ಆ್ಯಪ್ನಗರ

ಜವಳಿ ಕ್ಷೇತ್ರ ಅಭಿವೃದ್ಧಿಗೆ ಯೋಜನೆ

ಭಾರತದಲ್ಲಿ ಕೃಷಿ ಹಾಗೂ ಜವಳಿ ಕ್ಷೇತ್ರ ದೊಡ್ಡ ಕ್ಷೇತ್ರಗಳಾಗಿವೆ. ಜವಳಿ ಕ್ಷೇತ್ರವಿಲ್ಲದೆ ಸಮಾಜ ಮುನ್ನಡೆಯಲು ಸಾಧ್ಯವಿಲ್ಲ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ಆರ್.ಲಿಂಗರಾಜು ಅಭಿಪ್ರಾಯಪಟ್ಟರು.

Vijaya Karnataka 4 Aug 2019, 7:40 pm
ಮಂಡ್ಯ: ಭಾರತದಲ್ಲಿ ಕೃಷಿ ಹಾಗೂ ಜವಳಿ ಕ್ಷೇತ್ರ ದೊಡ್ಡ ಕ್ಷೇತ್ರಗಳಾಗಿವೆ. ಜವಳಿ ಕ್ಷೇತ್ರವಿಲ್ಲದೆ ಸಮಾಜ ಮುನ್ನಡೆಯಲು ಸಾಧ್ಯವಿಲ್ಲ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ಆರ್.ಲಿಂಗರಾಜು ಅಭಿಪ್ರಾಯಪಟ್ಟರು.
Vijaya Karnataka Web MDY-MDY3N8


ನಗರದಲ್ಲಿನ ಮಂಡ್ಯ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿ.ಪಂ., ಕೈಮಗ್ಗ ಮತ್ತು ಜವಳಿ ಇಲಾಖೆಯು ಜವಳಿ ಉದ್ದಿಮೆದಾರರಿಗೆ, ನೇಕಾರ ರು ಮತ್ತು ಸಾರ್ವಜನಿಕರಿಗೆ ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ‌್ಯಕ್ರಮದಲ್ಲಿ ಮಾತನಾಡಿದರು.

‘‘ಸರಕಾರ ಹಿಂದುಳಿದ ಪ್ರದೇಶಗಳನ್ನು ಗುರಿ ಯಾಗಿಸಿ ಕೊಂಡು ಪ್ರಾದೇಶಿಕವಾಗಿ ಸ್ವಯಂ ಉದ್ಯೋಗ ಸೃಷ್ಟಿಸಲು ಹಲವಾರು ಅಭಿವೃದ್ಧಿ ಕಾರ‌್ಯಕ್ರಮಗಳನ್ನು ಜಾರಿಗೊಳಿಸಿದೆ. ಇಲಾಖೆ ಯಿಂದ 45 ದಿನಗಳ ಕಾಲ ಆಸಕ್ತ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ. ಉದ್ಯೋಗ ಅರಸಿ ನಗರಕ್ಕೆ ಹೋಗುವ ಬದಲು ಗ್ರಾಮಾಂತರ ಪ್ರದೇಶಗಳಲ್ಲಿ ಸಣ್ಣ ಕೈಗಾರಿಕೆಗಳನ್ನು ಹಾಗೂ ಗುಡಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರಕಾರದಿಂದ ಅನುದಾನ ನೀಡಲಾಗುತ್ತದೆ. ಗ್ರಾಮಾಂತರ ಪ್ರದೇಶದಲ್ಲಿ ಗುಡಿ ಕೈಗಾರಿಕೆಗಳನ್ನು ಪ್ರಾರಂಭಿ ಸುವವರಿಗೆ ಶೇ.50ರಷ್ಟು ಸಬ್ಸಿಡಿ ದೊರೆಯಲಿದೆ,’’ ಎಂದು ಹೇಳಿದರು.

‘‘ಕೈಗಾರಿಕೆ ಪ್ರಾರಂಭಿಸಲು ಬೇಕಾಗಿರುವ ತರಬೇತಿ, ಮಾಹಿತಿ, ಅಂದಾಜು ವೆಚ್ಚ ಕುರಿತಾದ ಎಲ್ಲ ಮಾಹಿತಿಗಳನ್ನು ಕೈಮಗ್ಗ ಜವಳಿ ಇಲಾಖೆ ಯಿಂದ ನೀಡಲಾಗುತ್ತಿದೆ. ಇದರ ಸದುಪ ಯೋಗವನ್ನು ಸ್ವಯಂ ಉದ್ಯೋಗಿಗಳು ಸದು ಪಯೋಗ ಪಡಿಸಿಕೊಳ್ಳಬೇಕೆಂಬ ಆಶಯದಿಂದ ಈ ತರಬೇತಿ ಶಿಬಿರ ಆಯೋಜಿಸಲಾಗಿದೆ. ಹೆಚ್ಚು ಹಳ್ಳಿ ಗಳಲ್ಲಿ ಉದ್ಯೋಗ ಪ್ರಾರಂಭಿಸಲು ಮುಖ್ಯಮಂತ್ರಿ ರೋಜ್‌ಗಾರ್ ಯೋಜನೆ ಹಾಗೂ ಪ್ರಧಾನ ಮಂತ್ರಿ ರೋಜ್ಗಾರ್ ಯೋಜನೆಯಿಂದ ಹಲವಾರು ರೀತಿ ಯ ಸಹಾಯಧನ ನೀಡಲಾಗುತ್ತಿದೆ,’’ ಎಂದರು.

ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು ಎಂ.ಎನ್.ಮುರಳೇಶ್ ಮಾತನಾಡಿ, ‘‘ಕೈಗಾರಿಕೆ ಪ್ರಾರಂಭಿಸಲು ಮುಖ್ಯವಾಗಿ ಬೇಕಾಗಿರುವುದು ಬಂಡವಾಳ. ಸರಕಾರವು ಪ್ರೋತ್ಸಾಹಧನ ನೀಡುವ ಮೂಲಕ ಕೈಗಾರಿಕೆಗಳನ್ನು ಪ್ರಾರಂಭಿಸಲು ಗುಡಿ ಕೈಗಾರಿಕೆಗಳು ಸಣ್ಣ ಕೈಗಾರಿಕೆಗಳನ್ನು ಬಗ್ಗೆ ಮಾಹಿತಿ ನೀಡುತ್ತದೆ. ಕೈಗಾರಿಕೆ ಪ್ರಾರಂಭಿಸಲು ಬೇಕಾಗಿರುವ ಯೋಜನಾ ವರದಿಯನ್ನು ಸಿದ್ಧಪಡಿಸಲು ಒಂದು ವರ್ಷದಿಂದ ನಮ್ಮ ಇಲಾಖೆಯಲ್ಲಿ ಮಾಹಿತಿ ನೀಡಲಾಗುತ್ತಿದೆ,’’ ಎಂದು ತಿಳಿಸಿದರು.

ತಾ.ಪಂ. ಇಒ ಎಂ.ಗಂಗಣ್ಣ ಅಧ್ಯಕ್ಷತೆ ವಹಿಸಿದ್ದರು. ಮಂಡ್ಯ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಪ್ರಧಾನ ಕಾರ್ಯದರ್ಶಿ ವಿಜಯ ಬ್ಯಾಂಕ್ ಕದರಪ್ಪ, ಜಿಲ್ಲಾ ಉದ್ಯೋಗಾಧಿಕಾರಿ ಶಿವಮೂರ್ತಿ, ಕಾರ್ಮಿಕ ಅಧಿಕಾರಿ ನಾಗೇಂದ್ರ ಇತರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ