ಆ್ಯಪ್ನಗರ

ಮಂಡ್ಯ: ದೇವಾಲಯದಲ್ಲೇ ಕುಸಿದು ಬಿದ್ದು ಮೃತಪಟ್ಟ ಪೂಜಾರಿ

ಶುಕ್ರವಾರವೂ ಮಧ್ಯಾಹ್ನ ದೇವಾಲಯಕ್ಕೆ ಆಗಮಿಸಿ ಪೂಜೆ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹೃದಯಾಘಾತ ಅಥವಾ ಕಡಿಮೆ ರಕ್ತದೊತ್ತಡದಿಂದ ಚಂದ್ರು ಅವರು ಮೃತಪಟ್ಟಿರಬಹುದು ಎನ್ನಲಾಗಿದೆ.

Vijaya Karnataka Web 31 Jul 2020, 10:24 pm
ಮಂಡ್ಯ: ತಾಲೂಕಿನ ಮಂಗಲ ಗ್ರಾಮದಲ್ಲಿ ವರಮಹಾಲಕ್ಷ್ಮಿಹಬ್ಬದ ದಿನವಾದ ಶುಕ್ರವಾರ ದೇವಾಲಯದಲ್ಲಿ ಪೂಜೆ ಮಾಡುತ್ತಿರುವಾಗಲೇ ಅರ್ಚಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ


ತಾಲೂಕಿನ ಸಂತೆಕಸಲಗೆರೆ ಗ್ರಾಮದ ನಿವಾಸಿ, ಅರ್ಚಕ ಚಂದ್ರು (44) ಮೃತ ವ್ಯಕ್ತಿ. ಈತ ಪ್ರತಿನಿತ್ಯ ಸಂತೆಕಸಲಗೆರೆ ಗ್ರಾಮದಿಂದ ಮಂಗಲ ಗ್ರಾಮಕ್ಕೆ ಆಗಮಿಸಿ ಶ್ರೀಮಲ್ಲೇಶ್ವರಸ್ವಾಮಿ ದೇವಾಲಯದಲ್ಲಿ ಪೂಜಾ ಕೈಂಕರ್ಯ ನೆರವೇರಿಸುತ್ತಿದ್ದರು.

ಅದೇ ರೀತಿ ಶುಕ್ರವಾರವೂ ಮಧ್ಯಾಹ್ನ ದೇವಾಲಯಕ್ಕೆ ಆಗಮಿಸಿ ಪೂಜೆ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹೃದಯಾಘಾತ ಅಥವಾ ಕಡಿಮೆ ರಕ್ತದೊತ್ತಡದಿಂದ ಚಂದ್ರು ಅವರು ಮೃತಪಟ್ಟಿರಬಹುದು ಎನ್ನಲಾಗಿದೆ.

13 ವರ್ಷದ ಹಿಂದೆಯೇ ಮದುವೆಯಾಗಿದ್ದ ಇವರಿಗೆ ಮಕ್ಕಳಾಗಿರಲಿಲ್ಲ. ಈ ಕೊರಗಿನಲ್ಲೇ ಇದ್ದ ದಂಪತಿಯು ಮಗುವೊಂದನ್ನು ದತ್ತು ತೆಗೆದುಕೊಳ್ಳುವ ಆಲೋಚನೆಯಲ್ಲಿದ್ದರು. ಆದರೆ, ಆ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಚಂದ್ರು ಅಸುನೀಗಿದ್ದಾರೆ.

ಮೃತರಿಗೆ ಪತ್ನಿ ಹಾಗೂ ಐವರು ಸೋದರಿಯರು ಇದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ