ಆ್ಯಪ್ನಗರ

ಕಟ್ಟಡ ಕೂಲಿಕಾರರ ಬದುಕು ಸುಂದರವಾಗಲಿ

ಕಟ್ಟಡ ಕೂಲಿಕಾರರ ಬದುಕು ಸುಂದರ ಭವನಗಳಂತಾಗಬೇಕು ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.

Vijaya Karnataka 1 Jan 2018, 5:15 am
ಶ್ರೀರಂಗಪಟ್ಟಣ: ಕಟ್ಟಡ ಕೂಲಿಕಾರರ ಬದುಕು ಸುಂದರ ಭವನಗಳಂತಾಗಬೇಕು ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.
Vijaya Karnataka Web the life of the building laborers is beautiful
ಕಟ್ಟಡ ಕೂಲಿಕಾರರ ಬದುಕು ಸುಂದರವಾಗಲಿ


ಪಟ್ಟಣದ ಸುಬ್ರಮಣ್ಯ ಕಲ್ಯಾಣ ಮಂಟಪದಲ್ಲಿ ಭಾನುವಾರ ಭಾರತೀಯ ಮಜ್ದೂರ್ ಕಟ್ಟಡ ಕಾರ್ಮಿಕರ ಸಂಘ ಏರ್ಪಡಿಸಿದ್ದ ವಿಶ್ವಕರ್ಮ ಜಯಂತಿ ಕಾರ‌್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಟ್ಟಡ ಕಾರ್ಮಿಕರಿಗಾಗಿ ಸರಕಾರ ಆರೋಗ್ಯ ವಿಮೆ, ಶೈಕ್ಷಣಿಕ ಸೌಲಭ್ಯ ಸೇರಿದಂತೆ ನಾನಾ ಸವಲತ್ತುಗಳನ್ನು ನೀಡಿದೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಂಘದ ಪದಾಧಿಕಾರಿಗಳು ಯಾವುದೇ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಸಂಘದ ಎಲ್ಲಾ ಸದಸ್ಯರಿಗೆ ಸವಲತ್ತು ಕೊಡಿಸುವಲ್ಲಿ ಪ್ರಾಮಾಣಿಕ ಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

ಕಟ್ಟಡ ಕಾರ್ಮಿಕರ ಸಂಘದ ಭವನ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಮನವಿ ನೀಡಿದೆ. ಮುಂದಿನ ದಿನಗಳಲ್ಲಿ ನಿವೇಶನ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಟಿ.ಶ್ರೀಧರ್ ಕಾರ‌್ಯಕ್ರಮ ಉದ್ಘಾಟಿಸಿದರು. ಬಿಎಂಎಸ್ ಸಂಘದ ತಾಲೂಕು ಅಧ್ಯಕ್ಷ ಜಗದೀಶ್, ಮುಖಂಡ ವಾಸು, ಸಂಘದ ಕಾರ್ಯದರ್ಶಿ ಸೋಮಶೇಖರ್ ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ದೇವರಾಜು, ಪುರಸಭಾ ಸದಸ್ಯರಾದ ಗೌರಮ್ಮ, ಜಿ.ಉಮಾಶಂಕರ್, ಬಿಜೆಪಿ ಕಾರ್ಯದರ್ಶಿ ಮಂಜುನಾಥ್, ರೈತಸಂಘದ ಎಂ.ವಿ.ಕಷ್ಣ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ