ಆ್ಯಪ್ನಗರ

ಎಮ್ಮೆ ತೊಳೆಯಲು ಹೋದ ಯುವಕ ನೀರು ಪಾಲು

ಹಲಗೂರು: ಶಿಂಷಾ ನದಿಯಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ.

Vijaya Karnataka 18 Sep 2018, 5:00 am
ಹಲಗೂರು: ಶಿಂಷಾ ನದಿಯಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ.
Vijaya Karnataka Web the young man who went to wash the buffalo was a part of the water
ಎಮ್ಮೆ ತೊಳೆಯಲು ಹೋದ ಯುವಕ ನೀರು ಪಾಲು


ಹಲಗೂರು ಹೋಬಳಿಯ ಬೆಳತ್ತೂರು ಗ್ರಾಮದ ನಿವಾಸಿ, ನಾಗೇಗೌಡರ ಮಗ ಲೋಕೇಶ್‌(19) ಮೃತ. ಈತ ಗ್ರಾಮದ ಪಕ್ಕದಲ್ಲಿ ಹರಿಯುವ ಶಿಂಷಾ ನದಿಯಲ್ಲಿ ಭಾನುವಾರ ಸಮಜೆ ಎಮ್ಮೆಗಳನ್ನು ತೊಳೆಯುತ್ತಿರುವಾಗ ನೀರಿನ ಸೆಳೆತಕ್ಕೆ ಸಿಲುಕಿ ನದಿಯಲ್ಲಿ ಮುಳುಗಿ ಅಸುನೀಗಿದ್ದಾನೆ. ಕಳೆದ ಎರಡು ದಿನಗಳಿಂದ ಈ ಭಾಗದಲ್ಲಿ ಮಳೆಯಾಗಿದ್ದು, ನದಿಯಲ್ಲಿ ನಿರಿನ ಪ್ರಮಾಣ ಹೆಚ್ಚಾಗಿ ಹರಿಯುತ್ತಿದ್ದರಿಂದ ಸೋಮವಾರ ಬೆಳಗ್ಗೆ ಶವ ದೊರೆತ್ತಿದೆ. ಹಲಗೂರು ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದ್ದು, ಯತ್ತಂಬಾಡಿ ಗ್ರಾಮದ ಸರಕಾರಿ ಆರೋಗ್ಯ ಕೇಂದ್ರದಲ್ಲಿ ಶವ ಪರೀಕ್ಷೆ ನೆಡಸಿ ವಾರಸುದಾರರಿಗೆ ನೀಡಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ