ಆ್ಯಪ್ನಗರ

ಮಂಡ್ಯದಲ್ಲಿ ರಸ್ತೆ ಅಪಘಾತ: ಮೂವರು ಬಲಿ

ಮಂಡ್ಯ ಜಿಲ್ಲೆಯಲ್ಲಿ ನಡೆದ ರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಮೃತಪಟ್ಟಿದ್ದಾರೆ

ವಿಕ ಸುದ್ದಿಲೋಕ 14 Apr 2017, 10:26 am
ಮಂಡ್ಯ : ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಮದ್ದೂರು ಪಟ್ಟಣದ ಸಮೀಪದ ಅಡಿಗಾಸ್ ಹೋಟೆಲ್ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸರಕಾರಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಮೃತ ಪಟ್ಟಿದ್ದಾರೆ.
Vijaya Karnataka Web road accident in mandya three dead
ಮಂಡ್ಯದಲ್ಲಿ ರಸ್ತೆ ಅಪಘಾತ: ಮೂವರು ಬಲಿ


ಹನುಮಂತ ಪುರಗ್ರಾಮದ ಕೃಷ್ಣಪ್ಪ ಅವರ ಮಗ ಸುಧಾಕರ್ ಹಾಗೂ ರಾಮಕೃಷ್ಣ ಅವರ ಮಗ ಅವಿನಂದನ್ ಮೃತರು. ಶಿವಪುರದಲ್ಲಿ ಊಟ ಮುಗಿಸಿಕೊಂಡು ಗ್ರಾಮಕ್ಕೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಶ್ರೀರಂಗಪಟ್ಟಣ ಬೆಂಗಳೂರು ಮೈಸೂರು ಹೆದ್ದಾರಿಯ ಬೊಮ್ಮೂರು ಅಗ್ರಹಾರದ ಬಳಿ ಕಾರುಗಳು ಡಿಕ್ಕಿ ಹೊಡೆದು ಭುವನ(23) ಎಂಬವರು ಮೃತಪಟ್ಟಿದ್ದಾರೆ. ಮೈಸೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ಹಾರಿ ಬಂದು ಡಿಕ್ಕಿ ಹೊಡೆದು ಅಪಘಾತ ನಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ