ಆ್ಯಪ್ನಗರ

ಶ್ರೀರಂಗಪಟ್ಟಣ: ಜೆಡಿಎಸ್‌ನಿಂದ ಸಂಭ್ರಮಾಚರಣೆ

ವಿಕ ಸುದ್ದಿಲೋಕ ಶ್ರೀರಂಗಪಟ್ಟಣ ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎಎಸ್‌...

Vijaya Karnataka 16 May 2018, 5:00 am
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎ.ಎಸ್‌.ರವೀಂದ್ರ ಶ್ರೀಕಂಠಯ್ಯ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾರ‍್ಯಕರ್ತರು ಪಟ್ಟಣದಲ್ಲಿ ಸಂಭ್ರಮಾಚರಿಸಿದರು.
Vijaya Karnataka Web srirangapatna celebration by jds workers
ಶ್ರೀರಂಗಪಟ್ಟಣ: ಜೆಡಿಎಸ್‌ನಿಂದ ಸಂಭ್ರಮಾಚರಣೆ


ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಕುವೆಂಪು ವೃತ್ತದಲ್ಲಿ ಜಮಾವಣೆಗೊಂಡ ಜೆಡಿಎಸ್‌ ಕಾರ‍್ಯಕರ್ತರು ಹಾಗೂ ರವೀಂದ್ರ ಶ್ರೀಕಂಠಯ್ಯ ಅವರ ಅಭಿಮಾನಿಗಳು, ಸಾರ್ವಜನಿಕರಿಗೆ ಸಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ನಂತರ ಪಟ್ಟಣದ ಮುಖ್ಯ ರಸ್ತೆಯಲ್ಲಿ ಬೈಕ್‌ ರಾರ‍ಯಲಿ ನಡೆಸಿದರು.

ಜೆಡಿಎಸ್‌ ಪಕ್ಷ ದ ಮುಖಂಡರು ಮಾತನಾಡಿ, ಕ್ಷೇತ್ರದ ಮತದಾರರು ಜೆಡಿಎಸ್‌ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಅವರನ್ನು ಗೆಲ್ಲಿಸುವ ಮೂಲಕ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರ ಶಕ್ತಿಯನ್ನು ಸಾಬೀತು ಮಾಡಿದ್ದಾರೆ. ಪಕ್ಷ ಕ್ಕೆ ದ್ರೋಹ ಬಗೆದು ಕಾಂಗ್ರೆಸ್‌ ಪಕ್ಷ ಸೇರಿದ ಎ.ಬಿ.ರಮೇಶಬಂಡಿಸಿದ್ದೇಗೌಡ ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಪಕ್ಷ ದ್ರೋಹ ಎಸೆಗುವವರಿಗೆ ಬುದ್ದಿ ಕಲಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ