ಆ್ಯಪ್ನಗರ

ಬಲಮುರಿಯಲ್ಲಿ ಯುವಕ ನೀರುಪಾಲು

ತಾಲೂಕಿನ ಪ್ರಮುಖ ಪ್ರವಾಸಿ ತಾಣ ಬಲಮುರಿ ಕಾವೇರಿ ನದಿಯಲ್ಲಿ ಈಜಲು ನೀರಿಗಿಳಿದಿದ್ದ ಯುವಕ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

Vijaya Karnataka 1 Jan 2018, 5:15 am
ಶ್ರೀರಂಗಪಟ್ಟಣ: ತಾಲೂಕಿನ ಪ್ರಮುಖ ಪ್ರವಾಸಿ ತಾಣ ಬಲಮುರಿ ಕಾವೇರಿ ನದಿಯಲ್ಲಿ ಈಜಲು ನೀರಿಗಿಳಿದಿದ್ದ ಯುವಕ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
Vijaya Karnataka Web the young man is in the right direction
ಬಲಮುರಿಯಲ್ಲಿ ಯುವಕ ನೀರುಪಾಲು


ಕೇರಳ ಮೂಲದ ನಿವಾಸಿ ಸೋಹೆಲ್ ಅಹಮದ್(19) ಮೃತ ಯುವಕ. ಮಂಗಳೂರಿನ ಶ್ರೀನಿವಾಸ ಬ್ಯಾಚುಲರ್ ಆಫ್ ಫಾರ್ಮಸಿ ಕಾಲೇಜಿನಲ್ಲಿ ಓದುತ್ತಿದ್ದ ಈತ 4 ಮಂದಿ ಸ್ನೇಹಿತರೊಡನೆ ವಿಹಾರಕ್ಕೆ ಆಗಮಿಸಿದ್ದ ವೇಳೆ ಕಾವೇರಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಲಮುರಿಯ ಕಾವೇರಿ ನದಿ ನೀರಿನಲ್ಲಿ ಮುಳುಗಿ ಪ್ರವಾಸಿಗರು ಮೃತಪಡುವುದನ್ನು ತಪ್ಪಿಸುವ ಉದ್ದೇಶದಿಂದ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರುವ ಲಾಳಾಕಾರದ ಒಡ್ಡಿನ ಮೇಲೆ ಸಂಚರಿಸದಂತೆ ಜಿಲ್ಲಾ ಪೊಲೀಸ್ ಇಲಾಖೆ ನಿರ್ಬಧ ಹೇರಿದೆ. ಒಡ್ಡಿನ ಮುಂಭಾಗ ಗೇಟುಗಳನ್ನು ನಿರ್ಮಿಸಿ ಬೀಗ ಜಡಿಯಲಾಗಿದೆ. ನಿಷೇಧಾಜ್ಞೆಯ ನಡುವೆಯೂ ಕಾವೇರಿ ನದಿ ಎಡಭಾಗಕ್ಕೆ ಹೋಗಿ ಪೊಲೀಸರ ಕಣ್ತಪ್ಪಿಸಿ ನದಿ ನೀರಿಗಿಳಿದಿರುವ ಯುವಕ ಮುಳುಗಿ ಮೃತಪಟ್ಟಿದ್ದಾನೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ