ಆ್ಯಪ್ನಗರ

ಉಪ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ: ಅಶೋಕ್‌

ವಿಕ ಸುದ್ದಿಲೋಕ ಮದ್ದೂರು ಪ್ರಸಕ್ತ ನಡೆಯುತ್ತಿರುವ ಲೋಕಸಭೆ ಉಪಚುನಾವಣೆಯಲ್ಲಿ ಪಕ್ಷ ದ ಅಭ್ಯರ್ಥಿ ಅಚ್ಚರಿ ಫಲಿತಾಂಶದೊಂದಿಗೆ ವಿಜಯದ ನಗೆ ಬೀರಲಿದ್ದಾರೆ ಎಂದು ಮಾಜಿ ...

Vijaya Karnataka 25 Oct 2018, 5:00 am
ಮದ್ದೂರು: ಪ್ರಸಕ್ತ ನಡೆಯುತ್ತಿರುವ ಲೋಕಸಭೆ ಉಪಚುನಾವಣೆಯಲ್ಲಿ ಪಕ್ಷ ದ ಅಭ್ಯರ್ಥಿ ಅಚ್ಚರಿ ಫಲಿತಾಂಶದೊಂದಿಗೆ ವಿಜಯದ ನಗೆ ಬೀರಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ವಿಶ್ವಾಸ ವ್ಯಕ್ತಪಡಿಸಿದರು.
Vijaya Karnataka Web surprising results in mandya sub polls ashok
ಉಪ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ: ಅಶೋಕ್‌


ಪಟ್ಟಣದ ಶಂಕರಪಾರ್ಟಿ ಹಾಲ್‌ನಲ್ಲಿ ತಾಲೂಕು ಬಿಜೆಪಿ ಘಟಕದಿಂದ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಪ್ರಜ್ಞಾವಂತ ಮತದಾರರು ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ದಿನದ 24 ಗಂಟೆಯೂ ದುಡಿಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಪರವಾಗಿ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರಿಗೆ ಮತ ನೀಡಲಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಪಕ್ಷ ದ ಅಭ್ಯರ್ಥಿಗಳು ಜಯಶೀಲರಾಗಲಿದ್ದಾರೆ. ಈ ಬಾರಿ ಜನರ ಉತ್ಸಾಹ ನೋಡಿದರೆ ಜಿಲ್ಲೆಯಲ್ಲಿ ಅನಿರೀಕ್ಷಿತ ಫಲಿತಾಂಶ ಹೊರಬೀಳುವ ಸಾಧ್ಯತೆ ಹೆಚ್ಚಾಗಿದೆ. ಪ್ರತಿಯೊಬ್ಬ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಜನಪರ ಯೋಜನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ಪಕ್ಷ ದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು. ಪಕ್ಷ ದಲ್ಲಿರುವ ಭಿನ್ನಮತಗಳನ್ನು ಬದಿಗೊತ್ತಿ ಸಿಕ್ಕಿರುವ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.

ಪುರಸಭೆ ಸದಸ್ಯೆ ಲತಾರಾಮು, ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಡಿ.ಎಸ್‌.ವೀರಯ್ಯ, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಉಪಾಧ್ಯಕ್ಷ ಎಂ.ಸತೀಶ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನಯ್ಯ, ಪದಾಧಿಕಾರಿಗಳಾದ ಪಣ್ಣೆದೊಡ್ಡಿ ರಘು ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ