ವಿಕ ಸುದ್ದಿಲೋಕ ಶ್ರೀರಂಗಪಟ್ಟಣ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪುರಸಭೆ , ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಶ್ರಮದಾನದ ಮೂಲಕ ಪಟ್ಟಣದ ಪ್ರಮುಖ ಪ್ರವಾಸಿ ತಾಣ ಸಂಗಮ ಬಳಿ ಕಾವೇರಿ ನದಿ ದಡವನ್ನು ಮಂಗಳವಾರ ಸ್ವಚ್ಛಗೊಳಿಸಿದರು.
ಅಧಿಕಾರಿ ಹಾಗೂ ಸಿಬ್ಬಂದಿ ಕುಡುಗೋಲು, ಪಿಕಾಸಿ, ಗುದ್ದಲಿ ಹಿಡಿದು ಕಾವೇರಿ ನದಿ ದಡದಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟಿಕ್, ಹಳೆ ಬಟ್ಟೆ ಇನ್ನಿತರೆ ತ್ಯಾಜ್ಯಗಳನ್ನು ಹೊರ ತೆಗೆದು ನದಿ ಪಾತ್ರವನ್ನು ಸ್ವಚ್ಛಗೊಳಿಸಿದರು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಶ್ರಮದಾನ ಮಾಡಿದರು.
ನಂತರ ನದಿ ಅಕ್ಕಪಕ್ಕದ ಸ್ಥಳಗಳಲ್ಲಿ ಸಸಿಗಳನ್ನು ನೆಟ್ಟರು. ಬಳಿಕ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ವಿಜಯಕುಮಾರ್, ನದಿ ಆಸುಪಾಸಿನಲ್ಲಿ ಪ್ರವಾಸಿಗರು ಹಾಗೂ ಸಾರ್ವಜನಿಕರು ಸ್ವಚ್ಛತೆ ಕಾಪಾಡಬೇಕು. ಪುರಸಭೆ ಅಥವಾ ಸರಕಾರದಿಂದಲೇ ಎಲ್ಲವನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಸಾರ್ವಜನಿಕರ ಸಹಭಾಗಿತ್ವವೂ ಇರಬೇಕೆಂದು ಮನವಿ ಮಾಡಿದರು.
ಪ್ರವಾಸೋದ್ಯಮ ಇಲಾಖೆಯ ಸೌಮ್ಯ, ಪರಿಸರ ಎಂಜಿನಿಯರ್ ವಿಜಯ್, ಆರೋಗ್ಯ ನಿರೀಕ್ಷಕ ಶಿವಶಂಕರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಸ್ಥಳೀಯ ಅಂಗಡಿ, ಮುಂಗಟ್ಟುಗಳ ಮಾಲೀಕರು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಎಂಡಿವೈ5ಎಸ್ಆರ್ಪಿ2
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ಹೊರವಲಯದ ಸಂಗಮ್ ಬಳಿಯ ಕಾವೇರಿ ನದಿ ತೀರದಲ್ಲಿ ಪುರಸಭೆ ಹಾಗೂ ಪ್ರವಾಸೋಧ್ಯಮ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಸ್ವಚ್ಛತೆ ನಡೆಸಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪುರಸಭೆ , ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಶ್ರಮದಾನದ ಮೂಲಕ ಪಟ್ಟಣದ ಪ್ರಮುಖ ಪ್ರವಾಸಿ ತಾಣ ಸಂಗಮ ಬಳಿ ಕಾವೇರಿ ನದಿ ದಡವನ್ನು ಮಂಗಳವಾರ ಸ್ವಚ್ಛಗೊಳಿಸಿದರು.
ಅಧಿಕಾರಿ ಹಾಗೂ ಸಿಬ್ಬಂದಿ ಕುಡುಗೋಲು, ಪಿಕಾಸಿ, ಗುದ್ದಲಿ ಹಿಡಿದು ಕಾವೇರಿ ನದಿ ದಡದಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟಿಕ್, ಹಳೆ ಬಟ್ಟೆ ಇನ್ನಿತರೆ ತ್ಯಾಜ್ಯಗಳನ್ನು ಹೊರ ತೆಗೆದು ನದಿ ಪಾತ್ರವನ್ನು ಸ್ವಚ್ಛಗೊಳಿಸಿದರು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಶ್ರಮದಾನ ಮಾಡಿದರು.
ನಂತರ ನದಿ ಅಕ್ಕಪಕ್ಕದ ಸ್ಥಳಗಳಲ್ಲಿ ಸಸಿಗಳನ್ನು ನೆಟ್ಟರು. ಬಳಿಕ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ವಿಜಯಕುಮಾರ್, ನದಿ ಆಸುಪಾಸಿನಲ್ಲಿ ಪ್ರವಾಸಿಗರು ಹಾಗೂ ಸಾರ್ವಜನಿಕರು ಸ್ವಚ್ಛತೆ ಕಾಪಾಡಬೇಕು. ಪುರಸಭೆ ಅಥವಾ ಸರಕಾರದಿಂದಲೇ ಎಲ್ಲವನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಸಾರ್ವಜನಿಕರ ಸಹಭಾಗಿತ್ವವೂ ಇರಬೇಕೆಂದು ಮನವಿ ಮಾಡಿದರು.
ಪ್ರವಾಸೋದ್ಯಮ ಇಲಾಖೆಯ ಸೌಮ್ಯ, ಪರಿಸರ ಎಂಜಿನಿಯರ್ ವಿಜಯ್, ಆರೋಗ್ಯ ನಿರೀಕ್ಷಕ ಶಿವಶಂಕರ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಸ್ಥಳೀಯ ಅಂಗಡಿ, ಮುಂಗಟ್ಟುಗಳ ಮಾಲೀಕರು, ಸಾರ್ವಜನಿಕರು ಹಾಗೂ ಪ್ರವಾಸಿಗರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಎಂಡಿವೈ5ಎಸ್ಆರ್ಪಿ2
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ಹೊರವಲಯದ ಸಂಗಮ್ ಬಳಿಯ ಕಾವೇರಿ ನದಿ ತೀರದಲ್ಲಿ ಪುರಸಭೆ ಹಾಗೂ ಪ್ರವಾಸೋಧ್ಯಮ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಸ್ವಚ್ಛತೆ ನಡೆಸಿದರು.