ಆ್ಯಪ್ನಗರ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮಹಿಳೆ ಸಾವು, ಮೂವರು ಗಂಭೀರ

ವಿಕ ಸುದ್ದಿಲೋಕ ಮದ್ದೂರು ಪಟ್ಟಣದ ಎಚ್‌ಕೆವಿ...

Vijaya Karnataka 26 May 2018, 5:00 am
ಮದ್ದೂರು: ಪಟ್ಟಣದ ಎಚ್‌.ಕೆ.ವಿ.ನಗರ ಎಳನೀರು ಮಾರುಕಟ್ಟೆ ಬಳಿ, ಮೈಸೂರು, ಬೆಂಗಳೂರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿಯೊಡೆದು ಶುಕ್ರವಾರ ಮಹಿಳೆಯೊಬ್ಬರು ಮೃತಪಟ್ಟು, ಮೂರು ಗಾಯಗೊಂಡಿದ್ದಾರೆ.
Vijaya Karnataka Web the car collided with a lorry killing a woman and three serious in maddur
ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮಹಿಳೆ ಸಾವು, ಮೂವರು ಗಂಭೀರ


ಕಾರಿನಲ್ಲಿದ್ದ ದೀಪಾ (35) ಮೃತೆ. ಪತಿ ಚಂದ್ರಹಾಸ್‌(40) ಪುತ್ರ ಯುವತ್‌(3) ಹಾಗೂ ಜಯಲಕ್ಷ್ಮಿ(50) ಎಂಬುವರು ಗಾಯಗೊಂಡಿದ್ದು, ಇವರು ನೆರೆ ರಾಜ್ಯದ ಆಂಧ್ರಪ್ರದೇಶದ ತಿರುಪತಿ ಟೌನ್‌ ನಿವಾಸಿಗಳೆಂದು ತಿಳಿದುಬಂದಿದೆ.

ಒಂದೇ ಕುಟುಂಬದವರಾದ ಇವರು ತಿರುಪತಿಯಿಂದ ಮೈಸೂರಿಗೆ ಪ್ರವಾಸಕ್ಕೆಂದು ಆಗಮಿಸುತ್ತಿದ್ದ ವೇಳೆ ಶುಕ್ರವಾರ ಮುಂಜಾನೆ 5ರ ಸಮಯದಲ್ಲಿ ಮೈಸೂರು, ಬೆಂಗಳೂರು ಹೆದ್ದಾರಿಯ ಬದಿಯ ಎಪಿಎಂಸಿ ಎಳನೀರು ಮಾರುಕಟ್ಟೆ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ದೀಪಾ ಅವರ ಶವವನ್ನು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಒಪ್ಪಿಸಿದ್ದು, ಗಾಯಾಳುಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪಟ್ಟಣದ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ