ಆ್ಯಪ್ನಗರ

ಮಂಡ್ಯ: ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಅಮಾನವೀಯ- ಸಚಿವ ಪ್ರಭು ಚೌವ್ಹಾಣ್

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಹುರುಗಲವಡಿ ಗ್ರಾಮದಲ್ಲಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ ಮತ್ತು ಕೊಲೆ ಘಟನೆಯು ಅತ್ಯಂತ ಅಮಾನವೀಯ ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ ಸಚಿವ ಪ್ರಭು ಚೌವ್ಹಾಣ್ ಹೇಳಿದ್ದಾರೆ.

Vijaya Karnataka Web 4 Dec 2020, 11:47 pm
ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಹುರುಗಲವಡಿ ಗ್ರಾಮದಲ್ಲಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ ಮತ್ತು ಕೊಲೆ ಘಟನೆಯು ಅತ್ಯಂತ ಅಮಾನವೀಯ ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ ಸಚಿವ ಪ್ರಭು ಚೌವ್ಹಾಣ್ ಹೇಳಿದ್ದಾರೆ.
Vijaya Karnataka Web Prabhu Chauhan


ತುತ್ತಿನ ಚೀಲ ತುಂಬಿಕೊಳ್ಳಲು ಬಳ್ಳಾರಿಯ ಹಗರಿಬೊಮ್ಮನಹಳ್ಳಿ ತಾಂಡಾವೊಂದಕ್ಕೆ ಸೇರಿದ್ದ ಕುಟುಂಬ ಕಬ್ಬು ಕಡಿಯಲು ಮದ್ದೂರಿಗೆ ಬಂದು ಮಗಳನ್ನು ಕಳೆದುಕೊಂಡು ಕಣ್ಣಿರಿನಲ್ಲಿ ತೊಳೆಯುವಂತಾಗಿದೆ. ಈ ಘಟನೆಯು ತಮಗೆ ಅತೀವ ದುಃಖ ತಂದಿದೆ ಎಂದು ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ಕಬ್ಬು ಕಟಾವಿಗೆಂದು ಕುಟುಂಬದೊಂದಿಗೆ ಮಂಡ್ಯಗೆ ತೆರಳಿದ್ದ 10 ವರ್ಷದ ಬಾಲಕಿಯ ಕತ್ತುಕೊಯ್ದು ಬರ್ಬರ ಕೊಲೆ, ಅತ್ಯಾಚಾರಕ್ಕೆ ಯತ್ನ!

ಅಪ್ರಾಪ್ತೆಯ ಕೊಲೆಯು ನಾಗರಿಕ ಸಮಾಜ ತಲೆತಗ್ಗಿಸುವಂತ ಹೇಯ ಕೃತ್ಯ. ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಲು ತಿಳಿಸಿದ್ದೇನೆ. ಅತ್ಯಾಚರಕ್ಕೊಳಗಾದ ಬಾಲಕಿಯ ಕುಟುಂಬದ ಸದಸ್ಯನಾಗಿ ಎಲ್ಲ ಸಹಾಯವನ್ನು ಮಾಡುತ್ತೇನೆ ಎಂದಿದ್ದಾರೆ.

ಇಬ್ಬರು ಪುಟ್ಟಮಕ್ಕಳ ಜತೆ ತಾಯಿ ಆತ್ಮಹತ್ಯೆ: ಮೇಲುಕೋಟೆಯಲ್ಲಿ ಹೃದಯ ವಿದ್ರಾವಕ ಘಟನೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ