* ಗ್ರಾಮೀಣ ಸರಕಾರಿ ಶಾಲಾ ಮಕ್ಕಳಿಗಾಗಿ 2 ತಿಂಗಳು ರಸಪ್ರಶ್ನೆ ಸ್ಪರ್ಧೆ
* ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಉತ್ತೇಜಿಸುವ ಉದ್ದೇಶ
ನವೀನ್ ಮಂಡ್ಯ
ಮಂಡ್ಯದ ಖಾಸಗಿ ವಿದ್ಯಾ ಸಂಸ್ಥೆಯೊಂದು ಗ್ರಾಮೀಣ ಪ್ರದೇಶದ ಅದರಲ್ಲೂ ಸರಕಾರಿ ಶಾಲೆಯ ಮಕ್ಕಳ ಶೈಕ್ಷಣಿಕ ಅಭ್ಯುದಯ ದೃಷ್ಟಿಯಿಂದ 'ಧಿನಮ್ಮ ನಡಿಗೆ ಸರಕಾರಿ ಶಾಲೆ ಕಡೆಗೆ' ಘೋಷಣೆಯಡಿ ವಿನೂತನ 'ರಸಪ್ರಶ್ನೆ ಸ್ಪರ್ಧೆ' ಕಾರ್ಯಕ್ರಮ ರೂಪಿಸಿದೆ.
ಗ್ರಾಮೀಣ ವಿದ್ಯಾರ್ಥಿಗಳ ಬುದ್ಧಿಮತ್ತೆ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಆಸಕ್ತಿ ಬೆಳೆಸುವ ದೃಷ್ಟಿಯಿಂದ ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಲು ಯೋಜನೆ ರೂಪಿಸಿದೆ. ಎರಡು ತಿಂಗಳ ಹಿಂದೆ ಮಂಡ್ಯ ಜಿಲ್ಲೆಯ ಪ್ರೌಢಶಾಲಾ ಮಕ್ಕಳಿಗಾಗಿ 'ಧಿಮಂಡ್ಯದ ಲಕ್ಷಾಧಿಪತಿ' ರಸಪ್ರಶ್ನೆ ಸ್ಪರ್ಧೆ ಆಯೋಜಿಸುವ ಮೂಲಕ ಗಮನ ಸೆಳೆದಿದ್ದ ಸಂತೋಷ್ ಎಜುಕೇಷನ್ ಟ್ರಸ್ಟ್, ಇದೀಗ ಜಿಲ್ಲೆಯ ಎಲ್ಲ ಸರಕಾರಿ ಶಾಲೆಗಳಲ್ಲಿ ಶಾಲಾ ಹಂತದಲ್ಲೇ ರಸಪ್ರಶ್ನೆ ಸ್ಪರ್ಧೆ ನಡೆಸಲು ನಿರ್ಧರಿಸಿದೆ.
ಫೈವ್ ಸ್ಟಾರ್ ಸಿಇಟಿ/ನೀಟ್ ತಂಡ, ಸಂತೋಷ್ ಕೋಚಿಂಗ್ ಸೆಂಟರ್ ಸಹಯೋಗದಲ್ಲಿ 'ಧಿನಮ್ಮ ನಡಿಗೆ ಸರಕಾರಿ ಶಾಲೆ ಕಡೆಗೆ' ಘೋಷಣೆಯಡಿ ಶಾಲಾ ಹಂತದ ರಸಪ್ರಶ್ನೆ ಸ್ಪರ್ಧೆ ನಡೆಸಲು ಯೋಜನೆ ಹಾಕಿಕೊಂಡಿದೆ. ಅ.26ರಿಂದ ಸತತವಾಗಿ ಎರಡು ತಿಂಗಳು ಸ್ಪರ್ಧೆಗಳನ್ನು ನಡೆಸಲಾಗುವುದು. ರಸಪ್ರಶ್ನೆ ಸ್ಪರ್ಧೆಯೊಂದಿಗೆ ನವೆಂಬರ್ನಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿದೆ.
ಸ್ಪರ್ಧೆ ಹೇಗೆ ನಡೆಯಲಿದೆ?: ಎರಡು ತಿಂಗಳು ಜಿಲ್ಲೆಯ ಎಲ್ಲ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಸಲಾಗುತ್ತಿದೆ. ಒಂದು ವಾರ ಮೊದಲೇ ಸ್ಪರ್ಧೆ ಬಗ್ಗೆ ಸಂಬಂಧಿಸಿದ ಶಾಲೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುತ್ತದೆ. ಈ ಸಮಯದಲ್ಲಿ ಶಾಲೆಯ ಶಿಕ್ಷಕರು ಮಕ್ಕಳನ್ನು ಸ್ಪರ್ಧೆಗೆ ಸಜ್ಜುಗೊಳಿಸಲಿದ್ದಾರೆ. ಸ್ಪರ್ಧೆಯ ದಿನದಂದು ಸಂತೋಷ್ ಎಜುಕೇಷನ್ ಟ್ರಸ್ಟ್, ಫೈವ್ ಸ್ಟಾರ್ ಸಿಇಟಿ/ನೀಟ್ ತಂಡ, ಸಂತೋಷ್ ಕೋಚಿಂಗ್ ಸೆಂಟರ್ನ ಪ್ರತಿನಿಧಿಗಳು ನಿಗದಿತ ಶಾಲೆಗೆ ತೆರಳಿ ಸ್ಪರ್ಧಾ ಪ್ರಕ್ರಿಯೆಗಳನ್ನು ನಡೆಸಲಿದ್ದಾರೆ.
ಕನ್ನಡ ಸಾಹಿತ್ಯ, ವಿಜ್ಞಾನ, ಚಲನಚಿತ್ರ, ಕ್ರೀಡೆ, ಪ್ರಚಲಿತ ವಿದ್ಯಮಾನಗಳು ಹಾಗೂ ಮಂಡ್ಯ ಜಿಲ್ಲೆ ಬಗ್ಗೆ ರಸಪ್ರಶ್ನೆ ಸ್ಪರ್ಧೆಗಾಗಿ ಪ್ರಶ್ನೆಗಳನ್ನು ಸಿದ್ಧಪಡಿಸಲಾಗುತ್ತದೆ. ವಿಜೇತ ಮಕ್ಕಳಿಗೆ ಸ್ಥಳದಲ್ಲೇ ನಗದು ಬಹುಮಾನ, ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆ ನೀಡಲಾಗುತ್ತಿದೆ ಎನ್ನುತ್ತಾರೆ ಸಂತೋಷ್ ಎಜುಕೇಷನ್ ಟ್ರಸ್ಟ್ ಮುಖ್ಯಸ್ಥ ಬಿ.ಸಂತೋಷ್. ಸಂತೋಷ್ ಕೋಚಿಂಗ್ ಸೆಂಟರ್ನಲ್ಲಿ ಕಲಿತು ರಾಜ್ಯದ ಬೇರೆ ಬೇರೆ ಸ್ಥಳಗಳಲ್ಲಿ ಉದ್ಯೋಗ ಮಾಡುತ್ತಿರುವ ವೈದ್ಯರು, ಟೆಕ್ಕಿಗಳು ಹಾಗೂ ಶಿಕ್ಷಕರು ಸ್ಪರ್ಧೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು, ಮಕ್ಕಳಿಗೆ ತರಬೇತಿ ನೀಡಲಿದ್ದಾರೆ.
14ರಂದು ಪ್ರಬಂಧ ಸ್ಪರ್ಧೆ: ಮಕ್ಕಳ ದಿನಾಚರಣೆ ಅಂಗವಾಗಿ ನ. 14ರಂದು ಮಂಡ್ಯದ ಗಾಂಧಿ ಭವನದಲ್ಲಿ ಪ್ರೌಢಶಾಲಾ ಮಕ್ಕಳಿಗಾಗಿ ಜಿಲ್ಲಾ ಮಟ್ಟದ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯ ವಿಷಯವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.
* ಮಂಡ್ಯ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಿಸಬೇಕು. ಹೆಚ್ಚೆಚ್ಚು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು, ಅದರಲ್ಲಿ ತೇರ್ಗಡೆಯಾಗಬೇಕು ಎನ್ನುವುದು ಸಂಸ್ಥೆಯ ಉದ್ದೇಶ. ಪ್ರೌಢಶಾಲಾ ಹಂತದಲ್ಲೇ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿ ಅವರ ಶೈಕ್ಷಣಿಕ ಭವಿಷ್ಯಕ್ಕೆ ವೇದಿಕೆ ಕಲ್ಪಿಸುವ ಸಣ್ಣ ಪ್ರಯತ್ನ ಮಾಡಲಾಗುತ್ತದೆ. ರಸಪ್ರಶ್ನೆ ಸ್ಪರ್ಧೆ ಮೂಲಕ ಮಕ್ಕಳಲ್ಲಿ ಪುಸ್ತಕ, ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಹೆಚ್ಚಿಸಲು ದಿನಪತ್ರಿಕೆಗಳ ಮಹತ್ವ ಮತ್ತು ಮೌಲ್ಯ ತಿಳಿಸಿಕೊಡಲಾಗುವುದು.
- ಬಿ.ಸಂತೋಷ್ ಮುಖ್ಯಸ್ಥ, ಸಂತೋಷ್ ಎಜುಕೇಷನ್ ಟ್ರಸ್ಟ್, ಮಂಡ್ಯ
* ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಉತ್ತೇಜಿಸುವ ಉದ್ದೇಶ
ನವೀನ್ ಮಂಡ್ಯ
ಮಂಡ್ಯದ ಖಾಸಗಿ ವಿದ್ಯಾ ಸಂಸ್ಥೆಯೊಂದು ಗ್ರಾಮೀಣ ಪ್ರದೇಶದ ಅದರಲ್ಲೂ ಸರಕಾರಿ ಶಾಲೆಯ ಮಕ್ಕಳ ಶೈಕ್ಷಣಿಕ ಅಭ್ಯುದಯ ದೃಷ್ಟಿಯಿಂದ 'ಧಿನಮ್ಮ ನಡಿಗೆ ಸರಕಾರಿ ಶಾಲೆ ಕಡೆಗೆ' ಘೋಷಣೆಯಡಿ ವಿನೂತನ 'ರಸಪ್ರಶ್ನೆ ಸ್ಪರ್ಧೆ' ಕಾರ್ಯಕ್ರಮ ರೂಪಿಸಿದೆ.
ಗ್ರಾಮೀಣ ವಿದ್ಯಾರ್ಥಿಗಳ ಬುದ್ಧಿಮತ್ತೆ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಆಸಕ್ತಿ ಬೆಳೆಸುವ ದೃಷ್ಟಿಯಿಂದ ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಲು ಯೋಜನೆ ರೂಪಿಸಿದೆ. ಎರಡು ತಿಂಗಳ ಹಿಂದೆ ಮಂಡ್ಯ ಜಿಲ್ಲೆಯ ಪ್ರೌಢಶಾಲಾ ಮಕ್ಕಳಿಗಾಗಿ 'ಧಿಮಂಡ್ಯದ ಲಕ್ಷಾಧಿಪತಿ' ರಸಪ್ರಶ್ನೆ ಸ್ಪರ್ಧೆ ಆಯೋಜಿಸುವ ಮೂಲಕ ಗಮನ ಸೆಳೆದಿದ್ದ ಸಂತೋಷ್ ಎಜುಕೇಷನ್ ಟ್ರಸ್ಟ್, ಇದೀಗ ಜಿಲ್ಲೆಯ ಎಲ್ಲ ಸರಕಾರಿ ಶಾಲೆಗಳಲ್ಲಿ ಶಾಲಾ ಹಂತದಲ್ಲೇ ರಸಪ್ರಶ್ನೆ ಸ್ಪರ್ಧೆ ನಡೆಸಲು ನಿರ್ಧರಿಸಿದೆ.
ಫೈವ್ ಸ್ಟಾರ್ ಸಿಇಟಿ/ನೀಟ್ ತಂಡ, ಸಂತೋಷ್ ಕೋಚಿಂಗ್ ಸೆಂಟರ್ ಸಹಯೋಗದಲ್ಲಿ 'ಧಿನಮ್ಮ ನಡಿಗೆ ಸರಕಾರಿ ಶಾಲೆ ಕಡೆಗೆ' ಘೋಷಣೆಯಡಿ ಶಾಲಾ ಹಂತದ ರಸಪ್ರಶ್ನೆ ಸ್ಪರ್ಧೆ ನಡೆಸಲು ಯೋಜನೆ ಹಾಕಿಕೊಂಡಿದೆ. ಅ.26ರಿಂದ ಸತತವಾಗಿ ಎರಡು ತಿಂಗಳು ಸ್ಪರ್ಧೆಗಳನ್ನು ನಡೆಸಲಾಗುವುದು. ರಸಪ್ರಶ್ನೆ ಸ್ಪರ್ಧೆಯೊಂದಿಗೆ ನವೆಂಬರ್ನಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿದೆ.
ಸ್ಪರ್ಧೆ ಹೇಗೆ ನಡೆಯಲಿದೆ?: ಎರಡು ತಿಂಗಳು ಜಿಲ್ಲೆಯ ಎಲ್ಲ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಸಲಾಗುತ್ತಿದೆ. ಒಂದು ವಾರ ಮೊದಲೇ ಸ್ಪರ್ಧೆ ಬಗ್ಗೆ ಸಂಬಂಧಿಸಿದ ಶಾಲೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುತ್ತದೆ. ಈ ಸಮಯದಲ್ಲಿ ಶಾಲೆಯ ಶಿಕ್ಷಕರು ಮಕ್ಕಳನ್ನು ಸ್ಪರ್ಧೆಗೆ ಸಜ್ಜುಗೊಳಿಸಲಿದ್ದಾರೆ. ಸ್ಪರ್ಧೆಯ ದಿನದಂದು ಸಂತೋಷ್ ಎಜುಕೇಷನ್ ಟ್ರಸ್ಟ್, ಫೈವ್ ಸ್ಟಾರ್ ಸಿಇಟಿ/ನೀಟ್ ತಂಡ, ಸಂತೋಷ್ ಕೋಚಿಂಗ್ ಸೆಂಟರ್ನ ಪ್ರತಿನಿಧಿಗಳು ನಿಗದಿತ ಶಾಲೆಗೆ ತೆರಳಿ ಸ್ಪರ್ಧಾ ಪ್ರಕ್ರಿಯೆಗಳನ್ನು ನಡೆಸಲಿದ್ದಾರೆ.
ಕನ್ನಡ ಸಾಹಿತ್ಯ, ವಿಜ್ಞಾನ, ಚಲನಚಿತ್ರ, ಕ್ರೀಡೆ, ಪ್ರಚಲಿತ ವಿದ್ಯಮಾನಗಳು ಹಾಗೂ ಮಂಡ್ಯ ಜಿಲ್ಲೆ ಬಗ್ಗೆ ರಸಪ್ರಶ್ನೆ ಸ್ಪರ್ಧೆಗಾಗಿ ಪ್ರಶ್ನೆಗಳನ್ನು ಸಿದ್ಧಪಡಿಸಲಾಗುತ್ತದೆ. ವಿಜೇತ ಮಕ್ಕಳಿಗೆ ಸ್ಥಳದಲ್ಲೇ ನಗದು ಬಹುಮಾನ, ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆ ನೀಡಲಾಗುತ್ತಿದೆ ಎನ್ನುತ್ತಾರೆ ಸಂತೋಷ್ ಎಜುಕೇಷನ್ ಟ್ರಸ್ಟ್ ಮುಖ್ಯಸ್ಥ ಬಿ.ಸಂತೋಷ್. ಸಂತೋಷ್ ಕೋಚಿಂಗ್ ಸೆಂಟರ್ನಲ್ಲಿ ಕಲಿತು ರಾಜ್ಯದ ಬೇರೆ ಬೇರೆ ಸ್ಥಳಗಳಲ್ಲಿ ಉದ್ಯೋಗ ಮಾಡುತ್ತಿರುವ ವೈದ್ಯರು, ಟೆಕ್ಕಿಗಳು ಹಾಗೂ ಶಿಕ್ಷಕರು ಸ್ಪರ್ಧೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು, ಮಕ್ಕಳಿಗೆ ತರಬೇತಿ ನೀಡಲಿದ್ದಾರೆ.
14ರಂದು ಪ್ರಬಂಧ ಸ್ಪರ್ಧೆ: ಮಕ್ಕಳ ದಿನಾಚರಣೆ ಅಂಗವಾಗಿ ನ. 14ರಂದು ಮಂಡ್ಯದ ಗಾಂಧಿ ಭವನದಲ್ಲಿ ಪ್ರೌಢಶಾಲಾ ಮಕ್ಕಳಿಗಾಗಿ ಜಿಲ್ಲಾ ಮಟ್ಟದ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯ ವಿಷಯವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.
* ಮಂಡ್ಯ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಸುಧಾರಿಸಬೇಕು. ಹೆಚ್ಚೆಚ್ಚು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು, ಅದರಲ್ಲಿ ತೇರ್ಗಡೆಯಾಗಬೇಕು ಎನ್ನುವುದು ಸಂಸ್ಥೆಯ ಉದ್ದೇಶ. ಪ್ರೌಢಶಾಲಾ ಹಂತದಲ್ಲೇ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿ ಅವರ ಶೈಕ್ಷಣಿಕ ಭವಿಷ್ಯಕ್ಕೆ ವೇದಿಕೆ ಕಲ್ಪಿಸುವ ಸಣ್ಣ ಪ್ರಯತ್ನ ಮಾಡಲಾಗುತ್ತದೆ. ರಸಪ್ರಶ್ನೆ ಸ್ಪರ್ಧೆ ಮೂಲಕ ಮಕ್ಕಳಲ್ಲಿ ಪುಸ್ತಕ, ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಹೆಚ್ಚಿಸಲು ದಿನಪತ್ರಿಕೆಗಳ ಮಹತ್ವ ಮತ್ತು ಮೌಲ್ಯ ತಿಳಿಸಿಕೊಡಲಾಗುವುದು.
- ಬಿ.ಸಂತೋಷ್ ಮುಖ್ಯಸ್ಥ, ಸಂತೋಷ್ ಎಜುಕೇಷನ್ ಟ್ರಸ್ಟ್, ಮಂಡ್ಯ