ಆ್ಯಪ್ನಗರ

ಟೆಂಪೊ ಡಿಕ್ಕಿ: ಬೈಕ್‌ ಸವಾರ ಸಾವು

ಶ್ರೀರಂಗಪಟ್ಟಣ: ತಾಲೂಕಿನ ಮಂಡ್ಯದ ಕೊಪ್ಪಲು ಗ್ರಾಮದ ಬಳಿ ಬೈಕ್‌ಗೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರವಾಹನ ಸವಾರ ಸ್ಥಳದಲ್ಲಿ ಮೃತಪಟ್ಟರು.

Vijaya Karnataka 20 Aug 2018, 5:00 am
ಶ್ರೀರಂಗಪಟ್ಟಣ: ತಾಲೂಕಿನ ಮಂಡ್ಯದ ಕೊಪ್ಪಲು ಗ್ರಾಮದ ಬಳಿ ಬೈಕ್‌ಗೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರವಾಹನ ಸವಾರ ಸ್ಥಳದಲ್ಲಿ ಮೃತಪಟ್ಟರು.
Vijaya Karnataka Web tempo collision bike riders death
ಟೆಂಪೊ ಡಿಕ್ಕಿ: ಬೈಕ್‌ ಸವಾರ ಸಾವು


ಚಿಂದೇಗೌಡನಕಪ್ಪಲು ಗ್ರಾಮದ ಗಂಗಾಧರ್‌ (37) ಮೃತ. ಇವರು ಜಮೀನಿನಿಂದ ಮನೆಗೆ ಭಾನುವಾರ ಹಿಂದಿರುಗುತ್ತಿದ್ದ ವೇಳೆ ಬನ್ನೂರು ಕಡೆಯಿಂದ ಬರುತ್ತಿದ್ದ ಟೆಂಪೋ ಮಂಡ್ಯಕೊಪ್ಪಲು ಗ್ರಾಮದ ತಿರುವಿನಲ್ಲಿ ಬೈಕ್‌ಗೆ ಡಿಕ್ಕಿಹೊಡೆದು ಈ ದುರ್ಘಟನೆ ಸಂಭವಿಸಿದೆ. ಚಾಲಕ ಪರಾರಿಯಾಗಿದ್ದು, ಸಾರ್ವಜನಿಕರು ಟೆಂಪೊಗೆ ಕಲ್ಲು ತೂರಾಟ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಈ ಸಂಬಂಧ ಅರಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ