ಪಾಂಡವಪುರ: ಸಚಿವ ಸಂಪುಟದಿಂದ ವಸತಿ ಸಚಿವ ಅಂಬರೀಷ್ ಅವರನ್ನು ಕೈಬಿಟ್ಟಿರುವುದನ್ನು ವಿರೋಧಿಸಿ ಪಾಂಡವಪುರ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಂಬರೀಷ್ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.
ಪಟ್ಟಣದ ಐದುದೀಪ ವತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಸಿ. ಮಂಜುನಾಥ್ ನೇತತ್ವದಲ್ಲಿ ಜಮಾಹಿಸಿದ ಕಾರ್ಯಕರ್ತರು ಶ್ರೀರಂಗಪಟ್ಟಣ-ಜೇವರ್ಗಿ ಮುಖ್ಯರಸ್ತೆ ತಡೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವಸತಿ ಸಚಿವ ಅಂಬರೀಷ್ ಸಂಸದ ರಾಗಿ, ಕೇಂದ್ರ ಸಚಿವರಾಗಿ, ಶಾಸಕರಾಗಿ ರಾಜ್ಯ ಸಚಿವ ಸಂಪುಟದಲ್ಲಿ ವಸತಿ ಸಚಿವರಾಗಿ ಕಳೆದ ಮೂರು ವರ್ಷದಲ್ಲಿ ಯಾವುದೇ ಭ್ರಷ್ಟಾಚಾರದ ಆರೋಪ ಇಲ್ಲದೆ ಪ್ರಾಮಾಣಿಕ ಸಚಿವನಾಗಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಆರೋಪವೂ ಇಲ್ಲದ ಅಂಬರೀಷ್ ಅವರನ್ನು ಸಚಿವ ಸಂಪುಟದಿಂದ ಕೈಬಿಡುವ ಮೂಲಕ ಮಂಡ್ಯ ಜಿಲ್ಲೆಯ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟಬೇಕಾದರೆ ಅಂಬರೀಷ್ ಅವರ ಪಾತ್ರ ಹೆಚ್ಚಾಗಿದೆ. ರಾಜ್ಯದಲ್ಲಿ, ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಬೇಕಾದರೆ ಅಂಬರೀಷ್ ಅವರ ನೇತತ್ವ ಅತ್ಯವಶ್ಯಕವಾಗಿದೆ. ಕಾವೇರಿ ಸಮಸ್ಯೆ ಎದುರಾದಾಗ ಕೇಂದ್ರ ಮಂತ್ರಿ ಸ್ಥಾನಕ್ಕೆ ರಾಜೀನಾಮೆಕೊಟ್ಟು ಹೊರನಡೆದಂತಹ ನಾಯಕ ಇಂತಹ ನಾಯಕರನ್ನೇ ಸಚಿವ ಸಂಪುಟದಿಂದ ಕೈಬಿಟ್ಟಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಸಚಿವ ಅಂಬರೀಷ್ ಅವರನ್ನು ಸಚಿವ ಸಂಪುಟ ದಿಂದ ಕೈ ಬಿಡಬಾರದು. ಈ ರೀತಿ ನಡೆದರೆ ಹೋರಾಟವನ್ನ ತೀವ್ರಗೊಳಿಸಬೇಕಾಗು ತ್ತದೆ ಎಂದು ಎಚ್ಚರಿಸಿದರು.
ತಾಪಂ ಮಾಜಿ ಅಧ್ಯಕ್ಷ ಎಚ್.ಎಂ.ರಾಮಕಷ್ಣ, ಪಿಎಸ್ಎಸ್ಕೆ ಉಪಾಧ್ಯಕ್ಷ ಹಾರೋಹಳ್ಳಿ ನಂಜುಂಡೇಗೌಡ, ಪುರಸಭೆ ಸದಸ್ಯ ಡಿ.ಹುಚ್ಚೇಗೌಡ, ಕಾಂಗ್ರೆಸ್ ಮುಖಂಡರಾದ ಹಿರೇಮರಳಿ ಚನ್ನೇಗೌಡ, ದಯಾನಂದ ಬಾಬು, ಅಂಬರೀಷ್ ಅಭಿಮಾನಿ ಬಳದ ಜಿಲ್ಲಾ ಉಪಾಧ್ಯಕ್ಷ ಅರ್ಜುನ್, ನಾಗರಾಜು, ಕೆನ್ನಾಳು ರಾಮಕಷ್ಣ, ಮಾಲತಿ ಮರಿಸ್ವಾಮಿ, ಪ್ರಸನ್ನ, ಕಷ್ಣಮೂರ್ತಿ, ಬಂಕ್ಶ್ರೀನಿವಾಸ್, ಚಿಕ್ಕರಂಗ, ಪಾಪು, ಶ್ರೀನಿವಾಸ್ ಮತ್ತಿತರರು ಭಾಗವಹಿಸಿದರು.
ಪಟ್ಟಣದ ಐದುದೀಪ ವತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಸಿ. ಮಂಜುನಾಥ್ ನೇತತ್ವದಲ್ಲಿ ಜಮಾಹಿಸಿದ ಕಾರ್ಯಕರ್ತರು ಶ್ರೀರಂಗಪಟ್ಟಣ-ಜೇವರ್ಗಿ ಮುಖ್ಯರಸ್ತೆ ತಡೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವಸತಿ ಸಚಿವ ಅಂಬರೀಷ್ ಸಂಸದ ರಾಗಿ, ಕೇಂದ್ರ ಸಚಿವರಾಗಿ, ಶಾಸಕರಾಗಿ ರಾಜ್ಯ ಸಚಿವ ಸಂಪುಟದಲ್ಲಿ ವಸತಿ ಸಚಿವರಾಗಿ ಕಳೆದ ಮೂರು ವರ್ಷದಲ್ಲಿ ಯಾವುದೇ ಭ್ರಷ್ಟಾಚಾರದ ಆರೋಪ ಇಲ್ಲದೆ ಪ್ರಾಮಾಣಿಕ ಸಚಿವನಾಗಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಆರೋಪವೂ ಇಲ್ಲದ ಅಂಬರೀಷ್ ಅವರನ್ನು ಸಚಿವ ಸಂಪುಟದಿಂದ ಕೈಬಿಡುವ ಮೂಲಕ ಮಂಡ್ಯ ಜಿಲ್ಲೆಯ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟಬೇಕಾದರೆ ಅಂಬರೀಷ್ ಅವರ ಪಾತ್ರ ಹೆಚ್ಚಾಗಿದೆ. ರಾಜ್ಯದಲ್ಲಿ, ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಬೇಕಾದರೆ ಅಂಬರೀಷ್ ಅವರ ನೇತತ್ವ ಅತ್ಯವಶ್ಯಕವಾಗಿದೆ. ಕಾವೇರಿ ಸಮಸ್ಯೆ ಎದುರಾದಾಗ ಕೇಂದ್ರ ಮಂತ್ರಿ ಸ್ಥಾನಕ್ಕೆ ರಾಜೀನಾಮೆಕೊಟ್ಟು ಹೊರನಡೆದಂತಹ ನಾಯಕ ಇಂತಹ ನಾಯಕರನ್ನೇ ಸಚಿವ ಸಂಪುಟದಿಂದ ಕೈಬಿಟ್ಟಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಸಚಿವ ಅಂಬರೀಷ್ ಅವರನ್ನು ಸಚಿವ ಸಂಪುಟ ದಿಂದ ಕೈ ಬಿಡಬಾರದು. ಈ ರೀತಿ ನಡೆದರೆ ಹೋರಾಟವನ್ನ ತೀವ್ರಗೊಳಿಸಬೇಕಾಗು ತ್ತದೆ ಎಂದು ಎಚ್ಚರಿಸಿದರು.
ತಾಪಂ ಮಾಜಿ ಅಧ್ಯಕ್ಷ ಎಚ್.ಎಂ.ರಾಮಕಷ್ಣ, ಪಿಎಸ್ಎಸ್ಕೆ ಉಪಾಧ್ಯಕ್ಷ ಹಾರೋಹಳ್ಳಿ ನಂಜುಂಡೇಗೌಡ, ಪುರಸಭೆ ಸದಸ್ಯ ಡಿ.ಹುಚ್ಚೇಗೌಡ, ಕಾಂಗ್ರೆಸ್ ಮುಖಂಡರಾದ ಹಿರೇಮರಳಿ ಚನ್ನೇಗೌಡ, ದಯಾನಂದ ಬಾಬು, ಅಂಬರೀಷ್ ಅಭಿಮಾನಿ ಬಳದ ಜಿಲ್ಲಾ ಉಪಾಧ್ಯಕ್ಷ ಅರ್ಜುನ್, ನಾಗರಾಜು, ಕೆನ್ನಾಳು ರಾಮಕಷ್ಣ, ಮಾಲತಿ ಮರಿಸ್ವಾಮಿ, ಪ್ರಸನ್ನ, ಕಷ್ಣಮೂರ್ತಿ, ಬಂಕ್ಶ್ರೀನಿವಾಸ್, ಚಿಕ್ಕರಂಗ, ಪಾಪು, ಶ್ರೀನಿವಾಸ್ ಮತ್ತಿತರರು ಭಾಗವಹಿಸಿದರು.