ಆ್ಯಪ್ನಗರ

ಮೇಕೆದಾಟು ಅಣೆಕಟ್ಟು ಕಟ್ಟಲು ಸಿದ್ಧತೆ ಶುರು: ಡಿಕೆಶಿ

ಮೇಕೆದಾಟು ಅಣೆಕಟ್ಟು ಕಟ್ಟಲು ಸಿದ್ಧತೆ ಮಾಡಿಕೊಂಡಿದ್ದು, ಅಣ್ಣೆಕಟ್ಟು ನಿರ್ಮಾಣ ಮಾಡುವುದರಿಂದ ನೀರಿನ ಅಭಾವ ಉಂಟಾದ ಸಂದರ್ಭಗಳಲ್ಲಿ ಅನುಕೂಲವಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದರು.

Vijaya Karnataka 25 Jul 2018, 7:56 am
ಮಂಡ್ಯ: ಮೇಕೆದಾಟು ಅಣೆಕಟ್ಟು ಕಟ್ಟಲು ಸಿದ್ಧತೆ ಮಾಡಿಕೊಂಡಿದ್ದು, ಅಣ್ಣೆಕಟ್ಟು ನಿರ್ಮಾಣ ಮಾಡುವುದರಿಂದ ನೀರಿನ ಅಭಾವ ಉಂಟಾದ ಸಂದರ್ಭಗಳಲ್ಲಿ ಅನುಕೂಲವಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದರು.
Vijaya Karnataka Web preparing to build mekedatu dam dk shivakumar
ಮೇಕೆದಾಟು ಅಣೆಕಟ್ಟು ಕಟ್ಟಲು ಸಿದ್ಧತೆ ಶುರು: ಡಿಕೆಶಿ


ಮಂಡ್ಯ ತಾಲೂಕಿನ ಸಿದ್ದಯ್ಯನಕೊಪ್ಪಲು ಗ್ರಾಮದಲ್ಲಿ ಇತ್ತೀಚಿಗೆ ಟ್ಯಾಕ್ಟರ್‌ ಮಗುಚಿ ಮೃತಪಟ್ಟಿದ್ದ ನಿವೃತ್ತ ಡಿಸಿ ನಾಗರಾಜು ಅವರ ತಿಥಿ ಕಾರ‍್ಯದಲ್ಲಿ ಮಂಗಳವಾರ ಭಾಗಿಯಾಗಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಕಳೆದ ಸರಕಾರದ ಅವಧಿಯಲ್ಲಿ ಮೇಕೆದಾಟು ಅಣೆಕಟ್ಟೆ ಕಟ್ಟುವ ಬಗ್ಗೆ ನಿರ್ಧಾರವಾಗಿದೆ. ನಮಗೆ ಅಣೆಕಟ್ಟು ನಿರ್ಮಾಣದಿಂದ ಕುಡಿಯೋ ನೀರಿಗಷ್ಟೆ ಅನುಕೂಲವಾಗಲಿದೆ. ಉಳಿದ ನೀರು ತಮಿಳುನಾಡಿಗೆ ಬಿಡಲಾಗುತ್ತದೆ,'' ಎಂದು ತಿಳಿಸಿದರು.

''ನೀರು ಅಮೂಲ್ಯವಾಗಿದ್ದು, ಜಿಲ್ಲೆಯ ರೈತರು ಬೇಸಾಯ ಪದ್ದತಿಯನ್ನು ಬದಲಾವಣೆ ಮಾಡಿಕೊಳ್ಳಬೇಕು. ರಾಯಚೂರು ಕಡೆ ಹೊಸ ತಳಿಯ ಭತ್ತ ಬೆಳೆಯಲಾಗುತ್ತಿದೆ. ಆ ಭತ್ತದ ತಳಿಯನ್ನು ಮಂಡ್ಯದಲ್ಲಿ ಉಪಯೋಗಿಸಿ ಬೆಳೆಯುವುದರಿಂದ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು,'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ