ಆ್ಯಪ್ನಗರ

ಹಾಲು ಆಮದು ಖಂಡಿಸಿ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ

ಕೇಂದ್ರ ಸರಕಾರವು ವಿದೇಶದಿಂದ ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಮುಂದಾಗಿರುವ ಕ್ರಮಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯ ಕರ್ತರು ಹೆದ್ದಾರಿ ತಡೆ ನಡೆಸಿ ಮಂಗಳವಾರ ಪ್ರತಿಭಟನೆ ನಡೆಸಿದರು.

Vijaya Karnataka 16 Oct 2019, 5:00 am
ಮದ್ದೂರು: ಕೇಂದ್ರ ಸರಕಾರವು ವಿದೇಶದಿಂದ ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ಮುಂದಾಗಿರುವ ಕ್ರಮಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯ ಕರ್ತರು ಹೆದ್ದಾರಿ ತಡೆ ನಡೆಸಿ ಮಂಗಳವಾರ ಪ್ರತಿಭಟನೆ ನಡೆಸಿದರು.
Vijaya Karnataka Web MDY15MDR4_17


ಪಟ್ಟಣದ ಸರಕಾರಿ ಬಸ್‌ನಿಲ್ದಾಣದ ಬಳಿ ಜಮಾಯಿಸಿದ ಕಾರ್ಯಕರ್ತರು ಮೈಸೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿ ಪ್ರಧಾನಿ ನರೇಂದ್ರಮೋದಿ ವಿರುದ್ಧ ಘೋಷಣೆ ಕೂಗಿದರಲ್ಲದೆ, ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ರವರ ಪ್ರತಿಕೃತಿ ದಹಿಸಿದರು.

ಸುಮಾರು ಅರ್ಧಗಂಟೆಗೂ ಹೆಚ್ಚುಕಾಲ ನಡೆದ ಪ್ರತಿಭಟನೆಯಿಂದಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತಲ್ಲದೆ, ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಯಿತಿ. ಕೂಡಲೇ ಸರಕಾರ ಆಮದು ನೀತಿಯನ್ನು ಕೈಬಿಟ್ಟು ಹೈನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುತ್ತಿರುವ ಕುಟುಂಬಗಳ ರಕ್ಷಣೆಗೆ ನಿಲ್ಲಬೇಕೆಂದು ಒತ್ತಾಯಿಸಿದರು.

ಡೆನ್ಮಾರ್ಕ್, ನ್ಯೂಜಿಲೆಂಡ್‌, ಆಸ್ಪ್ರೇಲಿಯಾ ಸೇರಿದಂತೆ ಇನ್ನಿತರೆ ವಿದೇಶಗಳಿಂದ ಹಾಲು ಸೇರಿದಂತೆ ಉತ್ಪನ್ನಗಳನ್ನು ಆಮದು ಮಾಡಿ ಕೊಂಡಲ್ಲಿದೇಶದ ಹೈನುಗಾರಿಕೆಗೆ ದೊಡ್ಡ ಪೆಟ್ಟು ಬೀಳಲಿದ್ದು ಹಾಲು ಉತ್ಪಾದನೆಯಲ್ಲಿತೊಡಗಿರುವ ರೈತರಿಗೆ ಸಂಕಷ್ಟ ಎದುರಾಗಲಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿಮಳೆ ಬೆಳೆ ಇಲ್ಲದೆ ಹಾಗೂ ಪ್ರವಾಹದಿಂದಾಗಿ ರೈತರು ಸಂಕಷ್ಟ ಪರಿಸ್ಥಿತಿ ಯಲ್ಲಿದ್ದು ರೈತ ವಿರೋಧಿ ನೀತಿ ಅನುಸರಿ ಸುತ್ತಿರುವ ಕೇಂದ್ರ ಸರಕಾರ ಆಮದು ನೀತಿ ರದ್ದು ಮಾಡಬೇಕು. 

ಹಾಲು ಆಮದು ಖಂಡಿಸಿ ಹೆದ್ದಾರಿ ಸಂಚಾರ ತಡೆಗೆ ಪ್ರತಿಭಟನೆ  ನಮ್ಮ ಮೊದಲ ಪುಟದಿಂದ ಜತೆಗೆ ದೇಶದ ಕೋಟ್ಯಂತರ ಹೈನುಗಾರಿಕೆಯನ್ನು ಉಳಿಸಲು ಮುಂದಾಗಬೇಕೆಂದರು. ಒಂದು ವಾರದೊಳಗಾಗಿ ಆಮದು ನೀತಿಯನ್ನು ಹಿಂಪಡೆಯದಿದ್ದಲ್ಲಿಮೈಸೂರು- ಬೆಂಗಳೂರು ಹೆದ್ದಾರಿ ಸಂಚಾರವನ್ನು ನಿರಂತರ ತಡೆ ಹಿಡಿಯುವುದಾಗಿ ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆದರು. ಪ್ರತಿಭಟನೆ ವೇಳೆ ಸಂಘಟನೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್‌, ರೈತ ಸಂಘದ ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ, ತಾಲೂಕು ಘಟಕದ ಅಧ್ಯಕ್ಷ ತಿಪ್ಪೂರು ರಾಜೇಶ್‌, ಪದಾಧಿಕಾರಿಗಳಾದ ಯರಗನಹಳ್ಳಿ ಮಹಾಲಿಂಗು, ಬೋರಪ್ಪ, ವೀರಪ್ಪ, ಯಾಕೂಬ್‌, ಮಹೇಶ್‌, ಜಗದೀಶ್‌, ಉಮೇಶ್‌, ಜಯರಾಮ್‌, ಬಸವರಾಜು ನೇತೃತ್ವವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ