ಆ್ಯಪ್ನಗರ

ದೇಗುಲ ಆವರಣದಲ್ಲೇ ಕುಸಿದು ಅರ್ಚಕ ಸಾವು

ಶ್ರೀರಂಗಪಟ್ಟಣ: ಪಟ್ಟಣದ ಶ್ರೀ ಕೋದಂಡರಾಮ ದೇವಾಲಯದ ಪ್ರಧಾನ ಅರ್ಚಕ ಪೂರ್ಣಯ್ಯ ಬೀದಿ ನಿವಾಸಿ ರಾಮಣ್ಣ (59) ಶುಕ್ರವಾರ ನಿಧನರಾದರು.

Vijaya Karnataka 4 Aug 2018, 5:00 am
ಶ್ರೀರಂಗಪಟ್ಟಣ: ಪಟ್ಟಣದ ಶ್ರೀ ಕೋದಂಡರಾಮ ದೇವಾಲಯದ ಪ್ರಧಾನ ಅರ್ಚಕ ಪೂರ್ಣಯ್ಯ ಬೀದಿ ನಿವಾಸಿ ರಾಮಣ್ಣ (59) ಶುಕ್ರವಾರ ನಿಧನರಾದರು.
Vijaya Karnataka Web priest death in the temple premises
ದೇಗುಲ ಆವರಣದಲ್ಲೇ ಕುಸಿದು ಅರ್ಚಕ ಸಾವು


ಶುಕ್ರವಾರ ಎಂದಿನಂತೆ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ ಬಳಿಕ ಮನೆಗೆ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತವಾಗಿ ದೇವಾಲಯದ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಪೂರ್ಣಯ್ಯ ಅವರು ದೇವಾಲಯದಲ್ಲಿ 30ಕ್ಕೂ ಹೆಚ್ಚು ವರ್ಷಗಳಿಂದ ಪ್ರಧಾನ ಅರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಮಣ್ಣ ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಶನಿವಾರ ಪಟ್ಟಣದ ಶಂಭುಲಿಂಗಯ್ಯನ ಕಟ್ಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ