ಆ್ಯಪ್ನಗರ

ಸರಕಾರದ ಯೋಜನೆ ಸದುಪಯೋಗಪಡಿಸಿಕೊಳ್ಳಿ

ಸರಕಾರ ಮಹಿಳೆಯರ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೊಳಿಸು ತ್ತಿದ್ದು, ಇದರ ಸದುಪಯೋಗಕ್ಕೆ ಮುಂದಾಗುವ ಮೂಲಕ ಆರ್ಥಿಕಾಭಿವದ್ಧಿ ಹೊಂದಬೇಕು ಎಂದು ಜಿ.ಪಂ. ಅಧ್ಯಕ್ಷೆ ನಾಗರತ್ನಸ್ವಾಮಿ ತಿಳಿಸಿದರು.

Vijaya Karnataka 7 Jun 2019, 8:56 pm
ಮದ್ದೂರು: ಸರಕಾರ ಮಹಿಳೆಯರ ಸಬಲೀಕರಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೊಳಿಸು ತ್ತಿದ್ದು, ಇದರ ಸದುಪಯೋಗಕ್ಕೆ ಮುಂದಾಗುವ ಮೂಲಕ ಆರ್ಥಿಕಾಭಿವದ್ಧಿ ಹೊಂದಬೇಕು ಎಂದು ಜಿ.ಪಂ. ಅಧ್ಯಕ್ಷೆ ನಾಗರತ್ನಸ್ವಾಮಿ ತಿಳಿಸಿದರು.
Vijaya Karnataka Web MDY-MDY7MDR2


ತಾಲೂಕಿನ ಕುದರಗುಂಡಿ ಗ್ರಾಮದಲ್ಲಿ ನೆಹರು ಯುವಕೇಂದ್ರ ಹಾಗೂ ಸರಸ್ವತಿ ಮಹಿಳಾ ಮಂಡಳಿ, ಬಸವನಪುರ ಸಂಯುಕ್ತಾಶ್ರಯಲ್ಲಿ ಆಯೋಜಿಸಿದ್ದ ಸರಸ್ವತಿ ಮಹಿಳಾ ಮಂಡಳಿಯ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.

‘‘ಮಹಿಳೆಯರು ಸ್ವಾವಲಂಬಿ ಬದುಕನ್ನು ಕಂಡುಕೊಳ್ಳುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಕಿವಿಮಾತು ಹೇಳಿದರ ಲ್ಲದೇ ಹಲವಾರು ಉಪ ಕಸುಬುಗಳನ್ನು ಕೈಗೊಂಡು ನೇರವಾಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಮೂಲಕ ಅಧಿಕ ಲಾಭ ಗಳಿಕೆಗೆ ಮುಂದಾಗಬೇಕು. ತಮ್ಮ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಂಡು ಗ್ರಾಮಾಭಿವದ್ಧಿಗೆ ಸಂಘ, ಸಂಸ್ಥೆಗಳೊಂದಿಗೆ ಕೈಜೋಡಿಸಬೇಕೆಂದರಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಉನ್ನತ ಸಾಧನೆ ಮಾಡುತ್ತಿ ರುವುದು ಸಂತಸದ ಬೆಳವಣಿಗೆಯಾಗಿದೆ,’’ ಎಂದರು.

‘‘ಅವಶಾನದ ಹಂಚಿನಲ್ಲಿರುವ ಗ್ರಾಮೀಣ ಸೊಗಡನ್ನು ಉಳಿಸಿ, ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾ ಗಬೇಕಿದ್ದು, ಮಹಿಳೆಯರು ಕೇವಲ ಧಾರಾವಾಹಿಗಳಿಗಷ್ಟೇ ಸೀಮಿತವಾಗದೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ‌್ಯಕ್ರಮಗಳಲ್ಲಿ ಪಾಲ್ಗೊಂಡು ಸಂಘ, ಸಂಸ್ಥೆಗಳ ಉನ್ನತಿಗೆ ನೆರೆವಾಗಬೇಕು ಎಂದು ಹೇಳಿದರು.

ಗ್ರಾ.ಪಂ. ಅಧ್ಯಕ್ಷೆ ಸುವರ್ಣ ಮಹದೇವು, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಸ್. ನಾಗೇಶ್, ಮಾಜಿ ಗ್ರಾ.ಪಂ. ಅಧ್ಯಕ್ಷ ಕೆ.ಎಲ್. ಪ್ರಭು, ಯುವಜನ ಸೇವಾ ಕ್ರೀಡಾ ಇಲಾಖೆಯ ಡಾ. ಬಿ.ವಿ.ನಂದೀಶ್, ಎಂಪಿಸಿಎಸ್ ಅಧ್ಯಕ್ಷ ಮಹೇಶ್, ಮುಖಂಡರಾದ ಕೆ.ಎಲ್. ಶಶಿಕಲಾ, ಮಂಜುಳಾ, ಬಿ.ಎಸ್. ಅನುಪಮ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ