ಆ್ಯಪ್ನಗರ

ಸಿದ್ದರಾಮಯ್ಯ-ದೇವೇಗೌಡರ ಅಪ್ಪುಗೆ ಅಪ್ರಾಮಾಣಿಕವಾದುದು: ಅಶೋಕ್‌

ಅಶೋಕ್‌ ವಿಕ ಸುದ್ದಿಲೋಕ ಶ್ರೀರಂಗಪಟ್ಟಣ ದೇವೇಗೌಡ ಹಾಗೂ ಸಿದ್ದರಾಮಯ್ಯ ಅವರ ಧೃತರಾಷ್ಟ್ರನ ಆಲಿಂಗನ ಎಲ್ಲಿಯವರೆಗೆ ಇರುತ್ತದೆಯೋ ನೋಡೋಣ ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌...

Vijaya Karnataka 24 Oct 2018, 5:00 am
ಶ್ರೀರಂಗಪಟ್ಟಣ: ದೇವೇಗೌಡ ಹಾಗೂ ಸಿದ್ದರಾಮಯ್ಯ ಅವರ ಧೃತರಾಷ್ಟ್ರನ ಆಲಿಂಗನ ಎಲ್ಲಿಯವರೆಗೆ ಇರುತ್ತದೆಯೋ ನೋಡೋಣ ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ವ್ಯಂಗ್ಯವಾಡಿದ್ದಾರೆ.
Vijaya Karnataka Web siddaramaiah devgowda hug this is dishonest says r ashok
ಸಿದ್ದರಾಮಯ್ಯ-ದೇವೇಗೌಡರ ಅಪ್ಪುಗೆ ಅಪ್ರಾಮಾಣಿಕವಾದುದು: ಅಶೋಕ್‌


ಶ್ರೀರಂಗಪಟ್ಟಣ ಖಾಸಗಿ ಬಸ್‌ ನಿಲ್ದಾಣ ಆವರಣದಲ್ಲಿ ಮಂಗಳವಾರ ನಡೆದ ಬಿಜೆಪಿ ಲೋಕಸಭೆ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪರ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ''ದೇವೇಗೌಡ ಹಾಗೂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಒಂದಾಗಲು ಸಾಧ್ಯವಿಲ್ಲ. ಜೆಡಿಎಸ್‌-ಕಾಂಗ್ರೆಸ್‌ ಹೊಂದಾಣಿಕೆ ಒಡೆದ ಹಾಲಿನಂತೆ'' ಎಂದರು.

''ಕೇಂದ್ರದಲ್ಲಿ ಮೋದಿ ಸರಕಾರ ಪ್ರಪಂಚವೇ ಮೆಚ್ಚುವ ರೀತಿ ಕಳಂಕ ರಹಿತ ಆಡಳಿತ ನಡೆಸಿದೆ. ಜಿಲ್ಲೆಯ ಎಲ್ಲ ಸಮಸ್ಯೆಗಳು ಬಗೆಹರಿಬೇಕಾದರೆ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕು. ಪುಟ್ಟರಾಜು ಸಂಸದರಾಗಿ ಏನೂ ಕೆಲಸ ಮಾಡಿಲ್ಲ. ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ನಿಂತಿಲ್ಲ. ಸಾಲ ಮನ್ನಾ ಹಣ ಬಿಡುಗಡೆಯಾಗಿಲ್ಲ'' ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಮಾತನಾಡಿ, ''ಮೈಸೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಿದ್ದ ದೇವೇಗೌಡರು ಇದೀಗ ಅವರನ್ನೇ ಅಪ್ಪಿಕೊಂಡಿದ್ದಾರೆ. ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆಲ್ಲದಿದ್ದರೆ ಅವರ ರಾಜಕೀಯ ಭವಿಷ್ಯ ಏನಾಗುತ್ತಿತ್ತು ಎಂಬುದನ್ನು ಯೋಚಿಸಿ. ಸಿದ್ದರಾಮಯ್ಯ ಹಾಗೂ ದೇವೇಗೌಡ ಅಪ್ಪುಗೆ ಪ್ರಾಮಾಣಿಕವಾದುದ್ದಲ್ಲ'' ಎಂದರು.

ಅಭ್ಯರ್ಥಿ ಡಾ.ಸಿದ್ದರಾಮಯ್ಯ, ಶಾಸಕರಾದ ನಾಗೇಂದ್ರ, ನಿರಂಜನಕುಮಾರ್‌, ಎಸ್ಸಿ ಮೋರ್ಚಾ ಉಪಾಧ್ಯಕ್ಷ ಡಿ.ಎಸ್‌.ವೀರಯ್ಯ, ಪಕ್ಷದ ಜಿಲ್ಲಾಧ್ಯಕ್ಷ ನಾಗಣ್ಣ, ರೈತ ಮುಖಂಡ ಕೆ.ಎಸ್‌ ನಂಜುಂಡೇಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ಟಿ.ಶ್ರೀಧರ್‌ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ