ಆ್ಯಪ್ನಗರ

ಈಜಲು ಹೋದ ವಿದ್ಯಾರ್ಥಿ ನೀರುಪಾಲು

ಈಜಲು ಹೋದ ವಿದ್ಯಾರ್ಥಿ ನೀರುಪಾಲು ವಿಕ ಸುದ್ದಿಲೋಕ ಶ್ರೀರಂಗಪಟ್ಟಣ ತಾಲೂಕಿನ ಕಾರೇಕುರ ಗ್ರಾಮದ ಹೊರ ವಲಯದಲ್ಲಿ ಕಾವೇರಿ ನದಿಯಲ್ಲಿ ಸ್ನೇಹಿತರ ಜತೆ ಈಜಲು ಹೋಗಿದ್ದ ...

Vijaya Karnataka 17 Jan 2019, 5:00 am
ಶ್ರೀರಂಗಪಟ್ಟಣ: ತಾಲೂಕಿನ ಕಾರೇಕುರ ಗ್ರಾಮದ ಹೊರ ವಲಯದಲ್ಲಿ ಕಾವೇರಿ ನದಿಯಲ್ಲಿ ಸ್ನೇಹಿತರ ಜತೆ ಈಜಲು ಹೋಗಿದ್ದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
Vijaya Karnataka Web student dead in cauvery river srirangapattana
ಈಜಲು ಹೋದ ವಿದ್ಯಾರ್ಥಿ ನೀರುಪಾಲು


ಮೈಸೂರಿನ ಕುಂಬಾರಕೊಪ್ಪಲು ಬಸವನಗುಡಿ ನಿವಾಸಿ ರಘುರಾಮ್‌ ಎಂಬುವವರ ಮಗ ಹೇಮಂತ್‌ಕುಮಾರ್‌ (21) ಮೃತ.

ಮೈಸೂರಿನ ಎಂಐಟಿ ಕಾಲೇಜಿನಲ್ಲಿ ಮೆಕ್ಯಾನಿಕಲ್‌ ಅಭ್ಯಾಸ ಮಾಡುತ್ತಿದ್ದ ಈತ ಮೂವರು ಸ್ನೇಹಿತರ ಜತೆ ನದಿಯಲ್ಲಿ ಈಜಲು ತೆರಳಿದ್ದ. ಈ ವೇಳೆ ನದಿಯಲ್ಲಿ ಈಜುವಾಗ ಆಯತಪ್ಪಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನುರಿತ ಈಜುಗಾರರು ಹಾಗೂ ಅಗ್ನಿ ಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವವನ್ನು ಹೊರತೆಗೆದರು. ಶ್ರೀರಂಗಪಟ್ಟಣ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ