Please enable javascript.ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ವ್ಯಕ್ತಿ ಬಂಧನ - Sale of marijuana in college students: man arrested - Vijay Karnataka

ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ವ್ಯಕ್ತಿ ಬಂಧನ

ವಿಕ ಸುದ್ದಿಲೋಕ 12 Jun 2016, 5:15 am
Subscribe

ಜಿಲ್ಲೆಯ ಪ್ರತಿಷ್ಠಿತ ಎಂಜಿನಿಯರಿಂಗ್‌ ಹಾಗೂ ಮೆಡಿಕಲ್‌ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿ 25 ಲಕ್ಷ ರೂ. ಮೌಲ್ಯದ 880 ಗ್ರಾಂ ಗಾಂಜಾ, 200 ಗ್ರಾಂ ಬ್ರೌನ್‌ ಷುಗರ್‌, 3 ಲೀಟರ್‌ ಲಿಕ್ಕರ್‌ ವಶಪಡಿಸಿಕೊಂಡಿದ್ದಾರೆ.

sale of marijuana in college students man arrested
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ವ್ಯಕ್ತಿ ಬಂಧನ

ಮಂಡ್ಯ: ಜಿಲ್ಲೆಯ ಪ್ರತಿಷ್ಠಿತ ಎಂಜಿನಿಯರಿಂಗ್‌ ಹಾಗೂ ಮೆಡಿಕಲ್‌ ಕಾಲೇಜುಗಳ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿ 25 ಲಕ್ಷ ರೂ. ಮೌಲ್ಯದ 880 ಗ್ರಾಂ ಗಾಂಜಾ, 200 ಗ್ರಾಂ ಬ್ರೌನ್‌ ಷುಗರ್‌, 3 ಲೀಟರ್‌ ಲಿಕ್ಕರ್‌ ವಶಪಡಿಸಿಕೊಂಡಿದ್ದಾರೆ.

ಪಿಇಎಸ್‌ ಎಂಜಿನಿಯರಿಂಗ್‌ ಕಾಲೇಜು ರಸ್ತೆಯ ಪೊಲೀಸ್‌ ವಸತಿ ಗೃಹಗಳ ಸಮೀಪ ವಾಸವಿರುವ ಚಲುವಪ್ಪಾಜಿ ಗೌಡ ಬಂಧಿತ ಆರೋಪಿ. ಮದ್ದೂರು ತಾಲೂಕು ಬಿದರಕೋಟೆ ಗ್ರಾಮದ ಚಲುವಪ್ಪಾಜಿ ಗೌಡ ಮಂಡ್ಯದಲ್ಲಿ ವಾಸವಾಗಿದ್ದ. ಖಚಿತ ಮಾಹಿತಿ ಮೇರೆಗೆ ನಗರದ ಪಶ್ಚಿಮ ಠಾಣೆ ಪೊಲೀಸರು ಶುಕ್ರವಾರ ರಾತ್ರಿ 10.30ರ ಸಮಯದಲ್ಲಿ ಚಲುವಪ್ಪಾಜಿ ಗೌಡ ನಿವಾಸದ ಮೇಲೆ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಗಾಂಜಾ, ಬ್ರೌನ್‌ ಶುಗರ್‌, ಲಿಕ್ಕರ್‌ಅನ್ನು ವಶಕ್ಕೆ ಪಡೆದಿದ್ದಾರೆ.

''ಚಲುವಪ್ಪಾಜಿ ಗೌಡ ತನ್ನಲ್ಲಿರುವ ಗಾಂಜಾ ಮತ್ತು ಬ್ರೌನ್‌ ಷುಗರ್‌ಅನ್ನು ಜಿಲ್ಲೆಯ ಕೆ.ಆರ್‌.ಪೇಟೆ, ನಾಗಮಂಗಲ, ಮಂಡ್ಯ ಮತ್ತಿತರ ಕಡೆಗಳಲ್ಲಿರುವ ಎಂಜಿನಿಯರಿಂಗ್‌, ಮೆಡಿಕಲ್‌ ಕಾಲೇಜು ಸೇರಿದಂತೆ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿರುವುದು ತನಿಖಾ ಸಮಯದಲ್ಲಿ ತಿಳಿದು ಬಂದಿದೆ'' ಎಂದು ಡಿವೈಎಸ್ಪಿ ಉದೇಶ್‌ ವಿಜಯ ಕರ್ನಾಟಕಕ್ಕೆ ತಿಳಿಸಿದ್ದಾರೆ.

''ಈತ ಆರ್‌ಟಿಐ ಕಾರ್ಯಕರ್ತನೆಂದು ಹೇಳಿಕೊಂಡು ಅಧಿಕಾರಿಗಳನ್ನು ಬ್ಲಾಕ್‌ಮೇಲ್‌ ಮಾಡುತ್ತಿದ್ದನೆಂಬುದು ತಿಳಿದು ಬಂದಿದೆ. ಗಾಂಜಾ ಮತ್ತು ಬೌನ್‌ ಷುಗರ್‌ ಇವುಗಳ ಮೂಲ ಪತ್ತೆಗೆ ತನಿಖೆ ನಡೆಯುತ್ತಿದೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ'' ಎಂದು ತಿಳಿಸಿದರು.

ಕಾರಾರ‍ಯಚರಣೆಯಲ್ಲಿ ಸಿಪಿಐ ಪ್ರೀತಂ ಶ್ರೇಯಾಕರ್‌, ಪಶ್ಚಿಮ ಪೊಲೀಸ್‌ ಠಾಣೆ ಪಿಎಸ್‌ಐ ಜಯಲಕ್ಷ್ಮಿ,ಅಪರಾಧ ದಳ ಸಿಬ್ಬಂದಿ ಹಾಜರಿದ್ದರು.

ಅಕ್ರಮ ಮದ್ಯ ಶೇಖರಣೆ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಅಬಕಾರಿ ಕಾಯ್ದೆ ನಿಯಮ (ಎನ್‌ಡಿಪಿಆರ್‌) ದಡಿ ಮೊಕದ್ದಮೆ ದಾಖಲು ಮಾಡಲಾಗಿದೆ. ಮೂರೂ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಷನ್‌ 32, 34 ಎ, 20 ಬಿ, 25, 29 ರಡಿ ಕೇಸ್‌ ದಾಖಲಿಸಲಾಗಿದೆ. ವಶಪಡಿಸಿಕೊಂಡಿರುವ ಗಾಂಜಾ ಮತ್ತು ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆ ವಶಕ್ಕೆ ನೀಡಲಾಗಿದೆ. ಉದೇಶ್‌, ಡಿವೈಎಸ್ಪಿ, ಮಂಡ್ಯ.

ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ