ಆ್ಯಪ್ನಗರ

ನಿಷೇಧಾಜ್ಞೆ ಎಫೆಕ್ಟ್: ಭಣಗುಟ್ಟಿದ ಪ್ರವಾಸಿ ತಾಣಗಳು

ವಿಕ ಸುದ್ದಿಲೋಕ ಶ್ರೀರಂಗಪಟ್ಟಣ 2019 ನೂತನ ವರ್ಷಾಚರಣೆ ಹಿನ್ನಲೆಯಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುವುದರಿಂದ ಅಹಿತಕರ ಘಟನೆಗಳು ...

Vijaya Karnataka 2 Jan 2019, 5:00 am
ಶ್ರೀರಂಗಪಟ್ಟಣ: 2019 ನೂತನ ವರ್ಷಾಚರಣೆ ಹಿನ್ನಲೆಯಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುವುದರಿಂದ ಅಹಿತಕರ ಘಟನೆಗಳು ನಡೆಯುವನ್ನು ತಡೆಯುವ ಉದ್ದೇಶದಿಂದ ತಾಲೂಕು ಆಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಹೊರಡಿಸಿತ್ತು. ಹೀಗಾಗಿ ಮಂಗಳವಾರ ತಾಲೂಕಿನ ನಾನಾ ಪ್ರವಾಸಿ ತಾಣಗಳು ಜನರಿಲ್ಲದೇ ಭಣಗುಡುತ್ತಿದ್ದವು.
Vijaya Karnataka Web prohibition effect no people on tourist places in srirangapattana taluk
ನಿಷೇಧಾಜ್ಞೆ ಎಫೆಕ್ಟ್: ಭಣಗುಟ್ಟಿದ ಪ್ರವಾಸಿ ತಾಣಗಳು


ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಬಲಮುರಿ, ಎಡಮುರಿ, ಕೆಆರ್‌ಎಸ್‌ ಹಿನ್ನೀರು ಪ್ರದೇಶ, ಕರೀಘಟ್ಟ ಅರಣ್ಯ ಪ್ರದೇಶ, ಕಾವೇರಿ ಬೋರೇ ದೇವರ ದೇವಾಲಯ ಬಳಿ ಇರುವ ರಾಜಪರಮೇಶ್ವರಿ ನಾಲೆಗೆ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಒಡ್ಡಿನ ಪ್ರದೇಶ, ಕಾವೇರಿ ಸಂಗಮ, ಗೋಸಾಯ್‌ಘಾಟ್‌ ಸೇರಿದಂತೆ ಇತರ ಪ್ರದೇಶಗಳಲ್ಲಿ ಡಿ.31 ಹಾಗೂ ನ.1ರ ಮದ್ಯರಾತ್ರಿ 12ರವರೆಗೆ ಶ್ರೀರಂಗಪಟ್ಟಣ ತಹಸೀಲ್ದಾರ್‌ ಡಿ.ನಾಗೇಶ್‌ ನಿಷೇಧಾಜ್ಞೆ ಆದೇಶ ಹೊರಡಿಸಿದ್ದರು.

ಹೀಗಾಗಿ ಪ್ರವಾಸಿ ತಾಣಗಳಲ್ಲಿ ಪೊಲೀಸರು ಕಟ್ಟುನಿಟ್ಟಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರು. ಯಾವುದೇ ಪ್ರವಾಸಿಗರು ಆಗಮಿಸದಂತೆ ನಾಕಾಬಂದಿ ರಚನೆ ಮಾಡಿದ್ದರು. ಪ್ರಮುಖ ದ್ವಾರಗಳಲ್ಲಿ ಬ್ಯಾರಿಕೇಡ್‌ ಇಟ್ಟು ಪೊಲೀಸ್‌ ಸರ್ಪಗಾವಲು ನಿಯೋಜಿಸಲಾಗಿತ್ತು. ಹಾಗಾಗಿ ಪ್ರವಾಸಿ ತಾಣಗಳು ಬಿಕೋ ಎನ್ನುತ್ತಿದ್ದವು.

ಕೆಆರ್‌ಎಸ್‌ ಮತ್ತು ಮೈಸೂರು ರಸ್ತೆಯ ಬಳಿಯ ಬಲಮುರಿಗೆ ಹೋಗುವ ಪ್ರವೇಶ ದ್ವಾರದಲ್ಲಿ ಪೊಲೀಸರ ಬಿಗಿಭದ್ರತೆ ಮಾಡಿ ಬಲಮುರಿ ಪ್ರವಾಸಕ್ಕೆ ಬರುವ ಪ್ರವಾಸಿಗರನ್ನು ದ್ವಾರದ ಬಳಿಯೇ ತಡೆದು ವಾಪಸ್‌ ಕಳುಹಿಸುತ್ತಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ