ಆ್ಯಪ್ನಗರ

ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ

ಸೆಲ್ಫಿ ತೆಗೆಯಲು ಹೋಗಿ ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಕೆ.ಆರ್‌.ಪೇಟೆ ತಾಲೂಕಿನ ಮಡುವಿನ ಕೋಡಿ ಗ್ರಾಮದ ಬಳಿ ಪತ್ತೆಯಾಗಿದೆ.

Vijaya Karnataka 21 Jul 2018, 5:00 am
ಮಂಡ್ಯ: ಸೆಲ್ಫಿ ತೆಗೆಯಲು ಹೋಗಿ ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಕೆ.ಆರ್‌.ಪೇಟೆ ತಾಲೂಕಿನ ಮಡುವಿನ ಕೋಡಿ ಗ್ರಾಮದ ಬಳಿ ಪತ್ತೆಯಾಗಿದೆ.
Vijaya Karnataka Web the body of a young man who was buried in the river was found
ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ


ಕೆ.ಆರ್‌.ಪೇಟೆ ತಾಲೂಕಿನ ಹರಿಹರಪುರದ ಶಿವು(28) ಮೃತ. ಜು.17ರಂದು ಹೇಮಾವತಿ ನದಿ ಸೇತುವೆ ಮೇಲೆ ನಿಂತು ಸೆಲ್ಫಿ ತೆಗೆಯುವ ವೇಳೆ ಆಯತಪ್ಪಿ ಬಿದ್ದು ಈತ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ. ಈ ಕುರಿತು ಕೆ.ಆರ್‌.ಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೂರು ದಿನಗಳ ಸತತ ಕಾರಾರ‍ಯಚರಣೆ ಬಳಿಕ ಶಿವು ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಪಂಚನಾಮೆ ಬಳಿಕ ಪೋಷಕರಿಗೆ ಹಸ್ತಾಂತರಿಸಲಾಯಿತು. ಇದೇ ವೇಳೆ ಹರಿಹರಪುರದ ಗ್ರಾಮಸ್ಥರು ಮೃತ ಯುವಕನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ