ಆ್ಯಪ್ನಗರ

ನದಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಸಾವು

ವಿಕ ಸುದ್ದಿಲೋಕ ಶ್ರೀರಂಗಪಟ್ಟಣ ತಾಲೂಕಿನ ಕಾವೇರಿ ಬೋರೇದೇವರ ದೇವಾಲಯ ಬಳಿ ಕಾವೇರಿ ನದಿಯಲ್ಲಿ ಸೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ...

Vijaya Karnataka 7 Oct 2018, 5:00 am
ಶ್ರೀರಂಗಪಟ್ಟಣ: ತಾಲೂಕಿನ ಕಾವೇರಿ ಬೋರೇದೇವರ ದೇವಾಲಯ ಬಳಿ ಕಾವೇರಿ ನದಿಯಲ್ಲಿ ಸೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
Vijaya Karnataka Web student who had been swimming in the river died in srirangapattana taluk
ನದಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ಸಾವು


ಅರಕೆರೆ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ, ತಿ.ನರಸೀಪುರ ತಾಲೂಕು ಅರವಟ್ಟಿಗೆಕೊಪ್ಪಲು ಗ್ರಾಮದ ಸಿದ್ದರಾಜಚಾರಿ ಎಂಬುವವರ ಪುತ್ರ ಲಿಖಿತ್‌ (16) ಮೃತ. ಈತ ಶನಿವಾರ ಮಧ್ಯಾಹ್ನದವರೆಗೆ ಶಾಲೆ ಮುಗಿಸಿ ನಂತರ ಮೂವರು ಸ್ನೇಹಿತರ ಜತೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದಾನೆ.

ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ನುರಿತ ಈಜುಗಾರರಿಂದ ಶವವನ್ನು ನೀರಿನಿಂದ ಹೊರ ತೆಗೆದು ಅರಕೆರೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಅರೆಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ