ಆ್ಯಪ್ನಗರ

ಬಿಜೆಪಿ ವಿರುದ್ಧ ಕ್ರಮಕೈಗೊಳ್ಳಿ: ಜೆಡಿಎಸ್‌ ಮನವಿ

ವಿಕ ಸುದ್ದಿಲೋಕ ಶ್ರೀರಂಗಪಟ್ಟಣ ಬಂದ್‌ ಆಚರಿಸಿದ ಬಿಜೆಪಿ ಕಾರ‍್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜೆಡಿಎಸ್‌ ಕಾರ‍್ಯಕರ್ತರು ತಹಸೀಲ್ದಾರ್‌ ಮೂಲಕ ...

Vijaya Karnataka 29 May 2018, 5:00 am
ಶ್ರೀರಂಗಪಟ್ಟಣ: ಬಂದ್‌ ಆಚರಿಸಿದ ಬಿಜೆಪಿ ಕಾರ‍್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜೆಡಿಎಸ್‌ ಕಾರ‍್ಯಕರ್ತರು ತಹಸೀಲ್ದಾರ್‌ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಿದರು.
Vijaya Karnataka Web take action against bjp appeal by jds leaders
ಬಿಜೆಪಿ ವಿರುದ್ಧ ಕ್ರಮಕೈಗೊಳ್ಳಿ: ಜೆಡಿಎಸ್‌ ಮನವಿ


ಪಟ್ಟಣದ ಮಿನಿವಿಧಾನಸೌಧ ಕಚೇರಿಯಲ್ಲಿರುವ ತಹಸೀಲ್ದಾರ್‌ ಬಳಿಗೆ ಆಗಮಿಸಿದ ಕಾರ‍್ಯಕರ್ತರು, ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಸಾಲ ಮನ್ನಾ ಮಾಡುವುದಿಲ್ಲ ಎಂದು ಎಲ್ಲೂ ಹೇಳಿಲ್ಲ, ಸಮ್ಮಿಶ್ರ ಸರಕಾರ ಆಗಿರುವುದರಿಂದ ಕಾಲಾವಕಾಶ ಕೇಳಿದ್ದಾರೆ. ಆದರೂ ಉದ್ದೇಶ ಪೂರ್ವಕವಾಗಿ ಬಿಜೆಪಿ ಬಂದ್‌ ಆಚರಣೆಗೆ ಕರೆ ನೀಡಿದೆ. ಬಂದ್‌ನಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತದೆ. ವ್ಯಾಪಾರ, ವಹಿವಾಟಿನಲ್ಲಿ ಏರು ಪೇರು ಆಗುತ್ತದೆ. ಒಟ್ಟಾರೆ ರಾಜ್ಯದ ಬೊಕ್ಕಸಕ್ಕೂ ನಷ್ಟ ಉಂಟಾಗುತ್ತದೆ. ಹಾಗಾಗಿ ಬಂದ್‌ ಮಾಡಿದ ಬಿಜೆಪಿ ಕಾರ‍್ಯಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಶೂನ್ಯ ಅಕೌಂಟ್‌ ಹೊಂದಿರುವ ಖಾತೆಗಳಿಗೆ 15 ಲಕ್ಷ ರೂ. ಹಾಕುತ್ತೇವೆ, ನಿರುದ್ಯೋಗಿಗಳಿಗೆ ಉದ್ಯೋಗವಕಾಶ ಕಲ್ಪಿಸಿಕೊಡುತ್ತೇವೆ. ವಿದೇಶದಲ್ಲಿರುವ ಕಪ್ಪು ಹಣವನ್ನು ತರಿಸುತ್ತೇವೆ ಎಂದು ಹೇಳಿದ್ದರು ಯಾವ ಭರವಸೆಯನ್ನು ಈಡೇರಿಸಿಲ್ಲ. ಜತೆಗೆ ತೈಲ ಬೆಲೆ ಏರಿಕೆ ಮಾಡುವ ಮೂಲಕ ಜನ ಸಾಮಾನ್ಯರ ಮೇಲೆ ಹೆಚ್ಚು ತೆರಿಗೆ ವಿಧಿಸಿದ್ದಾರೆ. ಇವರಿಗೆ ಬಂದ್‌ ಮಾಡಲು ಯಾವ ನೈತಿಕತೆಯೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಾಲ ಮನ್ನಾ ಮಾಡುತ್ತೇವೆ ಎಂದು ಹೇಳಿದ್ದರೂ ಜನರನ್ನು ದಾರಿ ತಪ್ಪಿಸುವ ದುರುದ್ದೇಶದಿಂದ ಬಂದ್‌ ಆಚರಣೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್‌ ಡಿ.ನಾಗೇಶ್‌ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಜೆಡಿಎಸ್‌ ಕಾರಾರ‍ಯಧ್ಯಕ್ಷ ಎನ್‌.ಶಿವಸ್ವಾಮಿ ಪ್ರಧಾನ ಕಾರ‍್ಯದರ್ಶಿ ಸ್ವಾಮಿಗೌಡ, ಜಿ.ಪಂ ಮಾಜಿ ಸದಸ್ಯ ಎ.ಆರ್‌.ಮರೀಗೌಡ, ತಾ.ಪಂ ಮಾಜಿ ಸದಸ್ಯ ಪುಟ್ಟಸ್ವಾಮಿ, ಮುಖಂಡರಾದ ಎನ್‌.ವೆಂಕಟೇಶ್‌, ರಾಮಚಂದ್ರ, ಗೋಪಾಲ್‌, ಲೋಕೇಶ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ