ಆ್ಯಪ್ನಗರ

​ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಲಿ

ಮಂಡ್ಯ: ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದ್ದು, ಇವುಗಳನ್ನು ತಡಗಟ್ಟುವ ನಿಟ್ಟಿನಲ್ಲಿ ಸರಕಾರ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸುವ ಕಾನೂನು ಜಾರಿಗೊಳಿಸಬೇಕೆಂದು ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ವೆಂಕಟೇಶ್‌ ಅಭಿಪ್ರಾಯಪಟ್ಟರು.

Vijaya Karnataka 27 Aug 2018, 5:00 am
‘ಅಪ್ರಾಪ್ತರ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯಗಳು’ ಉಪನ್ಯಾಸ
Vijaya Karnataka Web the rapists should be punished
​ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಲಿ


ಮಂಡ್ಯ: ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದ್ದು, ಇವುಗಳನ್ನು ತಡಗಟ್ಟುವ ನಿಟ್ಟಿನಲ್ಲಿ ಸರಕಾರ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂಗೊಳಿಸುವ ಕಾನೂನು ಜಾರಿಗೊಳಿಸಬೇಕೆಂದು ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ವೆಂಕಟೇಶ್‌ ಅಭಿಪ್ರಾಯಪಟ್ಟರು.

ಮದ್ದೂರು ತಾಲೂಕಿನ ಭಾರತಿನಗರದ ಪ್ರಾರ್ಥನಾ ಇಂಟರ್‌ ನ್ಯಾಷನಲ್‌ ಸ್ಕೂಲ್‌ನಲ್ಲಿ ಆಯೋಜಿಸಿದ್ದ 'ಅಪ್ರಾಪ್ತರ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯಗಳು' ವಿಷಯ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಹೆಚ್ಚು ಲೈಂಗಿಕ ದೌರ್ಜನ್ಯಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದರು.

ಸಂಪನ್ಮೂಲ ವ್ಯಕ್ತಿ ಗೀತಾ ಮಾತನಾಡಿ, ಅಪ್ರಾಪ್ತರ ಅಂಗಗಳನ್ನು ಮುಟ್ಟುವ ಹಕ್ಕು ತಾಯಂದಿರಿಗೆ ಮಾತ್ರ ಇರುತ್ತದೆ. ಒಳ್ಳೆಯ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶಗಳಿದ್ದು, ಬೇರೆಯವರು ಮುಟ್ಟುವ ಸ್ಪರ್ಶಗಳ ಬಗ್ಗೆ ಮಕ್ಕಳು ಹೆಚ್ಚು ಜಾಗೃತವಾಗಿರಬೇಕು ಎಂದರು.

ಪರಿಚಿತರು ಮತ್ತು ಬಂಧುಗಳು ತೋರಿಸುವ ನಕಲಿ ಪ್ರೀತಿಯ ಅರಿಲ್ಲದೆ ಮಕ್ಕಳು ವಂಚನೆಗೊಳಾಗಾಗುತಿದ್ದಾರೆ. ಮುಗ್ದ ಮಕ್ಕಳ ಅಸಹಾಯಕತೆ ಬಳಸಿ ಕೊಂಡು ಅವರಿಗೆ ಆಮೀಷಗಳನ್ನು ಒಡ್ಡಿ ಅವರನ್ನು ಲೈಂಗಿಕವಾಗಿ ಬಳಸಿ ಕೊಳ್ಳುತಿದ್ದಾರೆ. ಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳ ಬಗ್ಗೆ ಸರಕಾರ ಹೊಸ ಕಾನೂನು ರೂಪಿಸಿದ್ದರು ಸಹ ಅಪ್ರಾಪ್ತರ ಮೇಲೆ ದೌರ್ಜನ್ಯಗಳು ನಿಂತಿಲ್ಲ. ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ತಾಯಂದಿರ ಪಾತ್ರ ಬಹಳ ಮುಖ್ಯ ಈ ಬಗ್ಗೆ ಎಚ್ಚರವಸಬೇಕು ಎಂದು ತಿಳಿಸಿದರು.

ಸಂಸ್ಥೆಯ ಕಾರ‍್ಯದರ್ಶಿ ಸೌಮ್ಯ ಕೃಷ್ಣ ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ರವಿ ಸಾವಂದಿಪುರ, ಮುಖ್ಯ ಶಿಕ್ಷಕಿ ಎ.ಪಿ.ಅನುಪಮ ಕೆಂಪರಾಜು, ಶಿಕ್ಷಕರಾದ ರಾಧಾ, ಉಮಾ, ರಕ್ಷೀತಾ, ಕೆ.ಎನ್‌.ಅನುಪಮ, ಭಾಗ್ಯ, ಸಹನಾ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ