ಆ್ಯಪ್ನಗರ

ಕರ್ತವ್ಯ ಲೋಪದಡಿ ಇಬ್ಬರು ಪೊಲೀಸರ ಅಮಾನತು

ಕೆ.ಆರ್‌.ಪೇಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಮದ್ದೂರಿನಲ್ಲಿ ಗೃಹ ಸಚಿವರ ಕಾರು ಚಾಲಕನಿಂದ ನೀತಿಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

Vijaya Karnataka 27 Nov 2019, 5:00 am
ಮಂಡ್ಯ: ಕೆ.ಆರ್‌.ಪೇಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಮದ್ದೂರಿನಲ್ಲಿ ಗೃಹ ಸಚಿವರ ಕಾರು ಚಾಲಕನಿಂದ ನೀತಿಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
Vijaya Karnataka Web suspension of two policemen
ಕರ್ತವ್ಯ ಲೋಪದಡಿ ಇಬ್ಬರು ಪೊಲೀಸರ ಅಮಾನತು


ಮದ್ದೂರು ತಾಲೂಕು ಬೆಸಗರಹಳ್ಳಿ ಪೊಲೀಸ್‌ ಠಾಣೆಯ ಮುಖ್ಯಪೇದೆ ಗೌರಮ್ಮ ಹಾಗೂ ಮದ್ದೂರು ಟ್ರಾಫಿಕ್‌ ಪೊಲೀಸ್‌ ಠಾಣೆಯ ಪೇದೆ ಶ್ರೀನಿವಾಸ್‌ ಅಮಾನತುಗೊಂಡವರು.

ಮದ್ದೂರು ತಾಲೂಕು ನಿಡಘಟ್ಟ ಚೆಕ್‌ಪೋಸ್ಟ್‌ನಲ್ಲಿ ನ.19 ರಂದು ಗೃಹ ಸಚಿವರ ಕಾರು ಚಾಲಕ ನೀತಿಸಂಹಿತೆ ಉಲ್ಲಂಘಿಸಿದ್ದರು. ಮಾಧ್ಯಮಗಳಲ್ಲಿ ಈ ಸಂಬಂಧ ಸುದ್ದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡು ಕರ್ತವ್ಯ ಲೋಪವೆಸಗಿದ ಎಸ್‌ಎಸ್‌ಟಿ ತಂಡದ ಅಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಚುನಾವಣಾ ಕರ್ತವ್ಯಲೋಪದ ಮೇಲೆ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ.

ಅ ದಿನದಂದು ಗೃಹ ಸಚಿವರ ಕಾರಿನ ಚಾಲಕ ವಾಹನ ನಿಲ್ಲಿಸಿ ತಪಾಸಣೆಗೆ ಸಹಕರಿಸದೆ ಇರುವ ಕಾರಣ ಅವರ ವಿರುದ್ಧ ಮದ್ದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ