ಆ್ಯಪ್ನಗರ

ಹಕ್ಕು ಪತ್ರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ

ವಿಕ ಸುದ್ದಿಲೋಕ ಮಂಡ್ಯ ತಾಲೂಕಿನ ಹೊಳಲು ಎಚ್‌ಡಿ...

Vijaya Karnataka 7 Jun 2019, 5:00 am
ಮಂಡ್ಯ: ತಾಲೂಕಿನ ಹೊಳಲು ಎಚ್‌.ಡಿ.ಚೌಡಯ್ಯ ಬಡಾವಣೆಯಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಆದಿ ದ್ರಾವಿಡ ಜನಾಂಗದ ಕುಟುಂಬಗಳನ್ನು ಒಕ್ಕಲೆಬ್ಬಿಸದೇ ಹಕ್ಕು ಪತ್ರ ನೀಡಿ ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ಒತ್ತಾಯಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Vijaya Karnataka Web protest demand for a claim letter in mandya
ಹಕ್ಕು ಪತ್ರಕ್ಕಾಗಿ ಒತ್ತಾಯಿಸಿ ಪ್ರತಿಭಟನೆ


ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಿದ ಪ್ರತಿಭಟನಾಕಾರರು, ಹೊಳಲು ಗ್ರಾಮದಲ್ಲಿ 15 ವರ್ಷಗಳಿಂದ ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿರುವ 16 ಕುಟುಂಬಗಳ ಪೈಕಿ ಎಂಟು ಕುಟುಂಬಳಿಗೆ ಹಕ್ಕುಪತ್ರ ನೀಡಲಾಗಿದೆ. ಈ ಎಂಟು ಕುಟುಂಬಗಳು ಗ್ರಾಪಂಗೆ ಅರ್ಜಿ ಸಲ್ಲಿಸಿ ಹಕ್ಕುಪತ್ರ ನೀಡಿ ಮನೆ ನಿರ್ಮಾಣ ಮಾಡಿಕೊಳ್ಳುವಂತೆ ಅರ್ಜಿ ಸಲ್ಲಿಸಿದರೂ ಕ್ರಮ ತೆಗೆದುಕೊಂಡಿಲ್ಲ. ಜಿಲ್ಲಾಡಳಿತ ಖಾತೆ ಮಾಡಿಕೊಟ್ಟು ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿದರು.

ಇದೇ ಗ್ರಾಮದ ಇಬ್ಬರು ಇಲ್ಲಿನ ನಿವಾಸಿಗಳಿಗೆ ಜಾಗ ಖಾಲಿ ಮಾಡುವಂತೆ ತೊಂದರೆ ನೀಡುತ್ತಿದ್ದಾರೆ. ಜಾಗ ಖಾಲಿ ಮಾಡುವಂತೆ ಬೆದರಿಕೆ ಹಾಕುತ್ತಿದ್ದಾರೆ. 15 ವರ್ಷದಿಂದ ಇಲ್ಲಿಗೆ ಬಾರದಿದ್ದ ಅವರು ಇದೀಗ ಆಗಮಿಸಿ ತೊಂದರೆ ನೀಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಆದಿ ದ್ರಾವಿಡ ಜನಾಂಗವನ್ನು ಒಕ್ಕಲೆಬ್ಬಿಸದೇ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ರಾಜ್ಯ ಸಂಘಟನಾ ಸಂಚಾಲಕ ಡಾ. ಎಂ.ಬಿ.ಶ್ರೀನಿವಾಸ್‌, ಕೃಷ್ಣ, ಮೇಘನಾಥ್‌, ಕೃಷ್ಣಪ್ಪ ಮಾಚಹಳ್ಳಿ, ವೈರಮುಡಿ, ಶಿವಲಿಂಗಯ್ಯ, ಸುದರ್ಶನ ಮಲ್ಲಿಗೆರೆ, ಶಿವಣ್ಣ, ನಂಜುಂಡ, ಕಣ್ಣಯ್ಯ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ