ಮಂಡ್ಯ: ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಯುವಕನೊಬ್ಬ ಮಚ್ಚು ಹಿಡಿದು ರಸ್ತೆಯಲ್ಲಿ ಓಡಾಡುತ್ತಾ ಸಾರ್ವಜನಿಕರಿಗೆ ಭಯವುಂಟು ಮಾಡಿದ್ದಲ್ಲದೆ ಕೆಎಸ್ಆರ್ಟಿಸಿ ಬಸ್ಗೆ ಕಲ್ಲು ತೂರಿದ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮಂಡ್ಯದ ನಗರದ ನಿವಾಸಿ ಶಿವಕುಮಾರ್, ರಘು ಹಾಗೂ ಇತರರ ಬೈಕ್ನಲ್ಲಿ ಸಂಚರಿಸುತ್ತಾ ಸಾರ್ವಜನಿಕರಿಗೆ ಮಚ್ಚು ತೋರಿಸಿ ಬೆದರಿಸುತ್ತಿದ್ದರು. ಗೋಪಾಲಪುರ ಗ್ರಾಮಕ್ಕೆ ಬಂದ ಸಮಯದಲ್ಲಿ ಮಂಡ್ಯ ಕಡೆಯಿಂದ ಕೆಎಸ್ಆರ್ಟಿಸಿ ಬಸ್ ಬಂದಿದೆ. ಆದರೆ, ರಸ್ತೆಯಲ್ಲೇ ಬೈಕ್ ನಿಲ್ಲಿಸಿ ಮಚ್ಚು ಹಿಡಿದು ವ್ಯಕ್ತಿಯೊಬ್ಬ ರಸ್ತೆ ತುಂಬ ಓಡಾಡಿದ್ದಾನೆ.
ಯುವಕರ ಗುಂಪಿನಿಂದ ಒಬ್ಬ ಬಸ್ ಮೇಲೆ ಕಲ್ಲು ತೂರಿದ್ದು, ಇದರಿಂದ ಬಸ್ನ ಕಿಟಕಿ ಗ್ಲಾಸ್ ಪುಡಿಪುಡಿಯಾಗಿದೆ. ಈ ದೃಶ್ಯವನ್ನು ಬಸ್ನಲ್ಲಿದ್ದ ವ್ಯಕ್ತಿಯೊಬ್ಬರು ಮೊಬೈಲ್ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿ, ಸಾಮಾಜಿಕ ಜಾಲತಾಣಗಳಿಗೆ ಹಾಕಿದ್ದಾರೆ. ಯುವಕರ ರಂಪಾಟ ಕಂಡು ವಾಹನ ಚಾಲಕರು ರಸ್ತೆಯಲ್ಲೇ ವಾಹನ ನಿಲ್ಲಿಸಿದ್ದರು.
ಘಟನೆ ಹಿನ್ನೆಲೆಯಲ್ಲಿ ಬಸ್ ಚಾಲಕ ಮಹೇಶ್ ಅವರು ನೀಡಿದ ದೂರಿನ ಮೇರೆಗೆ ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರನ್ನು ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.