ಆ್ಯಪ್ನಗರ

ವಿದ್ಯಾರ್ಥಿಗಳ ಮತಾಂತರಕ್ಕೆ ಯತ್ನ: ಶಿಕ್ಷಕಿ ವಿರುದ್ಧ ಕಿಡಿ

ವಿಕ ಸುದ್ದಿಲೋಕ ಪಾಂಡವಪುರ ಪಟ್ಟಣದ ಬಾಲಕಿಯರ ಶಾಲೆಯಲ್ಲಿ ಶಿಕ್ಷ ಕಿಯೊಬ್ಬರು ಮಕ್ಕಳನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ...

Vijaya Karnataka 30 Jul 2019, 5:00 am
ಪಾಂಡವಪುರ: ಪಟ್ಟಣದ ಬಾಲಕಿಯರ ಶಾಲೆಯಲ್ಲಿ ಶಿಕ್ಷ ಕಿಯೊಬ್ಬರು ಮಕ್ಕಳನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿ ಕಾರ‍್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
Vijaya Karnataka Web students attempt to convert allegation by bjp in pandavapura
ವಿದ್ಯಾರ್ಥಿಗಳ ಮತಾಂತರಕ್ಕೆ ಯತ್ನ: ಶಿಕ್ಷಕಿ ವಿರುದ್ಧ ಕಿಡಿ


ಪಟ್ಟಣದ ಬಾಲಕಿಯರ ಪದವಿ ಪೂರ್ವ ಶಾಲೆಗೆ ಮುತ್ತಿಗೆ ಹಾಕಿದ ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿ ಕಾರ‍್ಯಕರ್ತರು ಶಾಲೆ ಮುಖ್ಯಶಿಕ್ಷ ಕಿ ಮಂಜುಳ ಅವರನ್ನು ತರಾಟೆಗೆ ತೆಗೆದುಕೊಂಡರು. ''ಶಾಲೆಯ ಶಿಕ್ಷ ಕಿಯೊಬ್ಬರು ಮಕ್ಕಳಿಗೆ ಪಠ್ಯ ಕ್ರಮದ ಶಿಕ್ಷ ಣದ ಬಗ್ಗೆ ಬೋಧನೆ ಮಾಡುವುದನ್ನು ಬಿಟ್ಟು ಮತಾಂತರದ ಬಗ್ಗೆ ಬೋಧಿಸುತ್ತಿದ್ದಾರೆ. ಈ ಮೂಲಕ ಮಕ್ಕಳಿಗೆ ಹಿಂದೂ ಧರ್ಮದ ಬಗ್ಗೆ ಕೀಳರಿಮೆ ಹುಟ್ಟುವಂತೆ ಮನಪರಿವರ್ತನೆ ಮಾಡುತ್ತಿದ್ದಾರೆ. ಇದರಿಂದ ಪ್ರೇರಿತರಾದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಹಿಂದೂ ದೇವರ ಫೋಟೊಗಳು, ಅರಿಶಿಣ-ಕುಂಕುಮ ಬಿಸಾಡಿ, ಅನ್ಯ ಧರ್ಮದ ಚಿಹ್ನೆ ಹಾಕಿಕೊಂಡಿದ್ದಾಳೆ'' ಎಂದು ಆಕ್ರೋಶ ವ್ಯಕ್ತಪಡಿಸಿದರು.

''ನಮ್ಮ ಮಕ್ಕಳು ಶಿಕ್ಷ ಣವನ್ನು ಪಡೆಯದಿದ್ದರೂ ಪರವಾಗಿಲ್ಲ. ಆದರೆ ಯಾವುದೇ ಕಾರಣಕ್ಕೂ ಮತಾಂತರಕ್ಕೆ ಬಿಡುವುದಿಲ್ಲ. ಶಿಕ್ಷ ಕಿಯ ಬಗ್ಗೆ ಆಡಳಿತ ಮಂಡಳಿ ಸೂಕ್ತ ಕ್ರಮತೆಗೆದುಕೊಳ್ಳಬೇಕು. ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಶಾಲೆ ಬಳಿ ಪ್ರತಿಭಟನೆ ನಡೆಸಬೇಕಾಗುತ್ತದೆ'' ಎಂದು ಎಚ್ಚರಿಸಿದರು.

ಮುಖ್ಯಶಿಕ್ಷ ಕಿ ಬಿ.ಮಂಜುಳಾ ಪ್ರತಿಕ್ರಿಯಿಸಿ, ''ಶಿಕ್ಷ ಕಿ ಮಕ್ಕಳಿಗೆ ಒಂದು ಧರ್ಮದ ಬಗ್ಗೆ ಬೋಧನೆ ಮಾಡುತ್ತಿರುವ ವಿಷಯ ಗಮನಕ್ಕೆ ಬಂದಿಲ್ಲ. ಯಾವ ಶಿಕ್ಷ ಕರೂ ಒಂದು ಧರ್ಮದ ಬಗ್ಗೆ ಮಕ್ಕಳಿಗೆ ಬೋಧಿಸಬಾರದು. ವಿದ್ಯಾರ್ಥಿಗಳು ಈ ಕುರಿತು ತಿಳಿಸಿಲ್ಲ. ಸದ್ಯ ಶಿಕ್ಷಕಿ ರಜೆಯಲ್ಲಿದ್ದಾರೆ. ಅವರು ಬಂದ ತಕ್ಷ ಣ ವಿಚಾರಣೆ ನಡೆಸಿ ಕ್ರಮತೆಗೆದುಕೊಳ್ಳುತ್ತೇವೆ'' ಎಂದು ತಿಳಿಸಿದರು.

ಗುರುವಾರದೊಳಗೆ ಸಮಸ್ಯೆ ಬಗೆಹರಿಸಿ ಎಂದು ಆಗ್ರಹಿಸಿದರು. ತಾಲೂಕಿನಲ್ಲಿ ದಿನೇದಿನೆ ಮತಾಂತರ ಹೆಚ್ಚುತ್ತಿವೆ. ಸಂಬಂಧಿಸಿದ ಅಧಿಕಾರಿಗಳು, ಪೊಲೀಸ್‌ ಇಲಾಖೆ ಕ್ರಮತೆಗೆದುಕೊಳ್ಳಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಬಿಜೆಪಿ ಮುಖಂಡ ಎಚ್‌.ಎನ್‌.ಮಂಜುನಾಥ್‌, ಧನಂಜಯ್‌, ಶ್ರೀನಿವಾಸ್‌ನಾಯ್ಕ, ಶ್ರೀನಿವಾಸ್‌, ಹಿಂದೂ ಜಾರಗಣ ವೇದಿಕೆ ಮುಖಂಡರಾದ ಪಾಂಡಿದೊರೆ, ಮಾರ್ಕಾಂಡಯ್ಯ, ಕೇಶವ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ