ಆ್ಯಪ್ನಗರ

ಗಣಿಗಾರಿಕೆ ನಿಲ್ಲಿಸದಿದ್ದರೆ ಆತ್ಮಹತ್ಯೆ

ಪಾಂಡವಪುರ ತಾಲೂಕು ಬೇಬಿ ಬೆಟ್ಟದಲ್ಲಿನಡೆಯುತ್ತಿರುವ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಬೇಕು. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ, 'ಬೇಬಿ ಬೆಟ್ಟ ಉಳಿಸಿ-ಕೆಆರ್‌ಎಸ್‌ ರಕ್ಷಿಸಿ' ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ಕಾರ್ಯಕರ್ತರು ನಗರದಲ್ಲಿಶುಕ್ರವಾರ ಪ್ರತಿಭಟನೆ ನಡೆಸಿದರು.

Vijaya Karnataka 28 Sep 2019, 5:00 am
ಮಂಡ್ಯ: ಪಾಂಡವಪುರ ತಾಲೂಕು ಬೇಬಿ ಬೆಟ್ಟದಲ್ಲಿನಡೆಯುತ್ತಿರುವ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಬೇಕು. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ, 'ಬೇಬಿ ಬೆಟ್ಟ ಉಳಿಸಿ-ಕೆಆರ್‌ಎಸ್‌ ರಕ್ಷಿಸಿ' ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ಕಾರ್ಯಕರ್ತರು ನಗರದಲ್ಲಿಶುಕ್ರವಾರ ಪ್ರತಿಭಟನೆ ನಡೆಸಿದರು.
Vijaya Karnataka Web MDY27M-02_17


ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಅಕ್ರಮ ಹಾಗೂ ಸಕ್ರಮವಾಗಿ ನಡೆಸುತ್ತಿರುವ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಘೋಷಣೆ ಮೊಳಗಿಸಿದರು. ಸರಕಾರ ಹಾಗೂ ಜಿಲ್ಲಾಡಳಿತದ ನಡೆ ಖಂಡಿಸಿ ಪ್ರತಿಭಟಿಸಿದರು.

ಕಲ್ಲುಕ್ವಾರಿಯಲ್ಲಿಪ್ರತಿದಿನ ಬೋರುಕುಳಿ ಬಳಸಿದ ಬ್ಲಾಸ್ಟ್‌ ಮತ್ತು ಮೆಗ್ಗರ್‌ಬ್ಲಾಸ್ಟ್‌ ಮಾಡಿ ಕಲ್ಲುಗಳನ್ನು ಹೊಡೆಯಲಾಗುತ್ತಿದೆ. ಇದರ ಪರಿಣಾಮ ಭೂಕಂಪದ ಅನುಭವ ಆಗುತ್ತಿದೆ. ಬೇಬಿಬೆಟ್ಟದ ಸುತ್ತಮುತ್ತಲಿನ ಜನರು ಭಯದಲ್ಲಿಯೇ ಜೀವನ ನಡೆಸುವಂತಾಗಿದೆ. ಇದಲ್ಲದೆ, ದೊಡ್ಡಮಟ್ಟದ ಬ್ಲಾಸ್ಟ್‌ ನಡೆಯುತ್ತಿರುವುದರಿಂದ ಗ್ರಾಮದ ಮನೆಗಳು ಮತ್ತು ದೇವಸ್ಥಾನಗಳು, ಸರಕಾರಿ ಶಾಲೆ ಕಟ್ಟಡ ಬಿರುಕು ಬಿಟ್ಟಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೋರಾಟಗಾರರಿಗೆ ಪ್ರಾಣ ಬೆದರಿಕೆ:
ಗಣಿಗಾರಿಕೆಯಿಂದ ಕೆಆರ್‌ಎಸ್‌ ಜಲಾಶಯಕ್ಕೆ ಅಪಾಯವಿದೆ ಎನ್ನುವ ವರದಿಯನ್ನು ಭೂ ವಿಜ್ಞಾನಿಗಳು ಈಗಾಗಲೇ ನೀಡಿದ್ದಾರೆ. ಆದರೂ ಸಹ, ಅಧಿಕಾರಿಗಳು ಮತ್ತು ರಾಜಕಾರಣಿಗಳು ಹಣ ವಸೂಲಿ ಮಾಡಿಕೊಂಡು ಸುಮ್ಮನಾಗಿದ್ದಾರೆ. ಈ ವ್ಯಾಪ್ತಿಯಲ್ಲಿಸುಮಾರು 53 ಕ್ರಷರ್‌ಗಳಿವೆ. ಪರಿಸರ ಮಾಲಿನ್ಯದಿಂದಾಗಿ ಜನರ ಆರೋಗ್ಯ ಹದಗೆಟ್ಟಿದೆ. ಕ್ರಷರ್‌ ಶಬ್ಧಕ್ಕೆ ಕಿವಿಗಳು ಹಾಳಾಗುತ್ತಿವೆ. ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ21 ಕೆರೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಈ ಸಂಬಂಧ ನೂರಾರೂ ಅರ್ಜಿ ಸಲ್ಲಿಸಿದರೂ ಯಾವೊಬ್ಬ ಅಧಿಕಾರಿಯೂ ಕ್ರಮ ತೆಗೆದುಕೊಳ್ಳುತ್ತಿಲ್ಲ. ಜತೆಗೆ ಗಣಿ ವಿರುದ್ಧ ಹೋರಾಟ ಮಾಡುತ್ತಿರುವವರಿಗೆ ಕೆಲ ಮಾಲೀಕರು ಪ್ರಾಣ ಬೆದರಿಕೆ ಹಾಕುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಗಣಿಗಾರಿಕೆ ನಿಲ್ಲದಿದ್ದರೆ ಆತ್ಮಹತ್ಯೆ ದಾರಿ:
ಅಕ್ರಮ ಕಲ್ಲುಗಣಿಗಾರಿಕೆಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಳ್ಳದಿದ್ದರೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳಲಾಗುವುದು. ಇದಕ್ಕೆ ಅಧಿಕಾರಿಗಳು, ರಾಜಕಾರಣಿಗಳೇ ನೇರ ಹೊಣೆಗಾರರಾಗುತ್ತಾರೆ. ಗಣಿಯಲ್ಲಿಈವರೆಗೆ ಹಲವು ಸಾವು ನೋವು ಸಂಭವಿಸಿದೆ. ಈ ಬಗ್ಗೆ ಸಿಬಿಐನಿಂದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಸಹಾಯಕ ಅಧಿಕಾರಿ ಕೃಷ್ಣಪ್ಪ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿರೈತ ಸಂಘದ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್‌, ರೈತ ಸಂಘದ(ಮೂಲ ಸಂಘಟನೆ) ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ, ಬಿ.ಪಿ.ಕುಮಾರ, ರೋಹನ್‌ಕುಮಾರ್‌, ಮಂಜು, ಪದ್ಮರಾಜ, ರಾಜು, ವೆಂಕಟೇಶ, ಶೇಖರ್‌ ಇತರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ