ಮಂಡ್ಯ: ಕೋವಿಡ್ ಪಾಸಿಟಿವ್ ರೋಗಿಗೆ ಮಂಡ್ಯದ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗಿದ್ದು, ಮಗು ಆರೋಗ್ಯವಾಗಿದೆ. ಶಸ್ತ್ರ ಚಿಕಿತ್ಸೆ ಯಶ್ವಸಿ ಬಳಿಕ ವೈದ್ಯರು ಮತ್ತು ಮಗುವಿನ ಕುಟುಂಬಸ್ಥರಲ್ಲಿ ಮುಖದಲ್ಲಿ ನಗುಬೀರಿದೆ.
ಡಾ. ಯೋಗೇಂದ್ರ ಕುಮಾರ್ ನೇತೃತ್ವದಲ್ಲಿ ಕೊರೊನಾ ವೈರಸ್ ಸೋಂಕಿತ ಮಂಡ್ಯದ ಮಳವಳ್ಳಿಯ ಗರ್ಭಿಣಿ ಮಹಿಳೆಗೆ ಶಸ್ತ್ರಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾಗಿ ಮಗುವನ್ನು ಹೊರತೆಗೆಯಲಾಗಿದೆ. ಈಗ ಮಗುವಿನ ಆರೋಗ್ಯ ಚೆನ್ನಾಗಿದೆ. ಇನ್ನೆರಡು ದಿನದಲ್ಲಿ ಮಗುವಿಗೆ ಕೂಡ ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ಈಗಾಗಲೇ ಮಂಡ್ಯದ ಜಿಲ್ಲಾಸ್ಪತ್ರೆಯಲ್ಲಿ ಸುಮಾರು 400ಕ್ಕೂ ಅಧಿಕ ಕೋವಿಡ್ ಸೋಂಕಿತರಿದ್ದರು. ಅದರಲ್ಲಿ ಗರ್ಭಿಣಿ ಮಹಿಳೆಗೆ ಸೋಂಕು ತಗುಲಿರುವುದು ಮೊದಲ ಪ್ರಕರಣವಾಗಿತ್ತು. ಇದರಿಂದ ವೈದ್ಯರಲ್ಲಿ ಸಹಜವಾಗಿ ಆತಂಕ ಮೂಡಿತ್ತು. ಆದರೆ ಇದೀಗ ಇದೀಗ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದ್ದು, ವೈದ್ಯರ ಕಾರ್ಯಕ್ಕೆ ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ.
ಡಾ. ಯೋಗೇಂದ್ರ ಕುಮಾರ್ ನೇತೃತ್ವದಲ್ಲಿ ಕೊರೊನಾ ವೈರಸ್ ಸೋಂಕಿತ ಮಂಡ್ಯದ ಮಳವಳ್ಳಿಯ ಗರ್ಭಿಣಿ ಮಹಿಳೆಗೆ ಶಸ್ತ್ರಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾಗಿ ಮಗುವನ್ನು ಹೊರತೆಗೆಯಲಾಗಿದೆ. ಈಗ ಮಗುವಿನ ಆರೋಗ್ಯ ಚೆನ್ನಾಗಿದೆ. ಇನ್ನೆರಡು ದಿನದಲ್ಲಿ ಮಗುವಿಗೆ ಕೂಡ ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ಈಗಾಗಲೇ ಮಂಡ್ಯದ ಜಿಲ್ಲಾಸ್ಪತ್ರೆಯಲ್ಲಿ ಸುಮಾರು 400ಕ್ಕೂ ಅಧಿಕ ಕೋವಿಡ್ ಸೋಂಕಿತರಿದ್ದರು. ಅದರಲ್ಲಿ ಗರ್ಭಿಣಿ ಮಹಿಳೆಗೆ ಸೋಂಕು ತಗುಲಿರುವುದು ಮೊದಲ ಪ್ರಕರಣವಾಗಿತ್ತು. ಇದರಿಂದ ವೈದ್ಯರಲ್ಲಿ ಸಹಜವಾಗಿ ಆತಂಕ ಮೂಡಿತ್ತು. ಆದರೆ ಇದೀಗ ಇದೀಗ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದ್ದು, ವೈದ್ಯರ ಕಾರ್ಯಕ್ಕೆ ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ.