ಆ್ಯಪ್ನಗರ

​ ನಾಡು, ನುಡಿ ಉಳಿವಿಗೆ ಕಟಿಬದ್ಧರಾಗಿ

ಯುವಜನರು ಕನ್ನಡ ನಾಡು-ನುಡಿಯ ಉಳಿವಿಗೆ ಕಟಿಬದ್ಧರಾಗಬೇಕು. ನಾಡು- ನುಡಿಯ ರಕ್ಷಣೆಗಾಗಿ ಎಂತಹುದೇ ಸಂದರ್ಭ ದಲ್ಲೂ ಹೋರಾಟಕ್ಕೆ ಸಿದ್ಧರಾಗಿರಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಅಶೋಕ್ ಹೇಳಿದರು.

ವಿಕ ಸುದ್ದಿಲೋಕ 13 Aug 2017, 5:15 am
ಮಂಡ್ಯ: ಯುವಜನರು ಕನ್ನಡ ನಾಡು-ನುಡಿಯ ಉಳಿವಿಗೆ ಕಟಿಬದ್ಧರಾಗಬೇಕು. ನಾಡು- ನುಡಿಯ ರಕ್ಷಣೆಗಾಗಿ ಎಂತಹುದೇ ಸಂದರ್ಭ ದಲ್ಲೂ ಹೋರಾಟಕ್ಕೆ ಸಿದ್ಧರಾಗಿರಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಅಶೋಕ್ ಹೇಳಿದರು.
Vijaya Karnataka Web strive to survive lets survive
​ ನಾಡು, ನುಡಿ ಉಳಿವಿಗೆ ಕಟಿಬದ್ಧರಾಗಿ


ನಗರದ ಸರಕಾರಿ ಮಹಾವಿದ್ಯಾಲಯ ದಲ್ಲಿ(ಸ್ವಾಯತ್ತ) ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2016-17ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಕನ್ನಡ ಭಾಷಾ ಹಾಗೂ ಪದವಿ ಐಚ್ಛಿಕ ಕನ್ನಡ ವಿಷಯದಲ್ಲಿ ಶೇ.100ರಷ್ಟು ಹಾಗೂ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶನಿವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ನಾಡಿನಲ್ಲಿ ಕನ್ನಡವನ್ನು ಹುಡುಕುವ ಕೆಲಸ ಆಗುತ್ತಿದೆ. ಬೆಂಗಳೂರಿನಲ್ಲಿ ಕನ್ನಡ ಭಾಷೆಗಿಂತ ತಮಿಳು, ತೆಲುಗು ಭಾಷೆ ಮಾತನಾಡುವವರ ಸಂಖ್ಯೆ ಹೆಚ್ಚಾಗಿರು ವುದರಿಂದ ಕನ್ನಡವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮುಂದಾಗ ಬೇಕು. ಕನ್ನಡ ಸಾಹಿತ್ಯ ಪರಿಷತ್ತು ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಪರಿಷತ್ತು ಸ್ವಾಯತ್ತ ಸಂಸ್ಥೆಯಾಗಿ ನೂರು ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಇಂದಿನ ಯುವ ಪೀಳಿಗೆ, ವಿದ್ಯಾರ್ಥಿಗಳು ಕನ್ನಡವನ್ನು ಉಳಿಸಲು ಶ್ರಮವಹಿಸಬೇಕಾಗಿದೆ. ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರಿಗೆ ಗೌರವ ಸಮರ್ಪಣೆ ಮಾಡುತ್ತಿ ರುವುದು ಶ್ಲಾಘನೀಯ. ಇಂತಹ ಕಾರ‌್ಯಕ್ರಮ ಗಳನ್ನು ಸಂಘ ಸಂಸ್ಥೆಗಳು ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸ ಬೇಕು ಎಂದು ಹೇಳಿದರು.

ಚಿತ್ರನಟ ಶಂಕರ್ ಅಶ್ವತ್ಥ್ ಮಾತನಾಡಿ, ಬೇರೆ ಭಾಷೆಗಳಿಗಿಂತ ಕನ್ನಡವನ್ನು ಬರೆಯು ವುದು ಬಹಳ ಕಷ್ಟ. ಶೇ.100ಕ್ಕೆ 100 ಅಂಕ ಪಡೆದ ಪ್ರತಿಭೆಗಳನ್ನು ಗುರುತಿಸುತ್ತಿ ರುವಂತಹ ಕಾರ‌್ಯ ಶ್ಲಾಘನೀಯ. ಇಂತಹ ಕಾರ‌್ಯಕ್ರಮಗಳು ಹೆಚ್ಚು ಹೆಚ್ಚು ನಡೆಯುವಂತಾಗಬೇಕು. ಕನ್ನಡದ ಬಗ್ಗೆ ವಿದ್ಯಾರ್ಥಿಗಳು ಹೆಚ್ಚು ಬೆಳೆಸಿ ಕೊಳ್ಳಬೇಕು. ಕನ್ನಡವನ್ನು ಉಳಿಸಿ, ಬೆಳೆಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ತಂದೆ-ತಾಯಿ, ಗುರು-ಹಿರಿಯರನ್ನು ವಿದ್ಯಾರ್ಥಿಗಳು ಗೌರವಿಸಬೇಕು. ಆಗ ನಾಡಿಗೆ, ಶಾಲೆಗೆ, ಊರಿಗೆ ಶಾಶ್ವತವಾದ ಗೌರವ ದೊರೆಯುತ್ತದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಒಳ್ಳೆಯ ಕಾರ‌್ಯಗಳನ್ನು ಮಾಡುವ ಮೂಲಕ ಸಮಾಜಮುಖಿಯಾಗಿ ಕೆಲಸ ಮಾಡಬೇಕು ಎಂದರು. ಇದೇ ವೇಳೆ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿ ಸಲಾಯಿತು.

ಸರಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ.ಶಿವನಂಜೇಗೌಡ, ಜಿಲ್ಲಾ ಲಯನ್ಸ್ ಮಾಜಿ ರಾಜ್ಯಪಾಲ ಕೆ.ದೇವೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣ, ವಿಷಯ ಪರಿವೀಕ್ಷಕ ಚಿಕ್ಕಸ್ವಾಮಿ, ಜಿಲ್ಲಾ ಕಸಾಪ ಅಧ್ಯಕ್ಷ ಸಿ.ಕೆ.ರವಿಕುಮಾರ್ ಚಾಮಲಾಪುರ, ತಾಲೂಕು ಅಧ್ಯಕ್ಷ ಪ್ರೊ.ಎಂ.ವೈ. ಶಿವರಾಮು, ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ.ಚಂದ್ರಮ್ಮ, ಪರಿಷತ್ತಿನ ಗೌರವ ಕಾರ‌್ಯದರ್ಶಿಗಳಾದ ಡಾ. ಕೃಷ್ಣೇಗೌಡ ಹುಸ್ಕೂರು, ಎಂ.ಬಿ. ರಮೇಶ್ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ