ಆ್ಯಪ್ನಗರ

ಕೈ ನಾಯಕರ ಮನೆಗೆ ರೇವಣ್ಣ ಭೇಟಿ: ನಿಖಿಲ್‌ ಬೆಂಬಲಿಸುವಂತೆ ಮನವಿ

ರಾಹುಲ್‌ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕಾದಲ್ಲಿ ಪ್ರತಿಯೊಂದು ಲೋಕಸಭಾ ಕ್ಷೇತ್ರವನ್ನು ಗೆಲ್ಲುವುದು ಅನಿವಾರ್ಯವಾಗಿದೆ. ಮಂಡ್ಯ ಜಿಲ್ಲೆಯ ಪ್ರಬುದ್ಧ ಜನರು ಸಿನಿಮಾ ನಟರ ಬಣ್ಣದ ಮಾತುಗಳಿಗೆ ಮರುಳಾಗದೇ ಜನರ ಮಧ್ಯದಲ್ಲಿದ್ದುಕೊಂಡು ಕೆಲಸ ಮಾಡುವ, ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗೆ ಬದ್ಧರಾಗಿರುವ ಯುವ ನಾಯಕ ನಿಖಿಲ್‌ಕುಮಾರಸ್ವಾಮಿ ಅವರಿಗೆ ಮತ ನೀಡಿ ಜಿಲ್ಲೆಯ ಸ್ವಾಭಿಮಾನವನ್ನು ಎತ್ತಿಹಿಡಿಯಬೇಕು,'' ಎಂದು ಹೇಳಿದರು.

Vijaya Karnataka 2 Apr 2019, 2:49 pm
ಕೆ.ಆರ್‌.ಪೇಟೆ (ಮಂಡ್ಯ): ಕಾಂಗ್ರೆಸ್‌ ಮುಖಂಡರಾದ ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್‌ಖಾನ್‌ ಹಾಗೂ ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್‌, ಬಿ.ಪ್ರಕಾಶ್‌ ಅವರ ಪಟ್ಟಣದ ನಿವಾಸಗಳಿಗೆ ಸಚಿವ ಎಚ್‌.ಡಿ.ರೇವಣ್ಣ ಭೇಟಿ ನೀಡಿ ಮೈತ್ರಿ ಅಭ್ಯರ್ಥಿ ನಿಖಿಲ್‌ಕುಮಾರಸ್ವಾಮಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
Vijaya Karnataka Web ravanna


ಬಳಿಕ ಎಚ್‌.ಡಿ.ರೇವಣ್ಣ ಮಾತನಾಡಿ, ''ರಾಹುಲ್‌ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕಾದಲ್ಲಿ ಪ್ರತಿಯೊಂದು ಲೋಕಸಭಾ ಕ್ಷೇತ್ರವನ್ನು ಗೆಲ್ಲುವುದು ಅನಿವಾರ್ಯವಾಗಿದೆ. ಮಂಡ್ಯ ಜಿಲ್ಲೆಯ ಪ್ರಬುದ್ಧ ಜನರು ಸಿನಿಮಾ ನಟರ ಬಣ್ಣದ ಮಾತುಗಳಿಗೆ ಮರುಳಾಗದೇ ಜನರ ಮಧ್ಯದಲ್ಲಿದ್ದುಕೊಂಡು ಕೆಲಸ ಮಾಡುವ, ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗೆ ಬದ್ಧರಾಗಿರುವ ಯುವ ನಾಯಕ ನಿಖಿಲ್‌ಕುಮಾರಸ್ವಾಮಿ ಅವರಿಗೆ ಮತ ನೀಡಿ ಜಿಲ್ಲೆಯ ಸ್ವಾಭಿಮಾನವನ್ನು ಎತ್ತಿಹಿಡಿಯಬೇಕು,'' ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡರಾದ ಕೆ.ಯೂನಸ್‌ಖಾನ್‌, ಕೆ.ಗೌಸ್‌ಖಾನ್‌ ಅವರನ್ನು ಭೇಟಿ ಮಾಡಿ ಜೆಡಿಎಸ್‌ ಬೆಂಬಲಿಸಲು ಕೋರಿದರು. ಶಾಸಕರಾದ ಡಾ.ನಾರಾಯಣಗೌಡ, ಸಿ.ಎನ್‌.ಬಾಲಕೃಷ್ಣ, ತಾಲೂಕು ಜೆಡಿಎಸ್‌ ಅಧ್ಯಕ್ಷ ವೆಂಕಟಸುಬ್ಬೇಗೌಡ, ತಾಲೂಕು ಯುವ ಜೆಡಿಎಸ್‌ ಅಧ್ಯಕ್ಷ ಕೆ.ಆರ್‌.ಹೇಮಂತ್‌ಕುಮಾರ್‌ ಸೇರಿದಂತೆ ಕಾರ‍್ಯಕರ್ತರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ