ಆ್ಯಪ್ನಗರ

ಟೆಂಪೋಗೆ ಕಾರು ಡಿಕ್ಕಿ: ಇಬ್ಬರು ಸಾವು

ಬೆಂಗಳೂರು- ಮೈಸೂರು ಹೆದ್ದಾರಿಯ ತಾಲೂಕಿನ ಗೌಡಳ್ಳಿ ಗೇಟ್‌ ಬಳಿ ಸೋಮವಾರ ಕಾರು ಆಯತಪ್ಪಿ ವಿಭಜಕ ದಾಟಿ ಎದುರುಗಡೆಯಿಂದ ಬರುತ್ತಿದ್ದ ಗೂಡ್ಸ್‌ ಟೆಂಪೋಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರು.

Vijaya Karnataka 11 Jun 2019, 5:00 am
ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ಬೆಂಗಳೂರು- ಮೈಸೂರು ಹೆದ್ದಾರಿಯ ತಾಲೂಕಿನ ಗೌಡಳ್ಳಿ ಗೇಟ್‌ ಬಳಿ ಸೋಮವಾರ ಕಾರು ಆಯತಪ್ಪಿ ವಿಭಜಕ ದಾಟಿ ಎದುರುಗಡೆಯಿಂದ ಬರುತ್ತಿದ್ದ ಗೂಡ್ಸ್‌ ಟೆಂಪೋಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರು.
Vijaya Karnataka Web tempo car collusion two death
ಟೆಂಪೋಗೆ ಕಾರು ಡಿಕ್ಕಿ: ಇಬ್ಬರು ಸಾವು


ಕಾರು ಚಾಲಕ ಚಾಮರಾಜನಗರದ ಮಹಮದ್‌ (25), ಗೂಡ್ಸ್‌ ವಾಹನ ಚಾಲಕ ಶ್ರೀರಂಗಪಟ್ಟಣದ ರಂಜಿತ್‌(25) ಮೃತರು.

ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಚಲಿಸುತ್ತಿದ್ದ ಕಾರು ಆಯತಪ್ಪಿ ವಿಭಜಕ ದಾಟಿದ್ದು, ಪರಂಗಿ ಹಣ್ಣು ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್‌ ವಾಹನಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ