ಆ್ಯಪ್ನಗರ

ಉಪ್ಪಾರ ಸಮುದಾಯದ ಮೌನ ಪ್ರತಿಭಟನೆ

ಉಪ್ಪಾರ ಜನಾಂಗವನ್ನು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಮಂಡ್ಯ ಜಿಲ್ಲಾ ಉಪ್ಪಾರ ಸಮುದಾಯ ಸದಸ್ಯರು ನಗರದಲ್ಲಿ ಸೋಮವಾರ ಮೌನ ಮೆರವಣಿಗೆ ಮೂಲಕ ಪ್ರತಿಭಟಿಸಿದರು.

Vijaya Karnataka 30 Jan 2018, 5:15 am
ಮಂಡ್ಯ: ಉಪ್ಪಾರ ಜನಾಂಗವನ್ನು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿಸುವಂತೆ ಆಗ್ರಹಿಸಿ ಮಂಡ್ಯ ಜಿಲ್ಲಾ ಉಪ್ಪಾರ ಸಮುದಾಯ ಸದಸ್ಯರು ನಗರದಲ್ಲಿ ಸೋಮವಾರ ಮೌನ ಮೆರವಣಿಗೆ ಮೂಲಕ ಪ್ರತಿಭಟಿಸಿದರು.
Vijaya Karnataka Web the silence protests of the uppara community
ಉಪ್ಪಾರ ಸಮುದಾಯದ ಮೌನ ಪ್ರತಿಭಟನೆ


ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜಮಾವಣೆ ಗೊಂಡ ಮೂಲಕ ಪ್ರತಿಭಟನಾಕಾರರು, ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗೆ ಆಗಮಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಸುಮಾರು 40 ಲಕ್ಷ ಜನಸಂಖ್ಯೆಯನ್ನು ಉಪ್ಪಾರ ಸಮುದಾ ಯ ಹೊಂದಿದೆ. ಮಂಡ್ಯ ಜಿಲ್ಲೆಯಲ್ಲೇ 30-35 ಸಾವಿರ ಜನರಿದ್ದಾರೆ. ಆದರೆ, ಈ ಸಮುದಾಯದ ಶೇ.80ರಷ್ಟು ಜನರು ಅವಿದ್ಯಾವಂತ ರಾಗಿದ್ದು, ಮೂಲಸೌಕರ್ಯಗಳಿಂದ ವಂಚಿತರಾಗಿ ದ್ದಾರೆ ಎಂದು ಸಮಸ್ಯೆ ವಿವರಿಸಿದರು.

ಬಡತನದಿಂದ ಜೀವನ ಸಾಗಿಸುತ್ತಿ ರುವ ತಾವು ಸಣ್ಣಪುಟ್ಟ ಕೆಲಸಗಳು ಹಾಗೂ ಕೂಲಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಮುಂದಿನ ಪೀಳಿಗೆಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯ ಶ್ರೇಯೋಭಿವೃದ್ಧಿಗಾಗಿ ಮೀಸಲಾತಿ ಅಗತ್ಯ ವಾಗಿದೆ. ಹೀಗಾಗಿ ಉಪ್ಪಾರ ಸಮುದಾ ಯವನ್ನು ಎಸ್ಟಿ ವರ್ಗಕ್ಕೆ ಸೇರಿದರೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಸೌಲಭ್ಯ ಸಿಗಲಿದೆ ಎಂದು ಹೇಳಿದರು.

ಸಮುದಾಯದ ಮುಖಂಡರಾದ ಸಿ.ಎಂಮಹದೇವಯ್ಯ, ಸಿದ್ದಯ್ಯ, ಟಿ.ಸತೀಶ್, ಸಿದ್ದರಾಜು, ಮಹೇಂದ್ರ, ನಾಗರತ್ನ, ಸತೀಶ್, ಪುಟ್ಟಸ್ವಾಮಿ, ಉಮೇಶ್ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ