ಆ್ಯಪ್ನಗರ

ಬೆಂಗಳೂರಿನ ರೌಡಿ ಶೀಟರ್‌ ಅರಸಯ್ಯ ಕೊಲೆ ಆರೋಪಿಗಳ ಬಂಧನ

ಬೆಂಗಳೂರಿನ ರೌಡಿ ಶೀಟರ್‌ ಅರಸಯ್ಯನ ಕೊಲೆ ಪ್ರಕರಣ ಸಂಬಂಧ 9 ಮಂದಿ ಆರೋಪಿಗಳನ್ನು ಶ್ರೀರಂಗಪಟ್ಟಣ ಪೊಲೀಸರು ಬಂಧಿಸಿದ್ದಾರೆ.

Vijaya Karnataka 17 Aug 2018, 5:00 am
ಮಂಡ್ಯ: ಬೆಂಗಳೂರಿನ ರೌಡಿ ಶೀಟರ್‌ ಅರಸಯ್ಯನ ಕೊಲೆ ಪ್ರಕರಣ ಸಂಬಂಧ 9 ಮಂದಿ ಆರೋಪಿಗಳನ್ನು ಶ್ರೀರಂಗಪಟ್ಟಣ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web the arrest of the accused in the bangalore rowdy sheeter arasayya
ಬೆಂಗಳೂರಿನ ರೌಡಿ ಶೀಟರ್‌ ಅರಸಯ್ಯ ಕೊಲೆ ಆರೋಪಿಗಳ ಬಂಧನ


ಪಳನಿ, ಮಹೇಂದ್ರ, ಮುನಿರಾಜು, ಬಾಬು, ಪೆರುಮಾಳ್‌, ಮಹೇಶ, ಮಂಜುನಾಥ, ಅರುಣ, ರಾಮದಾಸ ಎಂಬ ಆರೋಪಿಗಳನ್ನು ತಿ.ನರಸೀಪುರ ತಾಲೂಕಿನ ಗರ್ಗೇಶ್ವರಿ ಬಳಿ ಬಂಧಿಸಲಾಗಿದೆ.

ಶ್ರೀರಂಗಪಟ್ಟಣ ನ್ಯಾಯಾಲಯಕ್ಕೆ ಆ.16ರಂದು 9 ಆರೋಪಿಗಳನ್ನು ಹಾಜರುಪಡಿಸಲಾಗಿದ್ದು, ರಾಮದಾಸ ಎಂಬ ಆರೋಪಿಯನ್ನು ಹೊರತುಪಡಿಸಿ ಉಳಿದವರನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್‌ ವಶಕ್ಕೆ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಏನಾಗಿತ್ತು?

ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು ಗೇಟ್‌ ಬಳಿ ಇರುವ ಮಹಾಕಾಳಿ ದೇವಾಸ್ಥಾನದಲ್ಲಿ ರೌಡಿಶೀಟರ್‌ ಅರಸಯ್ಯ ಆ.11ರಂದು ಪೂಜೆ ಮುಗಿಸಿ ಇನೋವಾ ಕಾರ್‌ನಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಬಳಿ ಬರುತ್ತಿದ್ದಂತೆ 15ರಿಂದ 20 ದುಷ್ಕರ್ಮಿಗಳು ಮೂರು ಕಾರುಗಳಲ್ಲಿ ಬಂದು ಅಡ್ಡಹಾಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು.

ಗಾಯಾಳು ಅರಸಯ್ಯ ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅದೇ ದಿನ ರಾತ್ರಿ ಮೃತಪಟ್ಟಿದ್ದರು. ಈ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ