ಆ್ಯಪ್ನಗರ

ಶ್ರೀರಂಗಪಟ್ಟಣ: ಜುಲೈ 6ರವರೆಗೆ ಗಣಿಗಾರಿಕೆ ನಿಷೇಧ

ಅನಧಿಕೃತ ಕಲ್ಲು ಗಣಿಗಾರಿಕೆಯಿಂದ ಸಾವು, ನೋವು ಸಂಭವಿಸುತ್ತಿವೆ ಹಾಗೂ ಮನೆಗಳಿಗೆ ಹಾನಿಯಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಜೂ.22ರಿಂದ 14 ದಿನಗಳವರೆಗೆ ತಾಲೂಕಿನಲ್ಲಿ ಗಣಿಗಾರಿಕೆ ನಡೆಯುವ ಪ್ರದೇಶಗಳಲ್ಲಿ ನಿಷೇಧಾಜ್ಞೆ ವಿಧಿಸಿ ತಹಸೀಲ್ದಾರ್‌ ಡಿ.ನಾಗೇಶ್‌ ಆದೇಶ ಹೊರಡಿಸಿದ್ದಾರೆ.

Vijaya Karnataka 24 Jun 2019, 5:00 am
ಶ್ರೀರಂಗಪಟ್ಟಣ : ಅನಧಿಕೃತ ಕಲ್ಲು ಗಣಿಗಾರಿಕೆಯಿಂದ ಸಾವು, ನೋವು ಸಂಭವಿಸುತ್ತಿವೆ ಹಾಗೂ ಮನೆಗಳಿಗೆ ಹಾನಿಯಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಜೂ.22ರಿಂದ 14 ದಿನಗಳವರೆಗೆ ತಾಲೂಕಿನಲ್ಲಿ ಗಣಿಗಾರಿಕೆ ನಡೆಯುವ ಪ್ರದೇಶಗಳಲ್ಲಿ ನಿಷೇಧಾಜ್ಞೆ ವಿಧಿಸಿ ತಹಸೀಲ್ದಾರ್‌ ಡಿ.ನಾಗೇಶ್‌ ಆದೇಶ ಹೊರಡಿಸಿದ್ದಾರೆ.
Vijaya Karnataka Web srirangapatna mining banned till july 6
ಶ್ರೀರಂಗಪಟ್ಟಣ: ಜುಲೈ 6ರವರೆಗೆ ಗಣಿಗಾರಿಕೆ ನಿಷೇಧ


ತಾಲೂಕಿನ ಚೆನ್ನನಕೆರೆ ಬಳಿ ಕಲ್ಲುಕ್ವಾರಿಯಲ್ಲಿ ಸ್ಫೋಟಕ ಸಿಡಿದು ಕಾರ್ಮಿಕ ಮೃತಪಟ್ಟಿದ್ದಾನೆ ಎಂದು ಪ್ರತಿಭಟನೆ ನಡೆದ ಬೆನ್ನಲ್ಲೆ ಚೆನ್ನನಕೆರೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ಜೂನ್‌ 22ರಂದು ಸಂಜೆ 6ರಿಂದ ಜುಲೈ 6ರ ಸಂಜೆ 6ಗಂಟೆವರೆಗೆ ಸಿಆರ್‌ಪಿಸಿ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.

ತಾಲೂಕಿನ ಜಕ್ಕನಹಳ್ಳಿ, ಕಾಳೇನಹಳ್ಳಿ, ಗಣಂಗೂರು, ಸಿದ್ದಾಪುರ, ಮುಂಡುಗದೊರೆ, ಹಂಗರಹಳ್ಳಿ, ಗೌಡಹಳ್ಳಿ, ಕೋಡಿಶೆಟ್ಟಿಪುರ, ನೀಲನಕೊಪ್ಪಲು, ಟಿ.ಎಂ.ಹೊಸೂರು ಹಾಗೂ ಶ್ರೀರಾಂಪುರ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ. ಅನಧಿಕೃತ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಅದರಿಂದ ಕಾರ್ಮಿಕರ ಪ್ರಾಣ ಹಾಗೂ ಆಸ್ತಿಪಾಸ್ತಿ ನಷ್ಟವಾಗುತ್ತಿದೆ ಎಂಬ ದೂರುಗಳ ಬಂದಿವೆ. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

''ಕಲ್ಲು ಅಕ್ರಮ ಗಣಿಗಾರಿಕೆ ಮೇಲೆ ಹಲವು ಬಾರಿ ದಾಳಿ ನಡೆಸಿ, ದಂಡ ವಿಧಿಸಿ ಪ್ರಕರಣ ದಾಖಲಿಸಲಾಗಿತ್ತು. ಆದರೂ ಅನಧಿಕೃತ ಗಣಿಗಾರಿಕೆ ನಡೆಯುತ್ತಿದೆ ಎಂಬ ದೂರುಗಳು ಬಂದಿವೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಶ್ರೀರಂಗಪಟ್ಟಣ ಮತ್ತು ಅರಕೆರೆ ಪೊಲೀಸರ ವರದಿ ಆಧರಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪದೇಪದೆ ಕೂಲಿ ಕಾರ್ಮಿಕರ ಸಾವು, ಮನೆಗಳಲ್ಲಿ ಬಿರುಕು, ಗಣಿ ಧೂಳಿನಿಂದ ಬೆಳೆ ಹಾಳಾಗುತ್ತಿದೆ ಎಂಬ ದೂರುಗಳು ಬಂದಿದ್ದು, ಸಾರ್ವಜನಿಕ ಮತ್ತು ಖಾಸಗಿ ಆಸ್ತಿ ಜನರ ರಕ್ಷಣೆ ದೃಷ್ಟಿಯಿಂದ ನಿಷೇಧಾಜ್ಞೆ ಹೊರಡಿಸಲಾಗಿದೆ,''ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ