾಣದ ಬಳಿ ನಿಂತಿದ್ದ ವೇಳೆ ಮಳವಳ್ಳಿ ಕಡೆಯಿಂದ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ತೀವ್ರ ಅಸ್ವಸ್ಥಗೊಂಡಿದ್ದ ಚಿಕ್ಕಯ್ಯ ಅವರನ್ನು ಮಂಡ್ಯದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಿದ್ದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಾಲೂಕಿನ ಹುಲಿಗೆರೆಪುರ ಗ್ರಾಮದ ನಿವಾಸಿ ಚಿಕ್ಕಯ್ಯ (55) ಮೃತರು. ಇವರು ಕಾರ್ಯನಿಮಿತ್ತ ಮದ್ದೂರಿಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಮದ್ದೂರು-ಮಳವಳ್ಳಿ ಮಾರ್ಗದ ಹುಲಿಗೆರೆಪುರ ಗೇಟ್ ಬಳಿ ಮದ್ದೂರಿಗೆ ಆಗಮಿಸಲು ಚಿಕ್ಕಯ್ಯ ಬಸ್ ನಿಲ್ದಾಣದ ಬಳಿ ನಿಂತಿದ್ದ ವೇಳೆ ಮಳವಳ್ಳಿ ಕಡೆಯಿಂದ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ತೀವ್ರ ಅಸ್ವಸ್ಥಗೊಂಡಿದ್ದ ಚಿಕ್ಕಯ್ಯ ಅವರನ್ನು ಮಂಡ್ಯದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಿದ್ದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.