ಆ್ಯಪ್ನಗರ

ರವೀಂದ್ರ ಗೆಲುವು, ಎಚ್ಡಿಕೆ ಸಿಎಂ: ಮ.ಬೆಟ್ಟಕ್ಕೆ ಮಹಿಳೆಯರ ಪಾದಯಾತ್ರೆ

ವಿಕ ಸುದ್ದಿಲೋಕ ಶ್ರೀರಂಗಪಟ್ಟಣ ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಎಸ್‌ರವೀಂದ್ರಶ್ರೀಕಂಠಯ್ಯ ಅವರ ಗೆಲುವು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌...

Vijaya Karnataka 26 May 2018, 5:00 am
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎ.ಎಸ್‌.ರವೀಂದ್ರಶ್ರೀಕಂಠಯ್ಯ ಅವರ ಗೆಲುವು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಹಿನ್ನೆಲೆಯಲ್ಲಿ ತಾಲೂಕಿನ ಅರಕೆರೆಯ ಕೆಲ ಮಹಿಳೆಯರು ಕಾಲ್ನಡಿಗೆಯಲ್ಲಿ ಶುಕ್ರವಾರ ಮಲೆ ಮಹಾದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳಿದರು.
Vijaya Karnataka Web ravindra and hd kumaraswamy win hiking for women from srirangapattana
ರವೀಂದ್ರ ಗೆಲುವು, ಎಚ್ಡಿಕೆ ಸಿಎಂ: ಮ.ಬೆಟ್ಟಕ್ಕೆ ಮಹಿಳೆಯರ ಪಾದಯಾತ್ರೆ


ವಿಧಾನಸಭೆಯಲ್ಲಿ ಎಚ್‌.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ವಿಶ್ವಾಸಮತ ಸಾಬೀತುಪಡಿಸುತ್ತಿದ್ದಂತೆ ಹರಕೆ ಹೊತ್ತಿದ್ದ ಶಾಸಕ ಎ.ಎಸ್‌.ರವೀಂದ್ರ ಶ್ರೀಕಂಠಯ್ಯ ಸ್ವಗ್ರಾಮ ಅರಕೆರೆ ಗ್ರಾಮದ 38 ಮಂದಿ ಮಹಿಳೆಯರು ಕಾಲ್ನಡಿಗೆಯಲ್ಲಿಯೇ ಮಲೆ ಮಹಾದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳಿದರು.

ಪಾದಾಯಾತ್ರೆ ನೇತೃತ್ವ ವಹಿಸಿರುವ ತಾ.ಪಂ.ಮಾಜಿ ಸದಸ್ಯೆ ಸುನೀತಾ ದಿವಾಕರ್‌ ಮಾತನಾಡಿ, ''ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದಿಂದ ಎ.ಎಸ್‌.ರವೀಂದ್ರ ಶ್ರೀಕಂಠಯ್ಯ ಗೆಲುವು ಸಾಧಿಸಬೇಕು. ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಎಂದು ಹರಕೆ ಹೊತ್ತಿದ್ದವು. ನಮ್ಮ ಹರಕೆಯಂತೆ ರವೀಂದ್ರ ಶ್ರೀಕಂಠಯ್ಯ ಭರ್ಜರಿ ಗೆಲುವು ಸಾಧಿಸಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ವಿಶ್ವಾಸ ಮತ ಗಳಿಸುವಲ್ಲಿ ಸಫಲರಾಗಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರುವುದು ರೈತರಿಗೆ ಹರುಷ ತಂದಿದೆ ಹಾಗಾಗಿ ಮಹಾದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಹರಕೆ ತೀರಿಸುತ್ತೇವೆ'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ