ಆ್ಯಪ್ನಗರ

ವಿಚಾರಣಾಧೀನ ಕೈದಿಗಳ ಜಗಳ: ಒಬ್ಬನಿಗೆ ಗಾಯ

ಜಿಲ್ಲಾ ಕಾರಾಗೃಹದಲ್ಲಿ ಕ್ಷುಲ್ಲಕ ಕಾರಣಕ್ಕೆ ವಿಚಾರಣಾಧೀನ ಕೈದಿಗಳ ನಡುವೆ ಶುಕ್ರವಾರ ಜಗಳವಾಗಿದ್ದು, ಒಬ್ಬ ಗಾಯಗೊಂಡಿದ್ದಾನೆ.

Vijaya Karnataka 6 Oct 2018, 5:00 am
ಮಂಡ್ಯ: ಜಿಲ್ಲಾ ಕಾರಾಗೃಹದಲ್ಲಿ ಕ್ಷುಲ್ಲಕ ಕಾರಣಕ್ಕೆ ವಿಚಾರಣಾಧಿಧೀನ ಕೈದಿಗಳ ನಡುವೆ ಶುಕ್ರವಾರ ಜಗಳವಾಗಿದ್ದು, ಒಬ್ಬ ಗಾಯಗೊಂಡಿದ್ದಾನೆ.
Vijaya Karnataka Web quarrel with the inquiries prisoners one injured
ವಿಚಾರಣಾಧೀನ ಕೈದಿಗಳ ಜಗಳ: ಒಬ್ಬನಿಗೆ ಗಾಯ


ಕೆ.ಆರ್‌.ಪೇಟೆ ತಾಲೂಕಿನ ಶಶಿಕುಮಾರ್‌ ಹಲ್ಲೆಗೊಳಗಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶುಕ್ರವಾರ ಸಂಜೆ ಬಿಡುಗಡೆಯಾಗಿದ್ದಾನೆ. ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಶಶಿಕುಮಾರ ಹಾಗೂ ಕೊಲೆ ಆರೋಪದಡಿ ಬಂಧಿತನಾಗಿದ್ದ ಮಂಜುನಾಥ್‌ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದೆ. ಮಂಜುನಾಥ್‌, ತಿಂಡಿ ತಿನ್ನುವ ಸ್ಪೂನ್‌ನಿಂದ ಶಶಿಕುಮಾರ್‌ ಮೇಲೆ ಹಲ್ಲೆ ನಡೆಸಿದ್ದಾನೆ. ಶಶಿಕುಮಾರ್‌ ಅವರ ಕುತ್ತಿಗೆಗೆ ಪೆಟ್ಟಾಗಿದೆ. ತಕ್ಷಣವೇ ಗಾಯಾಳು ಕೈದಿಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆ ಕೊಡಿಸಲಾಯಿತು. ಮಂಡ್ಯ ಪಶ್ಚಿಮ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ