ಆ್ಯಪ್ನಗರ

ನಿಮಿಷಾಂಬ ದೇವಾಲಯಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ

ವಿಕ ಸುದ್ದಿಲೋಕ ಶ್ರೀರಂಗಪಟ್ಟಣ ಶ್ರೀರಂಗಪಟ್ಟಣ ಹೊರವಲಯದಲ್ಲಿರುವ ಗಂಜಾಂನಲ್ಲಿರುವ ಪ್ರಸಿದ್ಧ ನಿಮಿಷಾಂಬ ದೇವಾಲಯ ಸುತ್ತಮುತ್ತ ಕಸದ ರಾಶಿ ಬಿದ್ದಿದ್ದು, ಶುದ್ಧ ಕುಡಿಯುವ ...

Vijaya Karnataka 16 Jun 2018, 5:00 am
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ಹೊರವಲಯದಲ್ಲಿರುವ ಗಂಜಾಂನಲ್ಲಿರುವ ಪ್ರಸಿದ್ಧ ನಿಮಿಷಾಂಬ ದೇವಾಲಯ ಸುತ್ತಮುತ್ತ ಕಸದ ರಾಶಿ ಬಿದ್ದಿದ್ದು, ಶುದ್ಧ ಕುಡಿಯುವ ನೀರು ಘಟಕ ಸೇರಿದಂತೆ ಅಗತ್ಯ ಮೂಲ ಸೌಕರ‍್ಯಗಳು ಮರೀಚಿಕೆಯಾಗಿವೆ ಎಂದು ಆರೋಪಿಸಿ ರಕ್ಷ ಣಾ ವೇದಿಕೆ ಕಾರ‍್ಯಕರ್ತರು ಶುಕ್ರವಾರ ದೇವಾಲಯ ಇಒ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Vijaya Karnataka Web protest demanding basic infrastructure for nithambaamba temple srirangapattana
ನಿಮಿಷಾಂಬ ದೇವಾಲಯಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ


ಕಚೇರಿ ಎದುರು ಜಮಾವಣೆಗೊಂಡ ಪ್ರತಿಭಟನಕಾರರು ದೇವಾಲಯ ಆಡಳಿತ ಮಂಡಳಿ, ಮುಜರಾಯಿ ಇಲಾಖೆ ಹಾಗೂ ಕಾರ‍್ಯ ನಿರ್ವಾಹಕ ಅಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಸಿದ್ಧ ದೇವಾಲಯಕ್ಕೆ ದೇಶ, ವಿದೇಶಗಳಿಂದ ಭಕ್ತರು, ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಇಲ್ಲಿ ಯಾವುದೇ ಮೂಲ ಸೌಕರ್ಯಗಳು ಇಲ್ಲ. ಕೆಲ ಭಕ್ತರು ಕಾವೇರಿ ನದಿಯಲ್ಲಿ ಮಿಂದು ಹಳೆಯ ಬಟ್ಟೆಗಳನ್ನು ನದಿ ದಡದಲ್ಲಿಯೇ ಬಿಸಾಡಿದ್ದಾರೆ. ದೇವಾಲಯ ಆಸುಪಾಸಿನಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದು, ಗಬ್ಬು ನಾರುತ್ತಿದೆ. ಕುಡಿಯುವ ನೀರು ಸರಬರಾಜು ಘಟಕದಲ್ಲಿ ಹುಳುಗಳು ಕಾಣಿಸಿಕೊಳ್ಳುತ್ತಿವೆ ಎಂದು ಪ್ರತಿಭಟನಾನಿರತರು ಅಸಮಾಧಾನ ವ್ಯಕ್ತಪಡಿಸಿದರು.

ದೇವಾಲಯ ಸುತ್ತಮುತ್ತ ಕಾರು, ಬೈಕ್‌ಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಲಾಗುತ್ತಿದೆ. ದೇವಾಲಯಕ್ಕೆ ಆಗಮಿಸುವ ಭಕ್ತರು ಕಿರಿ ಕಿರಿ ಅನುಭವಿಸಬೇಕು. ಸಮರ್ಪಕವಾಗಿ ಬೈಕ್‌ ಹಾಗೂ ಕಾರು ನಿಲುಗಡೆಗೆ ಅವಕಾಶ ಕಲ್ಪಿಸಬೇಕು. ದೇವಾಲಯ ಸಿಬ್ಬಂದಿ ನಿಯೋಜನೆ ಮಾಡಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿ ದೇವಾಲಯ ಇಒ ನಂಜೇಗೌಡ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕರವೇ ತಾಲೂಕು ಅಧ್ಯಕ್ಷ ಜಿ.ಜಿ ಹರೀಶ್‌ಗೌಡ, ದಸಂಸ ತಾಲೂಕು ಸಂಚಾಲಕ ಗಂಜಾಂ ರವಿಚಂದ್ರ, ಎಂ.ಪ್ರಕಾಶ್‌, ರವಿಶಂಕರ್‌, ದುಶ್ಯಂತ್‌ರಾಜ್‌, ಮಾಧು, ಸಿದ್ದರಾಜು, ಭರತ್‌, ಸಚ್ಚಿನ್‌ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ