ಆ್ಯಪ್ನಗರ

ಮದ್ದೂರಮ್ಮನ ದರ್ಶನ ಪಡೆದ ಶೋಭಾಕರಂದ್ಲಾಜೆ

ವಿಕ ಸುದ್ದಿಲೋಕ ಮದ್ದೂರು ಸದನದಲ್ಲಿ ವಿಶ್ವಾಸ ಮತಯಾಚನೆ ಕುತೂಹಲ ಮೂಡಿಸಿರುವ ನಡುವೆ ಸಂಸದೆ ಶೋಭಾ ಕರಂದ್ಲಾಜೆ ಮದ್ದೂರಮ್ಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ದರ್ಶನ ...

Vijaya Karnataka 20 Jul 2019, 5:00 am
ಮದ್ದೂರು: ಸದನದಲ್ಲಿ ವಿಶ್ವಾಸ ಮತಯಾಚನೆ ಕುತೂಹಲ ಮೂಡಿಸಿರುವ ನಡುವೆ ಸಂಸದೆ ಶೋಭಾ ಕರಂದ್ಲಾಜೆ ಮದ್ದೂರಮ್ಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ದರ್ಶನ ಪಡೆದರು.
Vijaya Karnataka Web shobha karandlaje visit madduru temple
ಮದ್ದೂರಮ್ಮನ ದರ್ಶನ ಪಡೆದ ಶೋಭಾಕರಂದ್ಲಾಜೆ


ಮೂರನೇ ಆಷಾಢ ಶುಕ್ರವಾರದ ಪ್ರಯುಕ್ತ ಬೆಳಗ್ಗೆ ಮೈಸೂರಿಗೆ ಭೇಟಿ ನೀಡಿದ್ದ ಅವರು ಬಳಿಕ ಬೆಂಗಳೂರಿಗೆ ತೆರಳುವ ಮಾರ್ಗಮಧ್ಯೆ ಪಟ್ಟಣದ ಶ್ರೀಮದ್ದೂರಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ದೇವಾಲಯದಲ್ಲಿ ಭಕ್ತರ ದಂಡೇ ನೆರೆದಿತ್ತಾದರೂ ಸ್ಥಳೀಯ ಸಾರ್ವಜನಿಕರು ಮತ್ತು ಅರ್ಚಕರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಟ್ಟರು.

ಬಳಿಕ ಮಾತನಾಡಿದ ಅವರು, ''ಸಮ್ಮಿಶ್ರ ಸರಕಾರದಲ್ಲಿ ರಾಜ್ಯದ ಅಭಿವೃದ್ಧಿ ಹಿನ್ನೆಡೆಯತ್ತ ಸಾಗಿದೆ. ಚಾಲ್ತಿಯಲ್ಲಿರುವ ವಿಶ್ವಾಸ ಮತಯಾಚನೆ ವೇಳೆ ಬಿಜೆಪಿಗೆ ಒಳಿತಾಗುವ ಜತೆಗೆ ಮುಂದಿನ ದಿನಗಳಲ್ಲಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರಲಿದೆ,'' ಎಂದು ಹೇಳಿ ವಿಶೇಷ ಪೂಜೆ ಸಲ್ಲಿಕೆ ಬಳಿಕ ಅಲ್ಲಿಂದ ತೆರಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ