Please enable javascript.ಮಳವಳ್ಳಿ: ಪೌರ ಕಾರ್ಮಿಕರ ಪ್ರತಿಭಟನೆ - Print: Civic workers protest - Vijay Karnataka

ಮಳವಳ್ಳಿ: ಪೌರ ಕಾರ್ಮಿಕರ ಪ್ರತಿಭಟನೆ

ವಿಕ ಸುದ್ದಿಲೋಕ 13 Jun 2017, 4:00 am
Subscribe

ವಿಕ ಸುದ್ದಿಲೋಕ ಮಳವಳ್ಳಿ ಕೆಲಸ ಕಾಯಂಗೊಳಿಸುವಂತೆ ಆಗ್ರಹಿಸಿ ಪುರಸಭೆಯ ಗುತ್ತಿಗೆ ಪೌರಕಾರ್ಮಿಕರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು...

print civic workers protest
ಮಳವಳ್ಳಿ: ಪೌರ ಕಾರ್ಮಿಕರ ಪ್ರತಿಭಟನೆ

ಮಳವಳ್ಳಿ: ಕೆಲಸ ಕಾಯಂಗೊಳಿಸುವಂತೆ ಆಗ್ರಹಿಸಿ ಪುರಸಭೆಯ ಗುತ್ತಿಗೆ ಪೌರಕಾರ್ಮಿಕರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಪುರಸಭೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಡಾ.ಬಿ.ಆರ್‌.ಅಂಬೇಡ್ಕರ್‌ ಗುತ್ತಿಗೆ ಪೌರ ಕಾರ್ಮಿಕರ ಸಂಘದ ಪೌರಕಾರ್ಮಿಕರು, ಸರಕಾರ ಶೀಘ್ರದಲ್ಲೇ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಕೆ.ನಾಗರಾಜು ಮಾತನಾಡಿ, 15 ವರ್ಷಗಳಿಂದ ಪೌರ ಕಾರ್ಮಿಕರಾಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದು, ಕಳೆದ ಚುನಾವಣೆ ಸಂದರ್ಭದಲ್ಲಿ ಸರಕಾರ ಕಾಯಂಗೊಳಿಸುವುದಾಗಿ ಭರವಸೆ ನೀಡಿದ್ದರೂ ಇದುವರೆಗೂ ಈಡೇರಿಲ್ಲ. ಈ ಕೂಡಲೇ ಕಾಯಂಗೊಳಿಸಬೇಕು. ಇಲ್ಲದಿದ್ದರೆ ಮತ್ತಷ್ಟು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕಾರ್ಯದರ್ಶಿ ಮಾದೇಶ್‌, ಸದಸ್ಯೆ ಮೆಹಬೂಬ್‌ ಪಾಷಾ, ಮಾಜಿ ಪುರಸಭಾಧ್ಯಕ್ಷ ಗಂಗರಾಜೇಅರಸು ಸೇರಿದಂತೆ ಎಲ್ಲಾ ಗುತ್ತಿಗೆ ನೌಕರರು ಭಾಗವಹಿಸಿದ್ದರು.

ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ