ಆ್ಯಪ್ನಗರ

ಮಂಡ್ಯದಲ್ಲಿ ಗ್ರಾಮೀಣ ಐಟಿ ಕ್ವಿಜ್‌-2019

ವಿಕ ಸುದ್ದಿಲೋಕ ಮಂಡ್ಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಡತನವನ್ನೇ ಕೀಳಾಗಿ ಕಾಣಬಾರದು...

Vijaya Karnataka 21 Sep 2019, 5:00 am
ಮಂಡ್ಯ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಡತನವನ್ನೇ ಕೀಳಾಗಿ ಕಾಣಬಾರದು. ಅದನ್ನು ಮೆಟ್ಟಿನಿಂತು ಎದುರಿಸುವ ಸಾಮರ್ಥ್ಯ ಇರುವುದೇ ಶಿಕ್ಷಣಕ್ಕೆ ಎಂಬುನ್ನು ಅರಿತು ವಿದ್ಯಾಭ್ಯಾಸದಲ್ಲಿತೊಡಗಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಬಿ.ಚಂದ್ರಶೇಖರ್‌ ಹೇಳಿದರು.
Vijaya Karnataka Web rural it quiz program in mandya
ಮಂಡ್ಯದಲ್ಲಿ ಗ್ರಾಮೀಣ ಐಟಿ ಕ್ವಿಜ್‌-2019


ನಗರದ ಗಾಂಧಿ ಭನದಲ್ಲಿಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ, ಮಾಹಿತಿ ತಂತ್ರಜ್ಞಾನ, ಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಗ್ರಾಮೀಣ ಐಟಿ ಕ್ವಿಜ್‌-2019ರ ಕಾರ್ಯಕ್ರಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿನ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಬೇಕಿದೆ. ವಿಶ್ವದಲ್ಲಿನಡೆಯುವ ಸಾಮಾನ್ಯ ಜ್ಞಾನದ ಅರಿವು ಇರಬೇಕು. ಆ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದನ್ನು ಕಲಿತುಕೊಳ್ಳಬಹುದಾಗಿದೆ. ಎಲ್ಲಕ್ಷೇತ್ರಗಳಲ್ಲಿಯೂ ಅವಕಾಶವಿರುತ್ತದೆ ಎಂಬುದನ್ನು ವಿದ್ಯಾರ್ಥಿಗಳು ಮರೆಯಬಾರದು. ಆಯಾ ಕ್ಷೇತ್ರಕ್ಕೆ ಅನುಗುಣವಾಗಿ ನೈಪುಣ್ಯತೆ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳಿಗೆ ಸಾಧನೆ ಮಾಡುವ ಹಂಬಲ ಇರಬೇಕು. ಗುರಿ ಇರಿಸಿಕೊಂಡು ಆತ್ಮಸ್ಥೈರ್ಯದಿಂದ ಭವಿಷ್ಯ ರೂಪಿಸಿಕೊಳ್ಳಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿಸಾಮಾಜಿಕ ಕೀಳರಿಮೆ, ಬಡತನ, ಕೌಟುಂಬಿಕ ಮತ್ತು ಆರ್ಥಿಕ ಸಮಸ್ಯೆಗಳನ್ನು ನೆಪವಾಗಿಸಿಕೊಂಡು ಕಲಿಕೆ ಮೊಟಕುಗೊಳಿಸಬಾರದು. ಈ ಎಲ್ಲಸಮಸ್ಯೆಗಳನ್ನು ಮೆಟ್ಟಿನಿಂತುಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಗುರು ಹಿರಿಯರನ್ನು ಗೌರವಿಸುವುದು ವಿದ್ಯಾರ್ಥಿಗಳಿಗೆ ಮುಖ್ಯವಾಗಬೇಕು. ಮಹನೀಯರ ಮೌಲ್ಯವನ್ನು ಅರಿತುಕೊಂಡು ಅವರು ನಡೆದ ಬಂದ ದಾರಿಯನ್ನು ಮನನ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಉತ್ತಮ ನಡೆ, ನುಡಿ, ಆಚಾರ-ವಿಚಾರಗಳನ್ನು ಅರಿತುಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಆ ಮೂಲಕ ಉತ್ತಮ ಶಿಕ್ಷಣ ಪಡೆದು ಗುರಿ ಸಾಧನೆ ಮಾಡಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿನಾನಾ ಶಾಲಾ ಶಿಕ್ಷಕರೊಂದಿಗೆ ಆಗಮಿಸಿದ್ದ (100 ತಂಡಗಳಂತೆ, 200 ವಿದ್ಯಾರ್ಥಿಗಳು)ಆಯ್ದ ಪ್ರತಿಭಾವಂತ ವಿದ್ಯಾರ್ಥಿಗಳು 'ಗ್ರಾಮೀಣ ಐಟಿ ಕ್ವಿಜ್‌-2019'ರ ಸ್ಪರ್ಧೆಯಲ್ಲಿಭಾಗವಹಿಸಿದ್ದರು. ಉಪನಿರ್ದೇಶಕರ ಕಚೇರಿ ವಿಷಯ ಪರಿವೀಕ್ಷಕರಾದ ಶ್ರೀಧರ್‌, ಲಕ್ಷ್ಮೀ, ಮುನಿಯಪ್ಪ, ನಂಜರಾಜು, ನೋಡಲ್‌ ಅಧಿಕಾರಿ ಲೋಕೇಶ್‌ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ