ಆ್ಯಪ್ನಗರ

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಖಂಡಿಸಿ ಧರಣಿ

ರಾಜ್ಯದಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳಲ್ಲಿನ ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಮತ್ತು ತಾಲೂಕು ಎಸ್‌ಡಿಎಂಸಿ ಮತ್ತು ಮೇಲುಸ್ತುವಾರಿ ಸಮಿತಿ ಸಮನ್ವಯ ವೇದಿಕೆ ವತಿಯಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ವಿಕ ಸುದ್ದಿಲೋಕ 27 Jul 2016, 5:15 am
ಮಂಡ್ಯ: ರಾಜ್ಯದಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳಲ್ಲಿನ ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ಮಾಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಮತ್ತು ತಾಲೂಕು ಎಸ್‌ಡಿಎಂಸಿ ಮತ್ತು ಮೇಲುಸ್ತುವಾರಿ ಸಮಿತಿ ಸಮನ್ವಯ ವೇದಿಕೆ ವತಿಯಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
Vijaya Karnataka Web protest against the transfer of an additional teacher
ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಖಂಡಿಸಿ ಧರಣಿ


ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಲ್ಲಿ ಸೇರಿದ ಪ್ರತಿಭಟನಾಕಾರರು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ಮಾಡುತ್ತಿರುವುದರಿಂದ ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿದೆ ಆಕ್ರೋಶ ವ್ಯಕ್ತಪಡಿಸಿದರು.

ಸಮನ್ವಯ ವೇದಿಕೆ ಅಧ್ಯಕ್ಷ ಬೋರೇಗೌಡ ಮಾತನಾಡಿ, ರಾಜ್ಯಾದ್ಯಂತ ಎಲ್ಲ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳಲ್ಲಿ ಹೆಚ್ಚುವರಿ ಶಿಕ್ಷಕರನ್ನು ವರ್ಗಾವಣೆ ಮಾಡು ವುದು ತಪ್ಪು. ಅತಿಥಿ ಶಿಕ್ಷಕರ ನೆಪ ಹೇಳಿ ಕೊನೆಯ ಹಂತದಲ್ಲಿ ನೇಮಕ ಮಾಡುವುದರಿಂದ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ. ಅವಧಿ ಮೀರಿದ ಶಿಕ್ಷಕರನ್ನು ಕರ್ತವ್ಯದಲ್ಲಿ ಮುಂದುವರೆ ಸುವುದರೊಂದಿಗೆ ಹೊಸ ಶಿಕ್ಷಕರ ಆಯ್ಕೆ ಮುಂದೂಡುತ್ತಿ ರುವುದೇ ಶಿಕ್ಷಕರ ಕೊರತೆಗೆ ಮೂಲ ಕಾರಣ ಎಂದು ಆರೋಪಿಸಿದರು.

ಶಿಕ್ಷಣ ಸಚಿವರು ದಿನಕ್ಕೊಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿರುವುದು ಸರಿಯಲ್ಲ. 10 ಮಕ್ಕಳಿಗೆ ಒಬ್ಬ ಶಿಕ್ಷಕರು ಇರುವಂತೆ ನಿಯೋಜಿಸುವುದಾಗಿ ಹೇಳುವ ಶಿಕ್ಷಣ ಸಚಿವರು ಈಗ ಹೆಚ್ಚುವರಿ ಶಿಕ್ಷಕರನ್ನು ತೆಗೆಯುತ್ತಿರುವುದು ಸರಿಯಲ್ಲ. ಸರಕಾರಿ ಶಾಲಾ ಶಿಕ್ಷಕರಿಂದ ಇಲಾಖೇತರ ಎಲ್ಲ ಕೆಲಸಗಳನ್ನು ನಿರ್ವಹಿಸಿ ಕೊಂಡು ತರಗತಿಯ ಎಲ್ಲ ವಿಷಯ ಬೋಧಿಸುವುದು ಅಸಾಧ್ಯವಾಗಿದೆ ಎಂದು ಹೇಳಿದರು.

ಕರಾವೇ ಅಧ್ಯಕ್ಷ ಕೆ.ಟಿ.ಶಂಕರೇಗೌಡ, ತಾಲೂಕು ಅಧ್ಯಕ್ಷ ಅಶೋಕ್, ಸಮನ್ವಯ ವೇದಿಕೆ ಪದಾಧಿಕಾರಿಗಳಾದ ಹೇಮಲತಾ, ರಾಜೇಗೌಡ, ಶಂಭೂಗೌಡ, ಅರುಣೇಶ್, ಕೀಲಾರ ಸರಕಾರಿ ಶಾಲೆ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ