ಆ್ಯಪ್ನಗರ

ನೀರಿನ ಘಟಕ ದುರಸ್ತಿಗೊಳಿಸಿ

ಮದ್ದೂರು: ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೊಳಿಸುವಂತೆ ಒತ್ತಾಯಿಸಿ ರಾಜೇಗೌಡನದೊಡ್ಡಿ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿದರು.

Vijaya Karnataka 10 Sep 2018, 5:00 am
ರಾಜೇಗೌಡನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ
Vijaya Karnataka Web repair the water unit
ನೀರಿನ ಘಟಕ ದುರಸ್ತಿಗೊಳಿಸಿ


ಮದ್ದೂರು: ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೊಳಿಸುವಂತೆ ಒತ್ತಾಯಿಸಿ ರಾಜೇಗೌಡನದೊಡ್ಡಿ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿದರು.

ತಾಲೂಕಿನ ಕೆ.ಹೊನ್ನಲಗೆರೆ ಗ್ರಾ.ಪಂ.ವ್ಯಾಪ್ತಿಯ ರಾಜೇಗೌಡನದೊಡ್ಡಿ ಗ್ರಾಮದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆಗೂ ಮುನ್ನಾ ಶಿಥಿಲಗೊಂಡಿದ್ದು, ಕೂಡಲೇ ದುರಸ್ತಿಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಕಲ್ಪಿಸುವಂತೆ ಒತ್ತಾಯಿಸಿದರು.

ಒಂದೂವರೆ ವರ್ಷದ ಅವಧಿಯಲ್ಲಿ 10 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಘಟಕ ಉದ್ಘಾಟನೆ ಕಾಣದೆ ಅನಾಥವಾಗಿದ್ದು, ಕಳಪೆ ಕಾಮಗಾರಿ ಕೈಗೊಂಡಿರುವುದರಿಂದ ಈಗಾಗಲೇ ಘಟಕಕ್ಕೆ ಅಳವಡಿಸಿದ್ದ ಟೈಲ್ಸ್‌ ಸೇರಿದಂತೆ ಇನ್ನಿತರೆ ವಸ್ತುಗಳು ಕಿತ್ತು ಬಂದಿದ್ದು, ಸ್ಥಳೀಯ ಸಾರ್ವಜನಿಕರು ಗ್ರಾ.ಪಂ.ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲವೆಂದು ದೂರಿದರು.

ಘಟಕದ ಸುತ್ತಮುತ್ತ ಅನೈರ್ಮಲ್ಯ ತಾಂಡವವಾಡುತ್ತಿದ್ದು ವಿದ್ಯುತ್‌ ದೀಪ ಸೇರಿದಂತೆ ಇನ್ನಿತರೆ ಯಾವುದೇ ಸೌಲಭ್ಯಗಳನ್ನು ನೀಡದೆ ಗುತ್ತಿಗೆದಾರ ನಿರ್ಲಕ್ಷ ್ಯ ವಹಿಸಿದ್ದು ಶುದ್ಧ ಕುಡಿಯುವ ನೀರನ್ನು ಸೇವಿಸಬೇಕಾದ ಸ್ಥಳೀಯ ಸಾರ್ವಜನಿಕರು ಬ್ಯಾಡರಹಳ್ಳಿ, ಹೊಸೂರು, ಕೆ. ಹೊನ್ನಲಗೆರೆ ಹಾಗೂ ತೈಲೂರು ಗ್ರಾಮಗಳಿಗೆ ತೆರಳಬೇಕಾದ ಸ್ಥಿತಿ ಬಂದೊದಗಿದೆ ಎಂದು ಆರೋಪಿಸಿದರು.

ಕೂಡಲೇ ಗ್ರಾ.ಪಂ.ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಶಿಥಿಲಾವಸ್ಥೆಯಲ್ಲಿರುವ ಘಟಕವನ್ನು ದುರಸ್ತಿಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಕಲ್ಪಿಸಬೇಕೆಂದು ಒತ್ತಾಯಿಸಿದರಲ್ಲದೇ ತಪ್ಪಿದಲ್ಲಿ ಗ್ರಾ.ಪಂ.ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆ ವೇಳೆ ಶಂಕರೇಗೌಡ, ರಾಜೇಶ್‌, ದೇವರಾಜು, ರಾಜು, ಪುಟ್ಟೇಗೌಡ, ಮಹೇಶ್‌, ಬೊಮ್ಮಲಿಂಗಯ್ಯ, ಜಯರಾಮ್‌, ಮೋಟೇಗೌಡ, ಮುತ್ತುರಾಜು, ಕೃಷ್ಣಪ್ಪ, ರವಿ, ಲೋಕೇಶ್‌, ಸುರೇಶ್‌ ನೇತೃತ್ವವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ