ಆ್ಯಪ್ನಗರ

ಮದ್ದೂರಿನಲ್ಲಿ ರಸ್ತೆ ಸಂಚಾರಕ್ಕೆ ತಡೆ

ವಿಕ ಸುದ್ದಿಲೋಕ ಮದ್ದೂರು ದಲಿತ ಮಹಿಳೆ ಮೇಲೆ ಹಲ್ಲೆ ಮಾಡಿ ದೌರ್ಜನ್ಯವೆಸಗಿರುವ ಕ್ರಮ ಖಂಡಿಸಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಸೋಮವಾರ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ...

Vijaya Karnataka 25 Sep 2018, 5:00 am
ಮದ್ದೂರು: ದಲಿತ ಮಹಿಳೆ ಮೇಲೆ ಹಲ್ಲೆ ಮಾಡಿ ದೌರ್ಜನ್ಯವೆಸಗಿರುವ ಕ್ರಮ ಖಂಡಿಸಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಸೋಮವಾರ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
Vijaya Karnataka Web protest in maddur by dss
ಮದ್ದೂರಿನಲ್ಲಿ ರಸ್ತೆ ಸಂಚಾರಕ್ಕೆ ತಡೆ


ಪಟ್ಟಣದ ಪ್ರವಾಸಿಮಂದಿರದ ಬಳಿ ಜಮಾಯಿಸಿ ಪೇಟೆ ಬೀದಿ ಮೂಲಕ ಮೆರವಣಿಗೆ ಹೊರಟು, ಸರಕಾರಿ ಬಸ್‌ನಿಲ್ದಾಣದ ಬಳಿ ಮೈಸೂರು, ಬೆಂಗಳೂರು ಹೆದ್ದಾರಿ ತಡೆ ನಡೆಸಿ ದೌರ್ಜನ್ಯವೆಸಗಿರುವ ವ್ಯಕ್ತಿಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳೆ ಮೇಲೆ ದೌರ್ಜನ್ಯವೆಸಗಿರುವ ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಸ್‌. ನಾಗೇಶ್‌ ಮತ್ತು ಅವರ ಸಹಚರರನ್ನು ಕೂಡಲೇ ಗಡಿಪಾರು ಮಾಡುವಂತೆ ಒತ್ತಾಯಿಸಿದರಲ್ಲದೇ ದೇಶದಲ್ಲಿ ಜೀತ ಪದ್ಧತಿ ನಿಷೇಧ ಕಾಯಿದೆ ಜಾರಿಯಲ್ಲಿದ್ದರೂ ಕೆಲ ಗ್ರಾಮಗಳಲ್ಲಿ ಜೀತ ಪದ್ಧತಿ ಇನ್ನು ಜೀವಂತವಿರುವುದು ನಾಚಿಕೆಗೇಡಿನ ಸಂಗತಿ ಎಂದು ದೂರಿದರು.

ಜಿಲ್ಲೆಯಲ್ಲಿ ಜೀತಗಾರರು ಇಲ್ಲವೆಂದು ಸರಕಾರಕ್ಕೆ ಸುಳ್ಳು ವರದಿ ನೀಡಿರುವ ಅಧಿಕಾರಿಗಳಿಂದಲೇ ಜೀತ ಪದ್ಧತಿ ಘೋಷಣೆಯಾಗಿದ್ದು ಜಿಲ್ಲೆಯಲ್ಲಿ ಇಟ್ಟಿಗೆ ಕಾರ್ಖಾನೆ, ಕೋಳಿ ಫಾರಂ, ಜೆಲ್ಲಿ ಕ್ರಸರ್‌ ಕಲ್ಲು ಗಣಿಗಳಲ್ಲಿ ಅಮಾಯಕ ಮುಕ್ತ ಜನರನ್ನು ಜೀತಕ್ಕಿರಿಸಿ ದುಡಿಸಿಕೊಳ್ಳುತ್ತಿರುವ ಪ್ರಕರಣಗಳು ಸಾಕಷ್ಟಿದ್ದು, ಇದನ್ನು ಅಧಿಕಾರಿಗಳು ಕೂಡಲೇ ಪತ್ತೆ ಹಚ್ಚಿ ಜೀತ ನಿರ್ಮೂಲನೆಗೆ ಅಗತ್ಯ ಕ್ರಮವಹಿಸಬೇಕೆಂದರು.

ಜಾನಕಮ್ಮ ಅವರ ಮೇಲೆ ಹಲ್ಲೆ ಮಾಡಿ ಬಲವಂತವಾಗಿ ಕಾರಿನಲ್ಲಿ ಎಳೆದೋಯೊಯ್ದಿರುವುದು ಮಾನವ ಹಕ್ಕು ಉಲ್ಲಂಘನೆಯಾಗಿದ್ದು ಕೂಡಲೇ ನಾಗೇಶ್‌ ಮೇಲೆ ಗುಂಡಾ ಕಾಯ್ದೆಯನ್ನು ಹೆಚ್ಚುವರಿಯಾಗಿ ದಾಖಲಿಸಿ ಆತನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಜತೆಗೆ ಅವರ ಕುಟುಂಬಕ್ಕೆ 10 ಲಕ್ಷ . ರೂ. ಧನಸಹಾಯ ನೀಡಿ ಪುನರ್ವಸತಿ ಕಲ್ಪಿಸಬೇಕೆಂದು ಆಗ್ರಹಿಸಿದರು.

ಬಳಿಕ ತಾಲೂಕು ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಪ್ರಭಾರ ತಹಸೀಲ್ದಾರ್‌ ರೂಪ ಅವರಿಗೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆ ವೇಳೆ ಸಂಘಟನೆ ಪದಾಧಿಕಾರಿಗಳಾದ ಅಂದಾನಿ ಸೋಮನಹಳ್ಳಿ, ರಾಜಣ್ಣ, ಎಂ. ಶಿವು, ಜಿ.ಎಂ. ಸತ್ಯ, ನಾರಾಯಣ್‌, ಮೆಹಬೂಬ್‌ಖಾನ್‌, ರಾಜೇಶ್‌, ರವಿಕುಮಾರ್‌, ಮಾದೇಶ, ಅಂಬರೀಷ್‌, ಮಹದೇವು, ಶಂಕರ್‌ ನೇತೃತ್ವ ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ